AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ

ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಎನ್ನುವಂತಾಗಿದೆ. ಆದರೆ ಮಹಿಳೆಯೊಬ್ಬರು ಬೆಂಗಳೂರು ಹೆಣ್ಣು ಮಕ್ಕಳಿಗೆ ಸೇಫ್ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಟೋದಲ್ಲಿ ಬರೆದ ಸಾಲುಗಳು. ಈ ವಿಡಿಯೋ ವೈರಲ್ ಆಗಿದ್ದು ಮಹಿಳೆಯ ಮಾತನ್ನು ನೆಟ್ಟಿಗರು ಒಪ್ಪಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 12, 2025 | 3:50 PM

Share

ಬೆಂಗಳೂರು, ಡಿ.12: ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಹೆಣ್ಣು ಮಕ್ಕಳ ಜತೆ ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಆದರೆ, ಬೆಂಗಳೂರಿನಲ್ಲಿ (Bengaluru) ಓಡಾಡುತ್ತಿದ್ದ ಮಹಿಳೆಗೆ  ಒಳ್ಳೆಯ ಜನ ಇರ್ತಾರೆ ಎನ್ನುವ ಅಭಿಪ್ರಾಯ ಮೂಡಿದೆ. ಹೌದು, ಈ ಮಹಿಳೆಗೆ ಆಟೋದಲ್ಲಿ (auto) ಬರೆದ ಸಾಲುಗಳು ಕಣ್ಣಿಗೆ ಬಿದ್ದಿದೆ. ಇದನ್ನೂ ನೋಡಿದ ಈ ಮಹಿಳೆಯೂ ಬೆಂಗಳೂರು ರಾತ್ರಿ ವೇಳೆ ಹೆಣ್ಣು ಮಕ್ಕಳಿಗೆ ಸುರಕ್ಷಿತ ಎನ್ನುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದು ಈ ಕುರಿತಾದ ಸ್ಟೋರಿ ಇಲ್ಲಿದೆ.

ಲಿಟಲ್ ಬೆಂಗಳೂರು ಸ್ಟೋರೀಸ್ (littlebengalurustories) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೆಂಗಳೂರಿನಲ್ಲಿ ರಾತ್ರಿಯ ವೇಳೆ ಆಟೋದಲ್ಲಿ ತೆರಳಿದ್ದು ಈ ವೇಳೆ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಆಟೋದ ಒಳಗೆ ಬರೆದ ಸಾಲುಗಳನ್ನು ತೋರಿಸಿದ್ದಾರೆ. ನಾನೂ ಒಬ್ಬ ತಂದೆ, ಅಣ್ಣ ನಿಮ್ಮ ಸುರಕ್ಷತೆ ನನಗೆ ಮುಖ್ಯ. ಆರಾಮಾಗಿ ಕುಳಿತುಕೊಳ್ಳಿ” ಎಂದು ಬರೆದಿರುವುದನ್ನು ಕಂಡು ಖುಷಿ ಪಟ್ಟಿದ್ದಾರೆ. ಆ ಬಳಿಕ ಈ ಮಹಿಳೆ ನಾನು ರಾಪಿಡೋ ಆಟೋದಲ್ಲಿ ಪ್ರಯಾಣಿಸುತ್ತಿದ್ದೆ. ಬೆಂಗಳೂರಿನಲ್ಲಿ ರಾತ್ರಿ 12 ಗಂಟೆಯಾಗಿತ್ತು. ಆಗ ನಾನು ಇದನ್ನ ಓದಿದೆ. ನಿಜಕ್ಕೂ ನನಗೆ ಸುರಕ್ಷತಾ ಮನೋಭಾವ ಮೂಡಿತು. ಆರಾಮಾಗಿ ಓಡಾಡಬಹುದು ಅನಿಸಿತು ಎಂದು ಹೇಳಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:“ಇದು ಕಾರು, ವಿಮಾನವಲ್ಲ”: ನೀವು ಬರುತ್ತಿದ್ದೀರಾ? ಎಂದು ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಸಿಟ್ಟಾದ ಚಾಲಕ

ಈ ವಿಡಿಯೋ ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ಇಪ್ಪತ್ತು ವರ್ಷದಿಂದ ಈ ಸಿಟಿಯನ್ನ ನೋಡುತ್ತಿದ್ದೇನೆ. ಪ್ರತಿಯೊಬ್ಬರಿಗೂ ಇದು ಸುರಕ್ಷಿತ ಸ್ಥಳ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಳ್ಳೆಯವರು ಇರ್ತಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ಇವರೇ ನಿಜವಾದ ಬೆಂಗಳೂರು ಆಟೋ ಚಾಲಕರು. ಜವಾಬ್ದಾರಿ ಇದೇ ಅನ್ನೋದಕ್ಕೆ ಇದೆ ಉದಾಹರಣೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!