AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?

ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಅವರು ಬೆಂಗಳೂರಿನ ತಮ್ಮ ನೆಚ್ಚಿನ ಟಾಪ್ 9 ಇಟಾಲಿಯನ್ ರೆಸ್ಟೋರೆಂಟ್‌ಗಳನ್ನು ಪಟ್ಟಿ ಮಾಡಿದ್ದಾರೆ. "ವಿಶ್ವ ಇಟಾಲಿಯನ್ ಪಾಕಪದ್ಧತಿಯ ವಾರ" ಕಾರ್ಯಕ್ರಮದಲ್ಲಿ ಅವರು ಈ ಸ್ಥಳಗಳನ್ನು ಹೆಸರಿಸಿದ್ದು, ಇಟಾಲಿಯನ್ ಆಹಾರ ಪ್ರಿಯರಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್ ಸೇರಿದಂತೆ ಪ್ರಮುಖ ರೆಸ್ಟೋರೆಂಟ್‌ಗಳು ಈ ಪಟ್ಟಿಯಲ್ಲಿ ಸೇರಿವೆ.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2025 | 3:57 PM

Share

ಇಟಲಿಯ ರಾಜತಾಂತ್ರಿಕ ಜಿಯಾಂಡೊಮೆನಿಕೊ ಮಿಲಾನೊ (Giandomenico Milano) “ನಾನು ಪ್ರತಿದಿನ ಮಸಾಲೆ ದೋಸೆ ತಿನ್ನಬಲ್ಲೆ, ಬೆಂಗಳೂರಿನಲ್ಲಿ ಅದು ನನ್ನ ನೆಚ್ಚಿನ ಉಪಹಾರ” ಎಂದು ಈ ಹಿಂದೆ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದ್ದಾರೆ. ಬೆಂಗಳೂರಿನಲ್ಲಿರುವ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ, ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳ ಬಗ್ಗೆ ಹೇಳಿದ್ದಾರೆ. ವಿಶ್ವದ ಇಟಾಲಿಯನ್ ಪಾಕಪದ್ಧತಿಯ ವಾರ ಎಂಬ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೇಳಿದ್ದರು. ಬೆಂಗಳೂರಿನಲ್ಲಿರುವ ಇಟಾಲಿಯನ್ ರೆಸ್ಟೋರೆಂಟ್‌ ಯಾವುದು ಎಂಬುದನ್ನು ಇಲ್ಲಿ ತಿಳಿಸಿದೆ.

ಇಟಲಿ ಆಹಾರಗಳನ್ನು ಸೇವನೆ ಮಾಡಬೇಕೆಂದರೆ ಅವರು ಬೆಂಗಳೂರಿನ ಈ ಹೋಟೆಲ್​​ಗಳಿಗೆ ಹೋಗುತ್ತಾರೆ. ಈ ಬಗ್ಗೆ ಸೆರೆನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. ಅವರು ಈ ವಿಡಿಯೋದಲ್ಲಿ ಹೇಳಿರುವ ಪ್ರಕಾರ, ಇಟಾಲಿಯನ್ ಫುಡ್ ವೀಕ್ ಕಾರ್ಯಕ್ರಮದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅತ್ಯುತ್ತಮ ಇಟಾಲಿಯನ್ ಆಹಾರವನ್ನು ನೀಡುವ ರೆಸ್ಟೋರೆಂಟ್‌ಗಳನ್ನು ಅವರು ಪಟ್ಟಿ ಮಾಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್, ಚಿಯಾಂಟಿ, ಕ್ಯಾಪ್ರೆಸ್ ಅಟ್ ಶಾಂಗ್ರಿ-ಲಾ, ಟೊಸ್ಕಾನೊ, ಟಿಯಾಮೊ, ರೋಸ್ಮರಿನೊ, ಪಿನೋಚ್ಚಿಯೊ ರಿಸ್ಟೊರಾಂಟೆ ಮತ್ತು ಲಾ ಜಿಯೋಯಾ ಇವುಗಳು ಇಟಾಲಿಯನ್​​​​​ ಫುಡ್​​​ ನೀಡುವ ಬೆಂಗಳೂರಿನ ಪ್ರಸಿದ್ಧ ರೆಸ್ಟೋರೆಂಟ್​​​ಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆ ಹಸಿದಾಗ ಬರುವ ಶಬ್ದ ಕೇಳಿ ಫುಡ್​​​ ಆರ್ಡರ್ ಮಾಡುವ ಎಐ ಸಾಧನ ಕಂಡುಹಿಡಿದ ಮಂಗಳೂರಿನ ಯುವಕ

ಇನ್ನು ನೆಟ್ಟಿಗರು ಈ ಪೋಸ್ಟ್​​​ಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ನೆಟ್ಟಿಗ, ಇಲ್ಲ ಬೊಲೊಗ್ನಾ ಅತ್ಯುತ್ತಮ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ. ಇದನ್ನು ಯಾಕೆ ಇಲ್ಲಿ ಉಲ್ಲೇಖಿಸಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ಮತ್ತೊಬ್ಬ ನೆಟ್ಟಿಗ, ಹೌದು ಬೊಲೊಗ್ನಾ ರೆಸ್ಟೋರೆಂಟ್​​​ ತುಂಬಾ ಒಳ್ಳೆಯ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್