AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಗಳೂರಿನಲ್ಲಿ 6 ತಿಂಗಳು ಉಳಿದ್ರೆ ಸಾಕು ಈ ಊರು ನಿಮಗೆ ಸ್ವಂತ; ಮಹಿಳೆ ಹೀಗೆಂದಿದ್ದೇಕೆ?

ಬೆಂಗಳೂರು ಅಂದ್ರೆ ಬದುಕು ಕಟ್ಟಿಕೊಟ್ಟ ಊರು. ಆದ್ರೆ ಜವಾಬ್ದಾರಿಗಳನ್ನು ಹೆಗಲೇರಿಸಿಕೊಂಡು ಇಲ್ಲಿನ ಜೀವನ ಶೈಲಿ ಹೊಂದಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಆದರೆ ನೀವು 6 ತಿಂಗಳು ಬೆಂಗಳೂರಿನಲ್ಲಿ ಉಳಿದ್ರೆ ಈ ಊರು ನಿಮ್ಮದಾಗುತ್ತದೆ ಎಂದು ಬೆಂಗಳೂರಿನ ಮಹಿಳೆಯೊಬ್ಬರು ಹೇಳಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೆಂಗಳೂರಿನಲ್ಲಿ 6 ತಿಂಗಳು ಉಳಿದ್ರೆ ಸಾಕು ಈ ಊರು ನಿಮಗೆ ಸ್ವಂತ; ಮಹಿಳೆ ಹೀಗೆಂದಿದ್ದೇಕೆ?
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Apr 16, 2026 | 9:11 PM

Share

ಬೆಂಗಳೂರು, ಏಪ್ರಿಲ್ 16: ಓದು ಮುಗಿಯುತ್ತಿದ್ದಂತೆ ತಮ್ಮ ಹುಟ್ಟೂರನ್ನು ತೊರೆದು ಬೆಂಗಳೂರಿನತ್ತ (Bengaluru) ಯುವಕ ಯುವತಿಯರು ಹೆಜ್ಜೆ ಹಾಕ್ತಾರೆ. ಹೀಗೆ ಬಂದವರಲ್ಲಿ ಅನೇಕರಿಗೆ ಹೊಸ ಊರಿಗೆ ಹೊಂದಿಕೊಳ್ಳೋದು ಕಷ್ಟವಾಗುತ್ತದೆ. ಆದರೆ ಈ ಬೆಂಗಳೂರಿನ ಮಹಿಳೆಯೊಬ್ಬರು ಹೊಸಬರು ಬಂದು ಈ ನಗರದಲ್ಲಿ ವಾಸಿಸುವುದರಿಂದ ಅಲ್ಲಿನ  ಅಭ್ಯಾಸ ಮತ್ತು ಮನಸ್ಥಿತಿ ಹೇಗೆ ಬದಲಾಗುತ್ತದೆ. ನಗರದ ವಿಶಿಷ್ಟ ಸಂಸ್ಕೃತಿಗೆ ಹೊಸಬರು ಹೇಗೆ ಕ್ರಮೇಣ ಹೊಂದಿಕೊಳ್ಳುತ್ತಾರೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ.

zindgeonrecord ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಸೈಯದ್ ಅಫ್ರೀಂಜ್ ಎಂಬ ಮಹಿಳೆ ಬೆಂಗಳೂರಿಗೆ ಹೊಸಬರು ಹೇಗೆ ಹೊಂದಿಕೊಳ್ತಾರೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಅಂದ್ರೆ ಪ್ರೀತಿ. ಅದು ನಿಮ್ಮನ್ನು ಮುಕ್ತ ತೋಳುಗಳಿಂದ ಸ್ವಾಗತಿಸುತ್ತದೆ. ಒಮ್ಮೆ ಬಂದು ನೀವೇ ನೋಡಿ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ನೀವು ಆರು ತಿಂಗಳು ಬೆಂಗಳೂರಿಗೆ ಬಂದು ನೋಡಿ, ಸಂಪೂರ್ಣವಾಗಿ ಬೆಂಗಳೂರಿಗರಾಗಿ ಬದಲಾಗುತ್ತೀರಿ. ಟ್ರಾಫಿಕ್‌ನಲ್ಲಿ ಸಾಮಾನ್ಯವಾಗಿ ವರ್ತಿಸುವಂತೆ, ಎಲ್ಲರನ್ನೂ ‘ಸಹೋದರ’ ಎಂದು ಕರೆಯುತ್ತೀರಿ. 300 ರೂ ಕಾಫಿ ಸಾಮಾನ್ಯ ಎಂದು ಭಾವಿಸುತ್ತೀರಿ, ಮಳೆಯಲ್ಲಿ ‘ವಾವ್, ಎಂತಹ ಅದ್ಭುತ ಹವಾಮಾನ’ ಎಂದು ಹೇಳುವಂತೆ ಎಲ್ಲದರೊಂದಿಗೆ ನೀವು ಬೆರೆತು ಹೋಗುತ್ತೀರಿ. ನೀವು ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಯೋಜಿಸುತ್ತಿದ್ದರೆ, ಬೆಂಗಳೂರಿಗೆ ಸ್ವಾಗತ.ಈ ಊರು ನಿಮ್ಮನ್ನು ಪೂರ್ಣ ಹೃದಯದಿಂದ ಅಪ್ಪಿಕೊಳ್ಳುತ್ತದೆ. ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಯೋಚಿಸುತ್ತಿರುವ ಯಾರಿಗಾದರೂ ಈ ರೀಲ್‌ನ್ನು ಹಂಚಿಕೊಳ್ಳಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಸಂಚಾರ ತಾಳ್ಮೆಯ ಮಟ್ಟ ನಿಮಗೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನೀವು ಅರಿತುಕೊಳ್ಳದೆಯೇ ಬೆಂಗಳೂರು ನಿಮ್ಮನ್ನು ಹೇಗೆ ಬದಲಾಯಿಸುತ್ತದೆ ಎಂಬುದು ನಿಜ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, 300 ರೂ ಕಾಫಿ ಸಾಮಾನ್ಯ ಭಾವನೆಯಾಗಿದ್ರು ನೋವಿನಿಂದ ಕೂಡಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ