AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video; ರಾಂಗ್ ಸೈಡ್​​​ನಲ್ಲಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಜಗಳಕ್ಕೆ ಇಳಿದ ಮಹಿಳೆ

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮಹಿಳೆಯೊಬ್ಬರು ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸಿ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ನಂತರ ಆಟೋ ಚಾಲಕನೊಂದಿಗೆ ಜಗಳಕ್ಕಿಳಿದು ನಿಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಸಂಚಾರಿ ಪೊಲೀಸರ ಮಧ್ಯಸ್ಥಿಕೆ ಹೊರತಾಗಿಯೂ ಮಹಿಳೆ ತಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಈ ಘಟನೆ ಭಾರೀ ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ನೆಟ್ಟಿಗರು ರಾಂಗ್ ಸೈಡ್ ಚಾಲನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Video; ರಾಂಗ್ ಸೈಡ್​​​ನಲ್ಲಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಜಗಳಕ್ಕೆ ಇಳಿದ ಮಹಿಳೆ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 15, 2025 | 11:26 AM

Share

ಬೆಂಗಳೂರು, ನ.15: ಬೆಂಗಳೂರಿನಲ್ಲಿ ವಾಹನಗಳು ರಸ್ತೆ ಇಳಿದ್ರೆ ಸಾಕು, ಒಂದಲ್ಲ ಒಂದು ಸಮಸ್ಯೆ ಉದ್ಭವಿಸುತ್ತದೆ. ಒಂದು ಟ್ರಾಫಿಕ್ (Bengaluru traffic)​​ ಸಮಸ್ಯೆ, ಮತ್ತೊಂದು ಅಪಘಾತ, ಇದು ಬೆಂಗಳೂರಿನಲ್ಲಿ ಸರ್ವೆ ಸಾಮಾನ್ಯವಾಗಿದೆ. ಇದೀಗ ಬೈಯಪ್ಪನಹಳ್ಳಿ ಫ್ಲೈಓವರ್ ಬಳಿಯ ರಸ್ತೆಬದಿಯಲ್ಲಿ ಒಂದು ಅಪಘಾತ ನಡೆದಿದೆ. ಅಪಘಾತದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರಾಂಗ್ ಸೈಡ್​​​ನಲ್ಲಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದು ಆಟೋ ಚಾಲಕನ ಜತೆಗೆ ಜಗಳಕ್ಕೆ ಇಳಿದಿದ್ದಾರೆ. ಇದೀಗ ಈ ವಿಚಾರವಾಗಿ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್​​​ ಮಾಡಿದ್ದು, ಬೆಂಗಳೂರಿನಲ್ಲಿ ಜನ, ವಾಹನ ದಟ್ಟಣೆ ಹೆಚ್ಚಿರುವ ಕಾರಣ ರಾಂಗ್ ಸೈಡ್ ಚಾಲನೆ, ರಸ್ತೆ ಶಿಸ್ತಿನ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಎಕ್ಸ್​​ನಲ್ಲಿ ಹಂಚಿಕೊಂಡಿರುವ ವಿಡಿಯೋದ ಪ್ರಕಾರ, ಮಹಿಳೆ ಸಂಚಾರ ನಿಯಮವನ್ನು ಉಲ್ಲಂಘಿಸಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ (ರಾಂಗ್ ಸೈಡ್) ಬಂದು ಆಟೋವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ದೃಶ್ಯದಲ್ಲಿ ತಪ್ಪು ಮಾಡಿದ ಮಹಿಳೆ ಆಟೋ ಚಾಲಕನಿಗೆ ರಸ್ತೆ ಮಧ್ಯೆ ನಿಂದಿಸಿದ್ದಾರೆ. ಈ ವೇಳೆ ಸಂಚಾರಿ ಪೊಲೀಸರು ಮಧ್ಯೆ ಪ್ರವೇಶಿಸಿ, ಮಹಿಳೆಯನ್ನು ಸುಮ್ಮನಿರುವಂತೆ, ಹಾಗೂ ಅವರ ತಪ್ಪಿನ ಬಗ್ಗೆ ಹೇಳಿದ್ರು, ಅದನ್ನು ಕೇಳಿಸಿಕೊಳ್ಳದೇ, ಆಟೋ ಚಾಲಕನಿಗೆ ಬಾಯಿಗೆ ಬಂದಂತೆ ಬೈಯುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋದಲ್ಲಿ ಆಟೋ ಚಾಲಕ ಕೂಡ ವಾದಿಸಿದ್ದು, “ನಾನು ಸರಿಯಾದ ಸೈಡ್​​​ನಲ್ಲಿ ಬಂದಿದ್ದೇನೆ. ನೀವು ರಾಂಗ್ ಸೈಡ್​​​ನಿಂದ ಬಂದ ಡಿಕ್ಕಿ ಹೊಡೆದದ್ದು” ಎಂದು ಹೇಳಿದ್ರು, ಮಹಿಳೆ ಮಾತ್ರ ತನ್ನ ತಪ್ಪುನ್ನು ಸರಿ ಎಂದೇ ವಾದಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಈ ಗಲಾಟೆಯಿಂದ ಈ ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೆ ಸಂಚಾರ ದಟ್ಟಣೆ ಉಂಟಾಗಿದೆ. ಈ ಕಿರಿದಾದ ರಸ್ತೆಯಲ್ಲಿ ಸಾಲು ಸಾಲು ವಾಹನಗಳು ಜಾಮ್​​ ಆಗಿದ್ದು, ಇವರ ಜಗಳದಿಂದ ಇತರ ವಾಹನ ಸವಾರರು ಪರದಾಡುವಂತಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದ್ದಂತೆ ಪೊಲೀಸರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಸತಿ ದರ ಹೆಚ್ಚಳ, 2ಬಿಹೆಚ್‌ಕೆ ಮನೆಗೆ 1 ಕೋಟಿ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ವ್ಯಕ್ತಿ

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ:

ಮಹಿಳೆಯ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಒಮ್ಮೆ ಕಠಿಣ ಶಿಕ್ಷೆಯನ್ನು ನೀಡಿ, ಮುಂದೆ ಯಾರು ಕೂಡ ಇಂತಹ ತಪ್ಪು ಮಾಡುವುದಿಲ್ಲ ಎಂದು ಒಬ್ಬರು ಹೇಳಿದ್ದಾರೆ. ಮತ್ತೊಬ್ಬರು, ರಾಂಗ್ ಸೈಡ್​​ನಲ್ಲಿ ಬಂದ ಮಹಿಳೆಗೆ ಯಾಕೆ ದಂಡ ವಿಧಿಸಿಲ್ಲ, ತಪ್ಪು ಮಾಡದ ಆಟೋ ಚಾಲಕನಿಗೆ ನಿಂದಿಸುವ ಅಧಿಕಾರ ಆ ಮಹಿಳೆಗೆ ಯಾರು ನೀಡಿದ್ದು ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು