AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on:May 24, 2024 | 12:31 PM

Share

ಬೆಂಗಳೂರಿನ ಜೆಪಿ ನಗರದ ಬೀದಿಗಳಲ್ಲಿ ಸ್ಪೈಡರ್ ಮ್ಯಾನ್ ವೇಷ ತೊಟ್ಟ ವ್ಯಕ್ತಿಯೊಬ್ಬರು ಮೋಟಾರ್ ಬೈಕ್‌ನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಯೂಟ್ಯೂಬರ್‌ ಜೋಡಿಯೊಂದು ಸ್ಪೈಡರ್ ಮ್ಯಾನ್ ವೇಷ ಹಾಕಿಕೊಂಡು ಬೈಕ್‌ ಮೇಲೆ ಜಾಲಿ ರೈಡ್ ಹೊರಟ ವಿಡಿಯೊ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮದ ಉಲ್ಲಂಘನೆಯ ಅಡಿಯಲ್ಲಿ ಈ ಜೋಡಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಬೆಂಗಳೂರು ಸ್ಪೈಡರ್ ಮ್ಯಾನ್ ವಿಡಿಯೋವನ್ನು @vishalanandtwts ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಜೆಪಿ ನಗರದಲ್ಲಿ ಸ್ಪೈಡರ್ ಮ್ಯಾನ್ ಎಂಬ ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಒಬ್ಬರು ಬಳಕೆದಾರರು ” ತಲೆಗೆ ಹೆಲ್ಮೆಟ್​​, ಕಾಲಿಗೆ ಚಪ್ಪಲಿ ಧರಿಸಿದ ಸ್ಪೈಡರ್ ಮ್ಯಾನ್ ನ ಎಂದಾದರೂ ನೋಡಿದ್ದೀರಾ” ಎಂದು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ” ಬೀದಿಗಳಲ್ಲಿ ಸೂಪರ್ ಹೀರೋಗಳು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Fri, 24 May 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು