AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ

ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಎನ್ನುವಂತಾಗಿದೆ. ಆದರೆ ಮಹಿಳೆಯೊಬ್ಬರು ಬೆಂಗಳೂರು ಹೆಣ್ಣು ಮಕ್ಕಳಿಗೆ ಸೇಫ್ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಟೋದಲ್ಲಿ ಬರೆದ ಸಾಲುಗಳು. ಈ ವಿಡಿಯೋ ವೈರಲ್ ಆಗಿದ್ದು ಮಹಿಳೆಯ ಮಾತನ್ನು ನೆಟ್ಟಿಗರು ಒಪ್ಪಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 12, 2025 | 3:50 PM

Share

ಬೆಂಗಳೂರು, ಡಿ.12: ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಹೆಣ್ಣು ಮಕ್ಕಳ ಜತೆ ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಆದರೆ, ಬೆಂಗಳೂರಿನಲ್ಲಿ (Bengaluru) ಓಡಾಡುತ್ತಿದ್ದ ಮಹಿಳೆಗೆ  ಒಳ್ಳೆಯ ಜನ ಇರ್ತಾರೆ ಎನ್ನುವ ಅಭಿಪ್ರಾಯ ಮೂಡಿದೆ. ಹೌದು, ಈ ಮಹಿಳೆಗೆ ಆಟೋದಲ್ಲಿ (auto) ಬರೆದ ಸಾಲುಗಳು ಕಣ್ಣಿಗೆ ಬಿದ್ದಿದೆ. ಇದನ್ನೂ ನೋಡಿದ ಈ ಮಹಿಳೆಯೂ ಬೆಂಗಳೂರು ರಾತ್ರಿ ವೇಳೆ ಹೆಣ್ಣು ಮಕ್ಕಳಿಗೆ ಸುರಕ್ಷಿತ ಎನ್ನುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದು ಈ ಕುರಿತಾದ ಸ್ಟೋರಿ ಇಲ್ಲಿದೆ.

ಲಿಟಲ್ ಬೆಂಗಳೂರು ಸ್ಟೋರೀಸ್ (littlebengalurustories) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೆಂಗಳೂರಿನಲ್ಲಿ ರಾತ್ರಿಯ ವೇಳೆ ಆಟೋದಲ್ಲಿ ತೆರಳಿದ್ದು ಈ ವೇಳೆ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಆಟೋದ ಒಳಗೆ ಬರೆದ ಸಾಲುಗಳನ್ನು ತೋರಿಸಿದ್ದಾರೆ. ನಾನೂ ಒಬ್ಬ ತಂದೆ, ಅಣ್ಣ ನಿಮ್ಮ ಸುರಕ್ಷತೆ ನನಗೆ ಮುಖ್ಯ. ಆರಾಮಾಗಿ ಕುಳಿತುಕೊಳ್ಳಿ” ಎಂದು ಬರೆದಿರುವುದನ್ನು ಕಂಡು ಖುಷಿ ಪಟ್ಟಿದ್ದಾರೆ. ಆ ಬಳಿಕ ಈ ಮಹಿಳೆ ನಾನು ರಾಪಿಡೋ ಆಟೋದಲ್ಲಿ ಪ್ರಯಾಣಿಸುತ್ತಿದ್ದೆ. ಬೆಂಗಳೂರಿನಲ್ಲಿ ರಾತ್ರಿ 12 ಗಂಟೆಯಾಗಿತ್ತು. ಆಗ ನಾನು ಇದನ್ನ ಓದಿದೆ. ನಿಜಕ್ಕೂ ನನಗೆ ಸುರಕ್ಷತಾ ಮನೋಭಾವ ಮೂಡಿತು. ಆರಾಮಾಗಿ ಓಡಾಡಬಹುದು ಅನಿಸಿತು ಎಂದು ಹೇಳಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:“ಇದು ಕಾರು, ವಿಮಾನವಲ್ಲ”: ನೀವು ಬರುತ್ತಿದ್ದೀರಾ? ಎಂದು ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಸಿಟ್ಟಾದ ಚಾಲಕ

ಈ ವಿಡಿಯೋ ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ಇಪ್ಪತ್ತು ವರ್ಷದಿಂದ ಈ ಸಿಟಿಯನ್ನ ನೋಡುತ್ತಿದ್ದೇನೆ. ಪ್ರತಿಯೊಬ್ಬರಿಗೂ ಇದು ಸುರಕ್ಷಿತ ಸ್ಥಳ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಳ್ಳೆಯವರು ಇರ್ತಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ಇವರೇ ನಿಜವಾದ ಬೆಂಗಳೂರು ಆಟೋ ಚಾಲಕರು. ಜವಾಬ್ದಾರಿ ಇದೇ ಅನ್ನೋದಕ್ಕೆ ಇದೆ ಉದಾಹರಣೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ
ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ!
ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ!
ಟರ್ಕಿಯ ಹೈಸ್ಕೂಲ್ ಒಳಗೆ ಗುಂಡಿನ ದಾಳಿ, 16 ಮಂದಿಗೆ ಗಂಭೀರ ಗಾಯ
ಟರ್ಕಿಯ ಹೈಸ್ಕೂಲ್ ಒಳಗೆ ಗುಂಡಿನ ದಾಳಿ, 16 ಮಂದಿಗೆ ಗಂಭೀರ ಗಾಯ
ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?
ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?
ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!
ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ