Video: ಎಲೆಕ್ಷನ್​​​ ಟಿಕೆಟ್‌ಗಾಗಿ ನಡೆಯಿತು ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ.

ಆಂಧ್ರಪ್ರದೇಶ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ ,ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು. ಅಂತಿಮವಾಗಿ ಪುಟ್ಟಪರ್ತಿ ವೈಸಿಪಿ ಟಿಕೆಟ್‌ಗೆ ಶ್ರೀಧರ್ ರೆಡ್ಡಿ ಹೆಸರನ್ನು ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ಬೋಳಿಸಿದ್ದಾನೆ.

ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿ ಟಿಕೆಟ್ ನೀಡಿರುವುದನ್ನು ಮಹೇಶ್ವರರೆಡ್ಡಿ ಈ ರೀತಿಯಾಗಿ ಪ್ರತಿಭಟಿಸಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಗಬಾರದು ಎಂದು ಪಣತೊಟ್ಟಿರುವ ಮಹೇಶ್ವರ್ ರೆಡ್ಡಿ ಈ ಹಿಂದೆ ಶಾಸಕ ಶ್ರೀಧರ್ ರೆಡ್ಡಿ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಬಂಗಾರರಾಜು ಮಹೇಶ್ವರ್ ರೆಡ್ಡಿ ಅವರು ಅರ್ಧ ತಲೆಕೂದಲು ಮೀಸೆ ಬೋಳಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sun, 17 March 24

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us