AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on:May 24, 2024 | 12:31 PM

ಬೆಂಗಳೂರಿನ ಜೆಪಿ ನಗರದ ಬೀದಿಗಳಲ್ಲಿ ಸ್ಪೈಡರ್ ಮ್ಯಾನ್ ವೇಷ ತೊಟ್ಟ ವ್ಯಕ್ತಿಯೊಬ್ಬರು ಮೋಟಾರ್ ಬೈಕ್‌ನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಯೂಟ್ಯೂಬರ್‌ ಜೋಡಿಯೊಂದು ಸ್ಪೈಡರ್ ಮ್ಯಾನ್ ವೇಷ ಹಾಕಿಕೊಂಡು ಬೈಕ್‌ ಮೇಲೆ ಜಾಲಿ ರೈಡ್ ಹೊರಟ ವಿಡಿಯೊ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮದ ಉಲ್ಲಂಘನೆಯ ಅಡಿಯಲ್ಲಿ ಈ ಜೋಡಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಬೆಂಗಳೂರು ಸ್ಪೈಡರ್ ಮ್ಯಾನ್ ವಿಡಿಯೋವನ್ನು @vishalanandtwts ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಜೆಪಿ ನಗರದಲ್ಲಿ ಸ್ಪೈಡರ್ ಮ್ಯಾನ್ ಎಂಬ ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಒಬ್ಬರು ಬಳಕೆದಾರರು ” ತಲೆಗೆ ಹೆಲ್ಮೆಟ್​​, ಕಾಲಿಗೆ ಚಪ್ಪಲಿ ಧರಿಸಿದ ಸ್ಪೈಡರ್ ಮ್ಯಾನ್ ನ ಎಂದಾದರೂ ನೋಡಿದ್ದೀರಾ” ಎಂದು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ” ಬೀದಿಗಳಲ್ಲಿ ಸೂಪರ್ ಹೀರೋಗಳು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Fri, 24 May 24

ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್