AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆ, ವರ್ಕ್ ಫ್ರಮ್ ಹೋಮ್ ಆಪ್ಷನ್ ಕೊಡಿ ಎಂದ ಮಹಿಳೆ

ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್. ಹೀಗೆನ್ನುತ್ತಿದ್ದಂತೆ ನೆನಪಿಗೆ ಬರುವುದೇ ಈ ಮಾಯನಗರಿ ಬೆಂಗಳೂರು. ಬೆಳಗ್ಗೆ ಹಾಗೂ ಸಂಜೆಯ ವೇಳೆ ರಸ್ತೆಯಲ್ಲಿ ನಿಂತಿರುವ ಸಾಲು ಸಾಲು ವಾಹನವನ್ನು ನೋಡಿದಾಗ ಈ ಟ್ರಾಫಿಕ್ ಗೆ ಯಾವಾಗ ಮುಕ್ತಿ ಸಿಗುತ್ತದೆ ಎಂದು ಮನಸ್ಸಿನಲ್ಲಿ ಅಂದುಕೊಳ್ಳುವವರೇ ಹೆಚ್ಚು. ಟ್ರಾಫಿಕ್ ನಿಂದ ಬೇಸೆತ್ತ ಮಹಿಳೆಯೊಬ್ಬರು ವರ್ಕ್ ಫರ್ಮ್ ಹೋಮ್ ಆಯ್ಕೆ ಕೊಟ್ಟರೆ ತುಂಬಾ ಒಳ್ಳೆಯದು ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

Viral: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆ, ವರ್ಕ್ ಫ್ರಮ್ ಹೋಮ್ ಆಪ್ಷನ್ ಕೊಡಿ ಎಂದ ಮಹಿಳೆ
ವೈರಲ್ ಪೋಸ್ಟ್Image Credit source: Twitter/Pinterest
ಸಾಯಿನಂದಾ
|

Updated on:Jul 25, 2025 | 10:51 AM

Share

ಬೆಂಗಳೂರು (Bengaluru) ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೌದು, ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್‌ ಆಗುವಂತಹ ಪೀಕ್‌ ಟೈಮ್‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಈ ವಾಹನ ಸವಾರರು ಸುಸ್ತಾಗಿ ಹೋಗುತ್ತಾರೆ. ಇದೀಗ ಇಲ್ಲೊಬ್ಬರು ಮಹಿಳೆಯು ಕೆಲಸಕ್ಕೆ ತೆರಳುವವರಿಗೆ ಈ ಟ್ರಾಫಿಕ್ ಜಾಮ್ (traffic jam) ದೊಡ್ಡ ಸಮಸ್ಯೆ, ಹೀಗಾಗಿ ಮನೆಯಲ್ಲಿ ಕುಳಿತು ಕೆಲಸ ಮಾಡುವ ಆಯ್ಕೆಯಿದ್ದರೆ ಒಳ್ಳೆಯದು, ಸಮಯ ಉಳಿಯುತ್ತದೆ, ಕಂಪನಿಗಳು ಈ ಬಗ್ಗೆ ಸ್ವಲ್ಪ ಗಮನ ಹರಿಸಬೇಕು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಕೂಡ ಈ ಮಹಿಳೆಯ ಮಾತನ್ನು ಒಪ್ಪಿಕೊಂಡಿದ್ದಾರೆ.

@Nyctophilic ಹೆಸರಿನ ಖಾತೆಯಲ್ಲಿ ಆಕಾಂಕ್ಷಾ ಎನ್ನುವ ಮಹಿಳೆಯು ಶೇರ್ ಮಾಡಲಾದ ಪೋಸ್ಟ್‌ನಲ್ಲಿ ಬೆಂಗಳೂರು ಹಾಗೂ ಮುಂಬೈನಂತಹ ನಗರಗಳಲ್ಲಿ ಕಂಪನಿಗಳು WFH (ವರ್ಕ್ ಫ್ರಮ್ ಹೋಮ್) ಅವಕಾಶ ನೀಡಬೇಕು. ಕಂಪನಿಗೆ ಹೋಗಿ ಕೆಲಸ ಮಾಡುವ ಅವಶ್ಯಕತೆ ಇಲ್ಲದ, ಮನೆಯಿಂದಲೇ ಕೆಲಸ ಮಾಡಬಹುದಾದ ಕೆಲಸಗಳಿಗೆ ಈ ರೀತಿ ಅವಕಾಶ ನೀಡುವುದು ಒಳ್ಳೆಯದು. ಟ್ರಾಫಿಕ್ ಜಾಮ್‌ ಹಾಗೂ ಕಳಪೆ ಮೂಲಸೌಕರ್ಯದೊಂದಿಗೆ ಕಚೇರಿ ತೆರಳುವುದು ಕಷ್ಟದಾಯಕ. ಈ ಸಮಸ್ಯೆಯಿಂದ ಸಮಯ, ಶಕ್ತಿ ಹಾಗೂ ಹಣವನ್ನು ಸುಮ್ಮನೆ ವೇಸ್ಟ್‌ ಮಾಡುವುದರಲ್ಲಿ ಅರ್ಥವಿಲ್ಲ. ಕಚೇರಿಗೆ ತಲುಪುವಷ್ಟರಲ್ಲಿ ನಿಮ್ಮ ಶಕ್ತಿಯ ಅರ್ಧದಷ್ಟು ವೇಸ್ಟ್‌ ಆಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ತಲೆಕೆಳಗಾಗಿ ಮಲಗಿ ಹೋಮ್ ವರ್ಕ್ ಮಾಡೋದ್ರಲ್ಲಿ ಬ್ಯುಸಿ ಈ ಪುಟಾಣಿ
Image
ವರ್ಷದೊಳಗೆ ಶೇ.30ರಷ್ಟು ಬೆಂಗಳೂರು ಟ್ರಾಫಿಕ್​ನಿಂದ ಮುಕ್ತಿ
Image
ಬಾರ್​ ಗರ್ಲ್ ಜತೆಗೆ ಭಾರತೀಯ ಯುವಕರ ಕಿರಿಕ್
Image
ಬದುಕು ಕಟ್ಟಿಕೊಟ್ಟ ಸುಂದರ ನಗರಕ್ಕೆ ಧನ್ಯವಾದ ತಿಳಿಸಿದ ವ್ಯಕ್ತಿ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ: Viral: ಇನ್ನು ಒಂದು ವರ್ಷದೊಳಗೆ ಶೇ.30ರಷ್ಟು ಬೆಂಗಳೂರು ಟ್ರಾಫಿಕ್​ನಿಂದ ಮುಕ್ತಿ, ಹೊಸ ಐಡಿಯಾ ತಂದ ಪ್ರಶಾಂತ್ ಪಿಟ್ಟಿ

ಜುಲೈ 24ರಂದು ಶೇರ್ ಮಾಡಲಾದ ಈ ಪೋಸ್ಟ್ ಈವರೆಗೆ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ನಾನಾ ರೀತಿಯ ಕಾಮೆಂಟ್ ಮಾಡುವ ಮೂಲಕ ಈ ರೀತಿಯ ಆಯ್ಕೆಯಿದ್ದರೆ ಒಳ್ಳೆಯದು ಎಂದಿದ್ದಾರೆ. ಒಬ್ಬ ಬಳಕೆದಾರರು, ನಿಮ್ಮ ಮಾತನ್ನು ಒಪ್ಪಿದೆ. ನಿಮ್ಮ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಇನ್ನೊಬ್ಬರು, ನನ್ನ ಪ್ರಕಾರ ಕಚೇರಿಯಲ್ಲಿ ಕೆಲಸ ಮಾಡುವುದರಿಂದ ಉದ್ಯೋಗಿಗಳ ಉತ್ಪಾದಕತೆ ಕಡಿಮೆಯಾಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ನೀವು ಪ್ರತಿದಿನ ಕಚೇರಿಗೆ ಪ್ರಯಾಣ ಮಾಡುವಲ್ಲಿ 3-4 ಗಂಟೆಗಳನ್ನು ವ್ಯರ್ಥ ಮಾಡದಿದ್ದರೆ ವರ್ಕ್ ಫ್ರಮ್ ಆಫೀಸ್ ಉತ್ತಮ ಎಂದು ಮತ್ತೊಬ್ಬ ಬಳಕೆದಾರರು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 am, Fri, 25 July 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?