AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?

ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಅವರು ಬೆಂಗಳೂರಿನ ತಮ್ಮ ನೆಚ್ಚಿನ ಟಾಪ್ 9 ಇಟಾಲಿಯನ್ ರೆಸ್ಟೋರೆಂಟ್‌ಗಳನ್ನು ಪಟ್ಟಿ ಮಾಡಿದ್ದಾರೆ. "ವಿಶ್ವ ಇಟಾಲಿಯನ್ ಪಾಕಪದ್ಧತಿಯ ವಾರ" ಕಾರ್ಯಕ್ರಮದಲ್ಲಿ ಅವರು ಈ ಸ್ಥಳಗಳನ್ನು ಹೆಸರಿಸಿದ್ದು, ಇಟಾಲಿಯನ್ ಆಹಾರ ಪ್ರಿಯರಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್ ಸೇರಿದಂತೆ ಪ್ರಮುಖ ರೆಸ್ಟೋರೆಂಟ್‌ಗಳು ಈ ಪಟ್ಟಿಯಲ್ಲಿ ಸೇರಿವೆ.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2025 | 3:57 PM

Share

ಇಟಲಿಯ ರಾಜತಾಂತ್ರಿಕ ಜಿಯಾಂಡೊಮೆನಿಕೊ ಮಿಲಾನೊ (Giandomenico Milano) “ನಾನು ಪ್ರತಿದಿನ ಮಸಾಲೆ ದೋಸೆ ತಿನ್ನಬಲ್ಲೆ, ಬೆಂಗಳೂರಿನಲ್ಲಿ ಅದು ನನ್ನ ನೆಚ್ಚಿನ ಉಪಹಾರ” ಎಂದು ಈ ಹಿಂದೆ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದ್ದಾರೆ. ಬೆಂಗಳೂರಿನಲ್ಲಿರುವ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ, ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳ ಬಗ್ಗೆ ಹೇಳಿದ್ದಾರೆ. ವಿಶ್ವದ ಇಟಾಲಿಯನ್ ಪಾಕಪದ್ಧತಿಯ ವಾರ ಎಂಬ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೇಳಿದ್ದರು. ಬೆಂಗಳೂರಿನಲ್ಲಿರುವ ಇಟಾಲಿಯನ್ ರೆಸ್ಟೋರೆಂಟ್‌ ಯಾವುದು ಎಂಬುದನ್ನು ಇಲ್ಲಿ ತಿಳಿಸಿದೆ.

ಇಟಲಿ ಆಹಾರಗಳನ್ನು ಸೇವನೆ ಮಾಡಬೇಕೆಂದರೆ ಅವರು ಬೆಂಗಳೂರಿನ ಈ ಹೋಟೆಲ್​​ಗಳಿಗೆ ಹೋಗುತ್ತಾರೆ. ಈ ಬಗ್ಗೆ ಸೆರೆನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. ಅವರು ಈ ವಿಡಿಯೋದಲ್ಲಿ ಹೇಳಿರುವ ಪ್ರಕಾರ, ಇಟಾಲಿಯನ್ ಫುಡ್ ವೀಕ್ ಕಾರ್ಯಕ್ರಮದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅತ್ಯುತ್ತಮ ಇಟಾಲಿಯನ್ ಆಹಾರವನ್ನು ನೀಡುವ ರೆಸ್ಟೋರೆಂಟ್‌ಗಳನ್ನು ಅವರು ಪಟ್ಟಿ ಮಾಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್, ಚಿಯಾಂಟಿ, ಕ್ಯಾಪ್ರೆಸ್ ಅಟ್ ಶಾಂಗ್ರಿ-ಲಾ, ಟೊಸ್ಕಾನೊ, ಟಿಯಾಮೊ, ರೋಸ್ಮರಿನೊ, ಪಿನೋಚ್ಚಿಯೊ ರಿಸ್ಟೊರಾಂಟೆ ಮತ್ತು ಲಾ ಜಿಯೋಯಾ ಇವುಗಳು ಇಟಾಲಿಯನ್​​​​​ ಫುಡ್​​​ ನೀಡುವ ಬೆಂಗಳೂರಿನ ಪ್ರಸಿದ್ಧ ರೆಸ್ಟೋರೆಂಟ್​​​ಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆ ಹಸಿದಾಗ ಬರುವ ಶಬ್ದ ಕೇಳಿ ಫುಡ್​​​ ಆರ್ಡರ್ ಮಾಡುವ ಎಐ ಸಾಧನ ಕಂಡುಹಿಡಿದ ಮಂಗಳೂರಿನ ಯುವಕ

ಇನ್ನು ನೆಟ್ಟಿಗರು ಈ ಪೋಸ್ಟ್​​​ಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ನೆಟ್ಟಿಗ, ಇಲ್ಲ ಬೊಲೊಗ್ನಾ ಅತ್ಯುತ್ತಮ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ. ಇದನ್ನು ಯಾಕೆ ಇಲ್ಲಿ ಉಲ್ಲೇಖಿಸಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ಮತ್ತೊಬ್ಬ ನೆಟ್ಟಿಗ, ಹೌದು ಬೊಲೊಗ್ನಾ ರೆಸ್ಟೋರೆಂಟ್​​​ ತುಂಬಾ ಒಳ್ಳೆಯ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ