AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಿಂಗಳಿಗೆ 80,000 ರೂ. ಗಳಿಸುವ ಬೆಂಗಳೂರಿನ ಉಬರ್ ಬೈಕ್ ಚಾಲಕ; ವಿಡಿಯೋ ವೈರಲ್​​

ಬೆಂಗಳೂರಿನ ಉಬರ್ ಬೈಕ್ ಚಾಲಕನೊಬ್ಬ ತಿಂಗಳಿಗೆ 80,000 ರೂಪಾಯಿಗಳನ್ನು ಗಳಿಸುತ್ತಿದ್ದೇನೆ ಎಂದು ಹೇಳಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಿನಕ್ಕೆ 13 ಗಂಟೆ ಕೆಲಸ ಮಾಡುವ ಈ ಚಾಲಕ "ನನಗೆ ಯಾರಿಂದಲೂ ಒತ್ತಡವಿಲ್ಲ, ಇಲ್ಲಿ ನನಗೆ ನಾನೇ ಮಾಲೀಕ" ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ತಿಂಗಳಿಗೆ 80,000 ರೂ. ಗಳಿಸುವ ಬೆಂಗಳೂರಿನ ಉಬರ್ ಬೈಕ್ ಚಾಲಕ; ವಿಡಿಯೋ ವೈರಲ್​​
Bengaluru Uber Bike Driver
ಅಕ್ಷತಾ ವರ್ಕಾಡಿ
|

Updated on: Dec 10, 2024 | 11:03 AM

Share

ಬೆಂಗಳೂರು ಮೂಲದ ಉಬರ್ ಬೈಕ್ ಚಾಲಕನೊಬ್ಬ ತಾನು ತಿಂಗಳಿಗೆ 80,000 ರೂ. ಗಳಿಸುವುದಾಗಿ ಹೇಳಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಈತನ ತಿಂಗಳ ಸಂಬಳ ಕೇಳಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಕರ್ನಾಟಕ ಪೋರ್ಟ್‌ಫೋಲಿಯೊ (@karnatakaportf) ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಉಬರ್ ಬೈಕ್ ಚಾಲಕ ಹಿಂದಿಯಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು. ನಾನು ದಿನಕ್ಕೆ 13 ಗಂಟೆಗಳ ಕಾಲ ಕೆಲಸ ಮಾಡಿ, ತಿಂಗಳಿಗೆ ಸುಮಾರು 80,000 ರೂ. ಗಳಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ. ಇದಲ್ಲದೆ “ನನಗೆ ಯಾವುದೇ ಯಾರಿಂದಲೂ ಒತ್ತಡವಿಲ್ಲ, ನನಗೆ ಯಾರು ಹೇಳೋರು ಇಲ್ಲ, ಇಲ್ಲಿ ನನಗೆ ನಾನೇ ಮಾಲೀಕ” ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಫುಡ್‌ ಡೆಲಿವರಿ ಆ್ಯಪ್‌ನ ಬಿಲ್‌ಬೋರ್ಡ್‌ ಬೆನ್ನಿಗೆ ಕಟ್ಟಿ ಬೀದಿಯಲ್ಲಿ ಅಡ್ಡಾಡಿದ ಬೆಂಗಳೂರು ಯುವಕರು

ಡಿಸೆಂಬರ್​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೇವಲ 5 ದಿನಗಳಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಉಬರ್ ಬೈಕ್ ಚಾಲಕನ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ