AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಾಕಾಗಿದೆ, ಜನರನ್ನು ಆಹ್ವಾನಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದ ವ್ಯಕ್ತಿ

'ಬೆಂಗಳೂರು ಸಾಕಾಗಿದೆ, ಯಾರನ್ನೂ ಇಲ್ಲಿಗೆ ಕರೆಯಬೇಡಿ' ಎಂಬ ರೆಡ್ಡಿಟ್‌ನಲ್ಲಿ ವೈರಲ್ ಆಗಿರುವ ಪೋಸ್ಟ್ ನಗರದ ಸಮಸ್ಯೆಗಳನ್ನು ಬಿಚ್ಚಿಟ್ಟಿದೆ. ಮಿತಿಮೀರಿದ ಜನಸಂಖ್ಯೆ, ಮೂಲಸೌಕರ್ಯದ ಕೊರತೆ, ಗಗನಕ್ಕೇರಿದ ಬಾಡಿಗೆ, ನೀರಿನ ಸಮಸ್ಯೆ ಮತ್ತು ಪರಿಸರ ನಾಶದಿಂದ ಬೆಂಗಳೂರಿನಲ್ಲಿ ಜೀವನ ಕಷ್ಟಕರವಾಗಿದೆ ಎಂದು ಪೋಸ್ಟ್ ಹೇಳಿದೆ. ನಗರದ ಯೋಜನಾರಹಿತ ಬೆಳವಣಿಗೆಯ ಬಗ್ಗೆ ಜನರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಬೆಂಗಳೂರು ಸಾಕಾಗಿದೆ, ಜನರನ್ನು ಆಹ್ವಾನಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 06, 2025 | 1:12 PM

Share

ಬೆಂಗಳೂರು ಸಾಕಾಗಿದೆ, (Bengaluru overpopulation) ಯಾರನ್ನು ಇಲ್ಲಿಗೆ ಬನ್ನಿ ಎಂದು ಕರೆಯಬೇಡಿ ಎಂಬ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೆಡ್ಡಿಟ್​​ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೊಂದು ಶೀರ್ಷಿಕೆಯನ್ನು ಕೂಡ ನೀಡಿದ್ದಾರೆ. “ಬೆಂಗಳೂರು ಸಾಕಾಗಿದೆ, ಜನರನ್ನು ಆಹ್ವಾನಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ. ಮಿತಿ ಮೀರಿ ಬೆಳೆಯುತ್ತಿರುವ ನಗರ, ಹೆಚ್ಚುತ್ತಿರುವ ಬಾಡಿಗೆಗಳು, ಮೂಲಸೌಕರ್ಯದ ಕೊರತೆ, ಅಪರಾಧಗಳು, ಹೀಗೆ ಅನೇಕ ವಿಚಾರಗಳಿಂದ ಬೆಂಗಳೂರು ಬೇಡ ಎನ್ನುವ ನಿರ್ಧಾರಕ್ಕೆ ಬರಬೇಕಾದ ಸ್ಥಿತಿ ಬಂದಿದೆ.” ಎಂದು ಈ ಪೋಸ್ಟ್​​ನಲ್ಲಿ ಹೇಳಿಕೊಂಡಿದ್ದಾರೆ.

ವ್ಯಕ್ತಿಯೊಬ್ಬರು, ಬೆಂಗಳೂರಿನ ಜೀವನ ಸಾಕಾಗಿದೆ ಎನ್ನುವ ಮೂಲಕ ಬಹಳ ಹತಾಶೆ ವ್ಯಕ್ತಪಡಿಸಿದ್ದಾರೆ. “ಒಂದು ಕಾಲದಲ್ಲಿ ಎಲ್ಲರನ್ನು ಆಕರ್ಷಿಸುತ್ತಿದ್ದ, ಹಸಿರಿಗೆ ಹೆಸರುವಾಸಿಯಾಗಿದ್ದ ಬೆಂಗಳೂರು ಇಂದು ಅಧಿಕ ಜನಸಂಖ್ಯೆ ಮತ್ತು ಕಳಪೆ ಯೋಜನೆಯ ಒತ್ತಡದಿಂದ ಹೇಗೆ ಕುಗ್ಗುತ್ತಿದೆ ನೋಡಿ. ಇಲ್ಲಿನ ಜನ ದಟ್ಟಣೆ, ನೀರಿನ ಕೊರತೆ, ಹೆಚ್ಚುತ್ತಿರುವ ಬಾಡಿಗೆ, ಕಣ್ಮರೆಯಾಗುತ್ತಿರುವ ಮರಗಳು, ಪರಿಪೂರ್ಣವಾದ ಜೀವನ ಕಟ್ಟಿಕೊಳ್ಳುವ ಬದಲು ಜನ ವೇಗವಾಗಿ ಓಡುತ್ತಿದ್ದಾರೆ.” ಎಂದು ರೆಡ್ಡಿಟ್​​ನಲ್ಲಿ ಬರೆದುಕೊಂಡಿದ್ದು, ಇದೀಗ ಇದು ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಕಾರಣವಾಗಿದೆ.

ಇದನ್ನೂ ಓದಿ: ಗುಂಡಿಯಿಂದಾಗಿ ಕಾರು ರಿಪೇರಿಗೆ 23 ಸಾವಿರ ರೂ ಖರ್ಚು, ಗುಂಡಿ ಮುಚ್ಚಲು ನಾನು ಹಣ ಕೊಡ್ತೇನೆ ಎಂದ ನಿವಾಸಿ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇನ್ನು ಪೋಸ್ಟ್​ ನೋಡಿ ಹಲವು ಬಳಕೆದಾರರು, ಮಿತಿ ಮೀರಿ ಬೆಳೆಯುತ್ತಿರುವ ಬೆಂಗಳೂರು, ಕಂಪನಿಗಳು, ಅವಕಾಶಗಳು, ಭರವಸೆ ನೀಡುತ್ತಲೇ ಇರುವ ರಾಜಕಾರಣಿಗಳ ಬಗ್ಗೆ ಟೀಕಿಸಿದ್ದಾರೆ. ನಗರಕ್ಕೆ ಬೇಕಾದ ಮೂಲಸೌಕರ್ಯಗಳ ಬಗ್ಗೆ ಯಾರೂ ಕೂಡ ಯೋಚನೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರ ಬೆಂಗಳೂರಿನಲ್ಲಿ ಸ್ಥಳ ಎಲ್ಲಿದೆ? ನೀರು ಎಲ್ಲಿದೆ? ಈ ಬೆಳವಣಿಗೆ ನಿಜವಾಗಿ ಯಾರಿಗಾಗಿ? ನಿಗಮಗಳಿಗೆ ನೀಡುವ ತೆರಿಗೆಯಿಂದ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಹೊಸ ಕಂಪನಿಗಳು ತಮ್ಮ ಲಾಭಗಳನ್ನು ಮಾತ್ರ ಮಾಡುತ್ತಿದೆ. ಇಲ್ಲಿನ ಜನರ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Thu, 6 November 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!