AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಳಾದ ಹಾಲಿನ ಹಣ ವಾಪಸ್ ಪಡೆಯಲು ಹೋಗಿ 77 ಸಾವಿರ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ 

ಇತ್ತೀಚಿನ ದಿನಗಳಂತೂ ಆನ್ಲೈನ್ ವಂಚನೆಗಳು ತೀರಾ ಹೆಚ್ಚಾಗಿವೆ.  ಪ್ರತಿನಿತ್ಯ ಒಂದಲ್ಲಾ ಒಂದು ವಂಚನೆಯ ಪ್ರಕರಣಗಳು ಕೇಳಿಬರುತ್ತಿವೆ. ಅದೇ ರೀತಿಯ ವಂಚನೆಯ ಪ್ರಕರಣವೊಂದು ಇದೀಗ  ಬೆಳಕಿಗೆ ಬಂದಿದ್ದು, ಆನ್ಲೈನ್ ಮೂಲಕ ಕೆಟ್ಟು ಹೋದ ಹಾಲಿನ ಹಣವನ್ನು ವಾಪಸ್ ಪಡೆಯಲು  ಹೋಗಿ ಬೆಂಗಳೂರಿನ ಮಹಿಳೆಯೊಬ್ಬರು ಆನ್ಲೈನ್ ವಂಚನೆಗೆ  ಬಲಿಯಾಗಿ ತಮ್ಮ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 77 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದಾರೆ. 

ಹಾಳಾದ ಹಾಲಿನ ಹಣ ವಾಪಸ್ ಪಡೆಯಲು ಹೋಗಿ 77 ಸಾವಿರ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ 
ಮಾಲಾಶ್ರೀ ಅಂಚನ್​
| Edited By: |

Updated on: Mar 25, 2024 | 2:57 PM

Share

ಇಂದಿನ ಕಾಲದಲ್ಲಿ ಸೈಬರ್ ಹಗರಣಗಳು ಜನರ ಕೊರಳಿಗೆ ಕಂಠಕವಾಗಿ ಪರಿಣಮಿಸಿದೆ.  ದಿನೇ ದಿನೇ ಆನ್ಲೈನ್ ವಂಚನೆಯು ಹೆಚ್ಚಾಗುತ್ತಿದೆ. ಇಂತಹ ಹಲವಾರು ಪ್ರಕರಣಗಳು ದಿನನಿತ್ಯ ನಡೆಯುತ್ತಲೇ ಇರುತ್ತವೆ. ಇದೀಗ ಅಂತಹದ್ದೇ  ಪ್ರಕರಣವೊಂದು  ಬೆಳಕಿಗೆ ಬಂದಿದ್ದು, ಕೆಟ್ಟು ಹೋದ ಹಾಲಿನ ಹಣವನ್ನು ಆನ್ಲೈನ್ ಮೂಲಕ ವಾಪಸ್ ಪಡೆಯಲು ಹೋಗಿ ಬೆಂಗಳೂರಿನ ಮಹಿಳೆಯೊಬ್ಬರು ಬರೋಬ್ಬರಿ 77 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ಅಷ್ಟಕ್ಕೂ ಆಗಿದ್ದಾದರೂ ಏನು?

ಬೆಂಗಳೂರಿನ ಮಹಿಳೆಯೊಬ್ಬರು  ಮಾರ್ಚ್ 18ರಂದು ಆನ್ಲೈನ್ ಮಾರುಕಟ್ಟೆಯಲ್ಲಿ ದಿನಸಿ ಪದಾರ್ಥಗಳನ್ನು ಹಾಗೂ ಹಾಲು ಖರೀದಿ ಮಾಡಿ  ಯುಪಿಐ ಮೂಲಕ ಹಣವನ್ನು ಸಹ ಪಾವತಿ ಮಾಡಿದ್ದರು. ನಂತರ ಹಾಲಿನ ಪೊಟ್ಟಣ ತೆರೆದು ನೋಡಿದಾಗ ಹಾಲು ಕೆಟ್ಟು ಹೋಗಿತ್ತು. ನಂತರ ಅವರು  ಆನ್ಲೈನ್ ಅಲ್ಲಿ ಇ-ಕಾಮರ್ಸ್ ತಾಣದ ಕಸ್ಟಮರ್ ಕೇರ್ ಸಂಖ್ಯೆಯನ್ನು  ಹುಡುಕಿ, ಆ ಸಂಖ್ಯೆಗೆ ಕರೆ ಮಾಡಿ ನಾನು ಖರೀದಿಸಿದ ಹಾಲು ಕೆಟ್ಟು ಹೋಗಿದೆ, ಅದರ ಹಿಂದಿರುಗಿಸಿ ಎಂದು ಕೇಳಿದ್ದಾರೆ.

ಹೀಗೆ ಮಹಿಳೆ ಕರೆ ಮಾಡಿದಾಗ ಗ್ರಾಹಕರ ಪ್ರತಿನಿಧಿಯ ಹಾಗೆ ಮಾತನಾಡಿದ ಆನ್ಲೈನ್ ವಂಚಕರು ಆ ಮಹಿಳೆಯ ವೈಯಕ್ತಿಕ ವಿವರ ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಪಡೆದು,  ಅವರು ವಾಟ್ಸ್ಆಪ್ ಮೂಲಕ ಒಂದು ಲಿಂಕ್ ಕಳುಹಿಸಿ ಇದರಲ್ಲಿ ಯುಪಿಐ ನಂಬರ್ ಮತ್ತು ಪಿನ್ ನಮೂದಿಸಿ ಎಂದು ಹೇಳುತ್ತಾರೆ. ಇದನ್ನು ನಿಜವೆಂದು ನಂಬಿದ  ಹೆಂಗಸು  ತನ್ನ ಎಲ್ಲಾ  ಬ್ಯಾಂಕ್ ವಿವರವನ್ನು ಭರ್ತಿ ಮಾಡಿ ವಂಚಕರಿಗೆ ಕಳುಹಿಸುತ್ತಾರೆ. ಹೀಗೆ ಒಂದು ಯಡವಟ್ಟಿನಿಂದ ಆಕೆ  ತನ್ನ ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ 77 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!

ತಾನು ಮೋಸ ಹೋಗಿರುವುದನ್ನು ಅರಿತ ಮಹಿಳೆ ಸೈಬರ್ ಸಹಾಯವಾಣಿಗೆ ಕರೆ ಮಾಡಿ ನಂತರ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.  ಸೈಬರ್ ವಂಚಕರು ಆನ್ಲೈನ್ ಫ್ಲಾಟ್ಫಾರ್ಮ್ ಅಲ್ಲಿ ಇ-ಕಾಮರ್ಸ್ ತಾಣದ ಸಂಪೂರ್ಣ ಮಾಹಿತಿಯನ್ನು ತಿರುಚಿ, ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಈ ಕೃತ್ಯ ಎಸಗಿ ಮಹಿಳೆಗೆ ಮೋಸ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!