AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಣತ್ತೂರು ರಸ್ತೆ ‘ಡರ್ಟ್ ಬೈಕ್’: ಬೆಂಗಳೂರಿನ ರಸ್ತೆ ಸ್ಥಿತಿ ಹೇಗಿದೆ ನೋಡಿ

ಬೆಂಗಳೂರಿನ ಪಣತ್ತೂರು ರಸ್ತೆಯ ಕಂದಕಗಳಲ್ಲಿ ಬೈಕ್ ಸವಾರರು ಸಂಚರಿಸಿದ ವಿಡಿಯೋ ವೈರಲ್ ಆಗಿದೆ. ವೈಟ್-ಟಾಪಿಂಗ್ ಕಾಮಗಾರಿ ಮತ್ತು ಸಂಚಾರ ದಟ್ಟಣೆಯಿಂದಾಗಿ ಚರಂಡಿಗಳಲ್ಲಿ ಬೈಕ್‌ಗಳು ಸಾಗಿದ್ದು, ಇದನ್ನು 'ಡರ್ಟ್ ಬೈಕ್' ಸವಾರಿ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ. ಇದು ಬೆಂಗಳೂರಿನ ಮೂಲಸೌಕರ್ಯದ ಕೊರತೆಯನ್ನು ಎತ್ತಿ ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

ಪಣತ್ತೂರು ರಸ್ತೆ 'ಡರ್ಟ್ ಬೈಕ್': ಬೆಂಗಳೂರಿನ ರಸ್ತೆ ಸ್ಥಿತಿ ಹೇಗಿದೆ ನೋಡಿ
ವೈರಲ್​​ ವಿಡಿಯೋ Image Credit source: Twitter
ಅಕ್ಷಯ್​ ಪಲ್ಲಮಜಲು​​
|

Updated on:Nov 07, 2025 | 2:35 PM

Share

ಬೆಂಗಳೂರು, ನ.7:  ಬೆಂಗಳೂರಿನ ಪಣತ್ತೂರುನಲ್ಲಿ (Bengaluru’s Panathur) ‘ಡರ್ಟ್ ಬೈಕ್’ ರೈಡ್​​​ ಸಾಹಸ ಶುರುವಾಗಿದೆ. ಇದರ ವಿಡಿಯೋ ಎಕ್ಸ್​​​ನಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬೆಂಗಳೂರಿನ ರಸ್ತೆಗಳ ಸ್ಥಿತಿ ಎಲ್ಲಿಗೆ ಬಂದಿದೆ ನೋಡಿ ಎಂದು ಟೀಕಿಸಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ರಸ್ತೆಗಳ ಬಗೆಗಿನ ವಿಡಿಯೋ ಟ್ರೋಲ್​​ ಆಗುತ್ತ ಇರುತ್ತದೆ. ಆದರೆ ಈ ವಿಡಿಯೋ ಮಾತ್ರ ತುಂಬಾ ತಮಾಷೆಯಾಗಿದೆ. ಕಾಡುಬೀಸನಹಳ್ಳಿ-ಪಣತ್ತೂರು ಮುಖ್ಯ ಮಾರ್ಗದಲ್ಲಿ ವೈಟ್-ಟಾಪಿಂಗ್ ಕೆಲಸಕ್ಕಾಗಿ ರಸ್ತೆ ಮುಚ್ಚಲಾಗಿದೆ. ಇದರಿಂದ ವಾಹನ ದಟ್ಟಣೆ ಉಂಟಾಗಿದ್ದು, ಬೈಕ್​​ ಸವಾರರು ರಸ್ತೆ ಬದಿಯಲ್ಲಿರುವ ತೆರೆದ ಚರಂಡಿ, ಕಂದಕದಲ್ಲಿ ಸಂಚರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದು ಬೆಂಗಳೂರಿನ ‘ಡರ್ಟ್ ಬೈಕ್’ ರೈಡ್ ಎಂದು ನೆಟ್ಟಿಗರು ಕರೆದಿದ್ದಾರೆ.

ಈ ವಿಡಿಯೋ ಬೆಂಗಳೂರಿನಲ್ಲಿ ಮೂಲಸೌಕರ್ಯದ ಕೊರತೆ ಎಷ್ಟಿದೆ ಎಂದು ತೋರಿಸುತ್ತಿದೆ. ಅಕ್ಟೋಬರ್ 10ರಂದು ಕಾಡುಬೀಸನಹಳ್ಳಿ-ಪಣತ್ತೂರು ಮುಖ್ಯ ಮಾರ್ಗದಲ್ಲಿ ವೈಟ್-ಟಾಪಿಂಗ್ ಕೆಲಸ ಪ್ರಾರಂಭವಾಗಿದ್ದು,  ತಿಂಗಳ ಒಳಗೆ ಇದರ ಕೆಲಸ ಮುಗಿಯಬೇಕಿತ್ತು. ಆದರೆ ಕೆಲಸ ಪೂರ್ಣಗೊಳ್ಳುವ ಮೊದಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಿದೆ. ಇದರಿಂದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ದ್ವಿಚಕ್ರ ಸವಾರರು ಚರಂಡಿ, ಕಂದಕದ ಸಂದಿಗಳಲ್ಲಿ ಸಾಗಿದ್ದಾರೆ.

ಇದನ್ನೂ ಓದಿ: ಮೊಟ್ಟ ಮೊದಲ ಬಾರಿಗೆ ಮನುಷ್ಯರ ಬಳಿಯೇ ಸಲಹೆ ಕೇಳಿದ ಎಐ ಇನ್ಫ್ಲುಯೆನ್ಸರ್ ನೈನಾ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ನೆಟ್ಟಿಗರು ಈ ವಿಡಿಯೋ ನೋಡಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್​​ ಮಾಡಿದ್ದಾರೆ. ಕೆಲವರು ಇದು ಬೆಂಗಳೂರಿನ ಡರ್ಟ್ ಬೈಕಿಂಗ್ ಈವೆಂಟ್ ಎಂದು ಹೇಳಿದ್ದಾರೆ. ಇನ್ನೂ ಕೆಲವರು, ಬೆಂಗಳೂರು ಮೂಲಸೌಕರ್ಯಕ್ಕಿಂತ, ಇಂತಹ ವಿಚಾರಗಳಲ್ಲಿ ಮುಂದಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಸರ್ಕಾರ ಇತ್ತಿಚೇಗೆ ಸಾರ್ವಜನಿಕರಿಗೆ  ಇಂಥಹ ಅನುಭವವನ್ನು ನೀಡುತ್ತಿದೆ. ಅದರಲ್ಲಿ ಇದು ಒಂದು ಎಂದು ವ್ಯಕ್ತಿಯೊಬ್ಬರು ಕಮೆಂಟ್​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Fri, 7 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ