AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಲು ಹೋಗಿ ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿ, ಕಳ್ಳ ಎಂದ ಮನೆಯವರು

ಬೆಂಗಳೂರಿನಲ್ಲಿ ನಾಯಿ ಕಡಿತ ಹೆಚ್ಚಾಗಿದೆ. 2024ರಲ್ಲಿ ಒಟ್ಟಾರೆಯಾಗಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿದೆ. ಇದೀಗ ನಾಯಿಗಳ ದಾಳಿಗೆ ಸಂಬಂಧಿಸಿದಂತೆ ಉತ್ತರ ಭಾರತದ ವ್ಯಕ್ತಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಂಡ ಬಗ್ಗೆ ಹೇಳಿಕೊಂಡಿದ್ದಾರೆ. ದಾಳಿಯಿಂದ ತಪ್ಪಿಸಲು ಹೋಗಿ, ಮನೆಯೊಂದರ ಕಾಂಪೌಂಡ್ ಒಳಗೆ ಅಕ್ರಮವಾಗಿ ಹಾರಿದ್ದಾರೆ. ಆದರೆ ಇದನ್ನು ಮನೆ ನಿವಾಸಿಗಳು ತಪ್ಪಾಗಿ ತಿಳಿದುಕೊಂಡ ಕಳ್ಳ ಎಂದು ದೂರಿದ್ದಾರೆ.

Viral: ಬೆಂಗಳೂರಿನಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಲು ಹೋಗಿ ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿ, ಕಳ್ಳ ಎಂದ ಮನೆಯವರು
ಸಾಣದರ್ಭಿಕ ಚಿತ್ರ
ಸಾಯಿನಂದಾ
|

Updated on: Aug 12, 2025 | 3:50 PM

Share

ಬೆಂಗಳೂರು, ಆಗಸ್ಟ್‌ 12 :ಬೆಂಗಳೂರಿನಲ್ಲಿ ನಾಯಿಗಳ ಕಾಟ (dog attack in Bengaluru) ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ. ಇದೀಗ ಇಲ್ಲೊಂದು ಘಟನೆಯ ಬಗ್ಗೆ ಸಾಫ್ಟ್‌ವೇರ್ ಇಂಜಿನಿಯರ್ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ಒಂದು ಭಯಾನಕ ಘಟನೆಯೂ ಇದಾಗಿದ್ದು, ಬೀದಿ ನಾಯಿಗಳ ಗುಂಪೊಂದು ಈ ವ್ಯಕ್ತಿಯನ್ನು ಅಟ್ಟಿಸಿಕೊಂಡು ಹೋಗಿದೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಈ ವ್ಯಕ್ತಿ ಮನೆಯೊಂದರ ಕಾಂಪೌಂಡ್​​​ ಹಾರಿದ್ದಾರೆ. ಇದೀಗ ಆ ಮನೆಯ ಮಾಲೀಕರು ಇವರನ್ನು ಕಳ್ಳ ಎಂದು ದೂರಿದ್ದಾರೆ.

ಉತ್ತರ ಭಾರತದ ಈ ವ್ಯಕ್ತಿ ಪ್ರಸ್ತುತ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಕೆಲಸ ಮುಗಿಸಿ ತಡರಾತ್ರಿ ಮನೆಗೆ ಬರಬೇಕಾದರೆ ನಾಯಿಗಳು ಇವರನ್ನು ಬೆನ್ನಟ್ಟಿದೆ. ನಿಲ್ಲಿಸಿದ ಕಾರಿನ ಬಳಿ ಇದ್ದ ನಾಯಿಗಳ ಗುಂಪು ದಾಳಿ ಮಾಡಲು ಮುಂದಾಗಿತ್ತು. ಈ ವೇಳೆ ಓಡಲು ಶುರು ಮಾಡಿ, ಅವುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಅದೇ ಬೀದಿಯಲ್ಲಿದ್ದ ಮನೆಯೊಂದರ ಕಾಂಪೌಂಡ್ ಹಾರಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಅದು ನನಗೆ ಅನಿವಾರ್ಯವಾಗಿತ್ತು. ಈ ವೇಳೆ ಮೂವರು ನಿವಾಸಿಗಳು, 60ರ ಹರೆಯದ ಒಬ್ಬ ವ್ಯಕ್ತಿ ಮನೆಯಿಂದ ಹೊರಗೆ ಬಂದರು. ನನ್ನನ್ನೂ ಕಳ್ಳ ಎಂದು ಹೇಳಿದ್ದಾರೆ. ಈ ವೇಳೆ ನಾನು ಕ್ಷಮೆಯಾಚಿಸಿ, ನಾನು ಕಳ್ಳ ಅಲ್ಲ, ನಾಯಿಗಳು ಓಡಿಸಿಕೊಂಡು ಬಂದಿದೆ ಎಂದು ಎಷ್ಟೇ ಹೇಳಿದ್ರೂ ನಂಬುವ ಸ್ಥಿತಿಯಲ್ಲಿ ಅವರು ಇರಲಿಲ್ಲ.

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

Viral Post

ಇದನ್ನೂ ಓದಿ
Image
ರಸ್ತೆ ಕಾಮಗಾರಿ ವಿಳಂಬ, ಶಾಲೆಗೆ ಹೋಗಲು ಬೆಂಗಳೂರಿನ ಶಾಲಾ ಮಕ್ಕಳ ಪರದಾಟ
Image
ಹಬ್ಬದ ದಿನ ಟ್ರಾಫಿಕ್ ರಹಿತ ಬೆಂಗಳೂರನ್ನು ನೋಡಿ ಖುಷಿ ಪಟ್ಟ ವ್ಯಕ್ತಿ
Image
ಮೂಲ ಸೌಕರ್ಯಕ್ಕಾಗಿ ಬೆಂಗಳೂರಿನ ನಾಗರಿಕರ ವಿಶಿಷ್ಟ ಪ್ರತಿಭಟನೆ
Image
ಬೆಂಗಳೂರಿನ ಸ್ನೇಹಿತೆ ಜತೆಗೆ ಸೇರಿ ಕನ್ನಡ ಕವಿತೆ ಹಾಡಿದ ರಷ್ಯಾದ ಹುಡುಗಿ

ನಿನ್ನನ್ನು ಯಾಕೆ ನಾಯಿಗಳು ಅಟ್ಟಿಸಿಕೊಂಡು ಬಂತು, ಅದಕ್ಕೆ ನಮ್ಮ ಮನೆಯ ಕಾಂಪೌಂಡ್ ಹಾರುವುದಾ? ಇದನ್ನು ನಾವು ನಂಬುವುದಿಲ್ಲ ಎಂದು ಗದರಿದ್ದಾರೆ ಎಂದು ರೆಡ್ಡಿಟ್‌ನಲ್ಲಿ ವಿವರಿಸಿದ್ದಾರೆ. ನಾನು ಯಾರು, ನಿಜಾಂಶ ಏನು ಎಂಬುದನ್ನು ಅವರಿಗೆ ವಿವರಿಸಿದೆ. ಸಾಕ್ಷಿಗಾಗಿ ಪ್ಯಾನ್, ಆಧಾರ್ ನಂಬರ್, ವಿಳಾಸ ಮತನ್ನ ಕಂಪನಿಯ ಪ್ರೊಫೈಲ್ ನೀಡಿದ್ರು ಅವರ ನಂಬಲಿಲ್ಲ. ಕೊನೆಗೆ ನನ್ನ ಫೋನ್​​ ಕಿತ್ತುಎಲ್ಲವನ್ನೂ ಪರಿಶೀಲನೆ ಮಾಡಿದ ನಂತರ ಮರುದಿನ ಬೆಳಿಗ್ಗೆ ಫೋನ್​​​ ವಾಪಸ್ಸು ನೀಡಿದ್ದಾರೆ. ಒಮ್ಮೆ ನಿಮ್ಮ ಮನೆಯ ಸಿಸಿಟಿವಿ ನೋಡಿ, ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ಎಂದರು, ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಸಾಫ್ಟ್‌ವೇರ್ ಇಂಜಿನಿಯರ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೂ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ: ಈ ವರ್ಷ 26 ಮಂದಿ ಸಾವು

ಕೊನೆಗೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ನೆರೆಹೊರೆಯವರಿಗೆ ಹೇಳಲಾಯಿತು. ನಂತರ ನಿಜಾಂಶ ತಿಳಿದು, ಫೋನ್​​​ ವಾಪಸ್ಸು ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯನ್ನು ಎಂದಿಗೂ ನಾನು ಎದುರಿಸಿಲ್ಲ. ಜೀವ ರಕ್ಷಣೆ ಮಾಡಲು ಹೀಗೆ ಮಾಡಿದ್ರೆ, ಒಂದು ಸ್ವಲ್ಪವೂ ಕರುಣೆ ತೋರದೆ, ನನ್ನ ಜತೆಗೆ ಹೀಗೆ ನಡೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ರೆಡ್ಡಿಟ್‌ ಬಳಕೆದಾರರು ಪ್ರತಿಕ್ರಿಯಿಸಿದ್ದು, ಒಬ್ಬ ಬಳಕೆದಾರ ಅಪಾಯವನ್ನು ತಪ್ಪಿಸಲು ಖಾಸಗಿ ಆಸ್ತಿಗೆ ಪ್ರವೇಶಿಸಲು ಅನುಮತಿ ನೀಡುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 81 ಮತ್ತು 97 ಅನ್ನು ಉಲ್ಲೇಖಿಸಿ, ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!