AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಮಾಯವಾಗಿದೆ! ಹಬ್ಬದಂದು ಕೇವಲ 25 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಿದ ನಟ ಆಶಿಶ್ ವಿದ್ಯಾರ್ಥಿ

ದೀಪಾವಳಿ ರಜೆಯಲ್ಲಿ ಬೆಂಗಳೂರು ನಿವಾಸಿಗಳು ತಮ್ಮ ಊರುಗಳಿಗೆ ತೆರಳಿದ್ದರಿಂದ ನಗರವು ಟ್ರಾಫಿಕ್ ಮುಕ್ತವಾಗಿತ್ತು. ಟೆಕ್ಕಿಗಳು ತಮ್ಮ ಊರುಗಳಿಗೆ ತೆರಳಿದ ಕಾರಣ, ರಸ್ತೆಗಳು ಖಾಲಿ ಖಾಲಿಯಾಗಿದ್ದವು. ಈ ಬಗ್ಗೆ ನಟ ಆಶಿಶ್ ವಿದ್ಯಾರ್ಥಿ ಅವರು "ಬೆಂಗಳೂರು ಟ್ರಾಫಿಕ್ ಕಳ್ಳತನವಾಗಿದೆ" ಎಂದು ಹಾಸ್ಯಮಯ ಪೋಸ್ಟ್ ಹಂಚಿಕೊಂಡಿದ್ದು, ಹಳೆಯ ಬೆಂಗಳೂರಿನ ನೆನಪು ಮರುಕಳಿಸಿದೆ. ಈ ಪರಿಸ್ಥಿತಿ ನಗರದ ವಾತಾವರಣವನ್ನು ಶಾಂತವಾಗಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್ ಮಾಯವಾಗಿದೆ! ಹಬ್ಬದಂದು ಕೇವಲ 25 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಿದ ನಟ ಆಶಿಶ್ ವಿದ್ಯಾರ್ಥಿ
ಆಶಿಶ್ ವಿದ್ಯಾರ್ಥಿ
ಅಕ್ಷಯ್​ ಪಲ್ಲಮಜಲು​​
|

Updated on: Oct 27, 2025 | 2:18 PM

Share

ಬೆಂಗಳೂರು, ಅ.27: ದೀಪಾವಳಿಯಂದು ಎರಡು-ಮೂರು ದಿನ ರಜೆ ಇದ್ದ ಕಾರಣ, ಬೆಂಗಳೂರಿನಲ್ಲಿದ್ದ ಅರ್ಧದಷ್ಟು ಜನರು ತಮ್ಮ ತಮ್ಮ ಊರಿಗೆ ಹೋಗಿದ್ದರು. ಇದರಿಂದ ಬೆಂಗಳೂರು ಖಾಲಿ ಖಾಲಿಯಾಗಿತ್ತು. ಹಾಗಾಗಿ ಬೆಂಗಳೂರಿನಲ್ಲಿ ಯಾವುದೇ ಟ್ರಾಫಿಕ್ (Bengaluru traffic)​​​ ಇರಲಿಲ್ಲ. ಇದರ ಜತೆಗೆ ಬೆಂಗಳೂರಿನ ವಾತಾವರಣ ಕೂಡ ಶಾಂತವಾಗಿತ್ತು. ಈ ಬಗ್ಗೆ ಅನೇಕ ಪೋಸ್ಟ್​​ಗಳು ವೈರಲ್​​ ಆಗಿದೆ. ಅದರಲ್ಲಿ ಈ ಪೋಸ್ಟ್​​ವೊಂದು ಭಾರೀ ಚರ್ಚೆಗೆ ಕಾರಣವಾಗಿತ್ತು. ಬೆಂಗಳೂರಿನ ಟೆಕ್ಕಿಯೊಬ್ಬರು ದೀಪಾವಳಿಯಂದು ಬೆಂಗಳೂರು ಟ್ರಾಫಿಕ್​​​ ಫ್ರೀಯಾಗಿತ್ತು. ಕೇವಲ 20 ನಿಮಿಷಗಳಲ್ಲಿ 14 ಕಿ.ಮೀ ತಲುಪಿರುವ ಬಗ್ಗೆ ಹಂಚಿಕೊಂಡಿದ್ದರು. ಇದೀಗ ಹಬ್ಬದಂದು ಬೆಂಗಳೂರು ಖಾಲಿ ಖಾಲಿ ಆಗಿರುವ ಬಗ್ಗೆ ಖಾತ್ಯ ಬಹುಭಾಷ ನಟ ಆಶಿಶ್ ವಿದ್ಯಾರ್ಥಿ ಅವರು ಹಂಚಿಕೊಂಡಿರುವ ಪೋಸ್ಟ್ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಅವರು ಈ ಪೋಸ್ಟ್​ನಲ್ಲಿ “ಬೆಂಗಳೂರು ಟ್ರಾಫಿಕ್ ಕಳ್ಳತನವಾಗಿದೆ” ಎಂದು ವ್ಯಂಗ್ಯವಾಗಿ ಹೇಳಿಕೊಂಡಿದ್ದಾರೆ.

ಆಶಿಶ್ ವಿದ್ಯಾರ್ಥಿ ಬೆಂಗಳೂರು ಸದಾ ಹೀಗೆ ಇದ್ರೆ ತುಂಬಾ ಚೆನ್ನಾಗಿರುತ್ತದೆ ಎಂದು ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೇಳಿದ್ದಾರೆ. 2000ರ ದಶಕದ ಹಿಂದಿನ ಬೆಂಗಳೂರಿನಲ್ಲಿ ಕಾಣುತ್ತಿದೆ ಎಂದು ಹೇಳಿದ್ದಾರೆ. ಅವರು ಹಂಚಿಕೊಂಡ ವಿಡಿಯೋದಲ್ಲಿ ಹೀಗಿದೆ. “ನಾನು ಬೆಂಗಳೂರಿನಲ್ಲಿದ್ದೇನೆ, ಒಂದು ಅಚ್ಚರಿಯ ವಿಚಾರವನ್ನು ಹಂಚಿಕೊಳ್ಳಬೇಕು. ಬೆಂಗಳೂರನ್ನು ಯಾವತ್ತೂ ಹೀಗೆ ನೋಡಿಲ್ಲ, ಟ್ರಾಫಿಕ್​​ ಮುಕ್ತವಾಗಿ ಕಾಣುತ್ತಿದೆ. ಯಾರೋ ಇಲ್ಲಿನ ಟ್ರಾಫಿಕ್​​ ಕದ್ದಿದ್ದರೆ ಎಂದು ಅನ್ನಿಸುತ್ತಿದೆ. ನಾನು ಇಂದು ವಿಮಾನ ನಿಲ್ದಾಣಕ್ಕೆ ಹೋಗಲು ಬೆಳಿಗ್ಗೆ ಬೇಗ ಎದ್ದು ಹೊರಟಿದ್ದೆ, ಇನ್ನು ಟ್ರಾಫಿಕ್​​ನಲ್ಲಿ ಸಿಲುಕಿಕೊಂಡು ತೊಂದರೆ ಆಗುವುದು ಬೇಡ ಎಂದು ಸ್ವಲ್ಪ ಬೇಗ ಹೊರಟೆ, ಆದರೆ ಗಾಂಧಿನಗರದಿಂದ ವಿಮಾನ ನಿಲ್ದಾಣಕ್ಕೆ 25 ನಿಮಿಷದಲ್ಲಿ ತಲುಪಿದ್ದೇನೆ. ನನಗೆ ಇದು ತುಂಬಾ ಅಚ್ಚರಿಯಾಗಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: 20 ನಿಮಿಷಗಳಲ್ಲಿ 14 ಕಿ.ಮೀ ತಲುಪಿದೆ, ದೀಪಾವಳಿಯಿಂದ ಬೆಂಗಳೂರು ಖಾಲಿ ಖಾಲಿ ಎಂದ ಟೆಕ್ಕಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ನಟ ಆಶಿಶ್ ವಿದ್ಯಾರ್ಥಿ ಅವರು ಹಬ್ಬ ದಿನದಂದು ಸ್ಟ್ಯಾಂಡ್-ಅಪ್ ಪ್ರದರ್ಶನಕ್ಕಾಗಿ ಕೊಚ್ಚಿಗೆ ಹೋಗುವ ಸಂದರ್ಭದಲ್ಲಿ ಬೆಂಗಳೂರು ಹೀಗೆ ಕಂಡಿದೆ ಎಂದು ಹೇಳಿಕೊಂಡಿದ್ದಾರೆ. “ದಯವಿಟ್ಟು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇಲ್ಲದ ಹಳೆಯ ಕಾಲಕ್ಕೆ ಹಿಂತಿರುಗಬೇಡಿ. ಜಗತ್ತು ಮುಂದೆ ಸಾಗುತ್ತಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇನ್ನು ಈ ಪೋಸ್ಟ್​​​ಗೆ ಹಲವು ಕಮೆಂಟ್​​ಗಳು ಬಂದಿದೆ. ಒಬ್ಬ ಬಳಕೆದಾರ ಸೋಮವಾರದವರೆಗೆ ಕಾಯಿರಿ ಸರ್​​​​, ಬೆಂಗಳೂರಿನ ನಿಜವಾದ ದರ್ಶನವಾಗುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಹಬ್ಬದ ವಲಸೆ ಮುಗಿದ ನಂತರ ನಗರವು ಮತ್ತೆ ಅದೇ ಸ್ಥಿತಿಗೆ ಬರುತ್ತದೆ ನೋಡಿ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್