AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನವಜೋಡಿಗೆ ಆಶೀರ್ವಾದ ಮಾಡಲು ಮದ್ವೆ ಮಂಟಪಕ್ಕೆ ಬಂದ ತಿರುಪತಿ ತಿಮ್ಮಪ್ಪ

ಈಗಿನ ಕಾಲದ ಮದುವೆಯೇ ಹಾಗೆ, ಅದ್ದೂರಿತನದಿಂದ ಕೂಡಿರುತ್ತದೆ. ಹೊಸದೇನ್ನಾದರೂ ಪ್ರಯತ್ನಿಸಿ ವಿಭಿನ್ನವಾಗಿ ಕಾಣಲು ಇಷ್ಟ ಪಡುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಬೆಂಗಳೂರಿನಲ್ಲಿ ನಡೆದ ಮದ್ವೆಯಲ್ಲಿ ನವಜೋಡಿಗೆ ಆಶೀರ್ವಾದ ಮಾಡಲು ದೇವರು ಪ್ರತ್ಯಕ್ಷವಾಗಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ನವಜೋಡಿಗೆ ಆಶೀರ್ವಾದ ಮಾಡಲು ಮದ್ವೆ ಮಂಟಪಕ್ಕೆ ಬಂದ ತಿರುಪತಿ ತಿಮ್ಮಪ್ಪ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 14, 2025 | 2:47 PM

Share

ಬೆಂಗಳೂರು, ನವೆಂಬರ್ 14: ಸಾಲ ಮಾಡಿಯಾದ್ರು ತುಪ್ಪ ತಿನ್ನು ಎನ್ನುವ ಮಾತಿದೆ. ಈ ಮಾತು ಮದ್ವೆ ವಿಷ್ಯದಲ್ಲಿ ಸತ್ಯವೆನಿಸುತ್ತದೆ. ಕೈಯಲ್ಲಿ ಕಾಸಿಲ್ಲ ಅಂದ್ರು ಸಾಲ ಮಾಡಿ ಅದ್ದೂರಿಯಾಗಿ ಮದುವೆ (marriage) ಮಾಡುವುದನ್ನು ನೀವು ನೋಡಿರುತ್ತೀರಿ. ದುಡ್ಡು ಎಷ್ಟೇ ಆದ್ರೂ ವಿಭಿನ್ನವಾಗಿ ಮದುವೆ ಮಾಡಿಕೊಳ್ಳಲು ಬಯಸುತ್ತಾರೆ. ಸಾಮಾನ್ಯವಾಗಿ ಮದ್ವೆ ಆದ್ಮೇಲೆ ಗುರು ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದೇನು ಸಹಜ. ಆದರೆ ಇಲ್ಲೊಂದು ಕಡೆ ಹೊಸ ಜೀವನಕ್ಕೆ ಕಾಲಿಟ್ಟ ವಧು ವರರನ್ನು ಆಶೀರ್ವದಿಸಲು ಮದ್ವೆ ಮಂಟಪಕ್ಕೆ ತಿರುಪತಿ ತಿಮ್ಮಪ್ಪನೇ ಬಂದಿದ್ದಾನೆ. ಬೆಂಗಳೂರಿನಲ್ಲಿ (Bengaluru) ನಡೆದ ಮದುವೆಯಲ್ಲಿ ಈ ರೀತಿ ದೇವರನ್ನೇ ಧರೆಗೆ ಇಳಿಸುವ ಪ್ರಯತ್ನ ಮಾಡಲಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಮದ್ವೆ ಮಂಟಪದಲ್ಲೇ ನವಜೋಡಿಗೆ ದರ್ಶನ ಕೊಟ್ಟ ದೇವ್ರು

ನಮ್ಮ ಬೆಂಗಳೂರು (namma_bengaluru25) ಹೆಸರಿನ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಶೀರ್ಷಿಕೆಯಲ್ಲಿ ಡೈಲಾಗ್ ಇರುವುದನ್ನು ಕಾಣಬಹುದು. ನಾವು : ನಾವು ಸರಳ ಮದುವೆ ಬಯಸುತ್ತೇವೆ. ಪೋಷಕರು: ದೇವರ ಆಶೀರ್ವಾದದ ಜೊತೆ ಸರಳ ವಿವಾಹ. ಈ ಮಧ್ಯೆ ದೇವರ ಆಶೀರ್ವಾದ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು. ಇದೇ ವೇಳೆ ವೇದಿಕೆಯ ಮೇಲೆ ಹೊಗೆಯೂ ಆವರಿಸಿದೆ. ಇದಾದ ಕೆಲವೇ ಕ್ಷಣದಲ್ಲಿ ವೆಂಕಟೇಶ್ವರ ಸ್ವಾಮಿ  ವೇದಿಕೆಯತ್ತ ನಡೆದುಕೊಂಡು ಬರುತ್ತಾನೆ. ವೆಂಕಟೇಶ್ವರ ಸ್ವಾಮಿಯನ್ನು ನೋಡಿದ ವಧು ವರರು ಮಂಡಿಯೂರಿ ನಮಸ್ಕರಿಸಿದ್ದಾರೆ. ನವಜೋಡಿಯ ಬಳಿ ಬಂದ ತಿರುಪತಿ ತಿಮ್ಮಪ್ಪ ವಧು ವರರ ತಲೆಯ ಮೇಲೆ ಹೂವು ಹಾಕಿ ಆಶೀರ್ವಾದ ಮಾಡುವುದನ್ನು ನೋಡಬಹುದು.‌

ಇದನ್ನೂ ಓದಿ:ಸತತ ಒಂದು ವರ್ಷಗಳಿಂದ ಚಿಲ್ಲರೆ ಹಣ ಕೂಡಿಟ್ಟು ಹೆಂಡ್ತಿಗೆ ಗೋಲ್ಡ್ ಚೈನ್ ಗಿಫ್ಟ್ ನೀಡಿದ ವ್ಯಕ್ತಿ

ಈ ವಿಡಿಯೋ 16 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಲಕ್ಷ್ಮಿ ಅಮ್ಮ ಬೇರೆ ಫಂಕ್ಷನ್‌ಗೆ ಹೋಗಿರಬೇಕು ಎಂದಿದ್ದಾರೆ. ಇನ್ನೊಬ್ಬರು, ದಿನ ಕಳೆಯುತ್ತಿದ್ದಂತೆ ಮದುವೆಗಳು ಕ್ರೇಜಿಯಾಗ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ದೇವರಿಗೆ ಆಹ್ವಾನ ನೀಡಿದ್ದು ಯಾರು? ದೇವರು ಯಾರ ಕಡೆಯಿಂದ ಬಂದಿದ್ದು ಎಂದು ತಮಾಷೆಯಾಗಿಯೇ ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ