AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಸ್ಕಲೇಟರ್​​ನಲ್ಲಿ  ಚಲಿಸುತ್ತಿರುವ ವೇಳೆ  ಕೆಳಗೆ ಇಣುಕಲು ಹೋಗಿ ಪಜೀತಿಗೆ ಸಿಲುಕಿದ ಬಾಲಕ

ಕೆಲವೊಮ್ಮೆ ಮಕ್ಕಳು ಮಾಡುವ ತರ್ಲೆ ತುಂಟಾಟಗಳು  ಅವರನ್ನೇ ಪಜೀತಿಗೆ ಸಿಲುಕಿಸುತ್ತವೆ. ಇಂತಹ ಸಾಕಷ್ಟು ಉದಾಹರಣೆಗಳನ್ನು ನೀವು ನೋಡಿರಬಹುದಲ್ವಾ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಾಲ್ ಒಂದರಲ್ಲಿ ಬಾಲಕನೊಬ್ಬ ಎಸ್ಕಲೇಟರ್ ನಲ್ಲಿ ಚಲಿಸುತ್ತಿದ್ದಾಗ, ಮೇಲಿಂದ ಕೆಳಗೆ ಇಣುಕಲು ಹೋಗಿ ಪಜೀತಿಗೆ ಸಿಲುಕಿದ್ದಾನೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.

Viral Video: ಎಸ್ಕಲೇಟರ್​​ನಲ್ಲಿ  ಚಲಿಸುತ್ತಿರುವ ವೇಳೆ  ಕೆಳಗೆ ಇಣುಕಲು ಹೋಗಿ ಪಜೀತಿಗೆ ಸಿಲುಕಿದ ಬಾಲಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 12, 2024 | 12:53 PM

Share

ಮಕ್ಕಳು ಎಂದ ಮೇಲೆ ತರ್ಲೆ ತುಂಟಾಟ ಸಹಜ. ಈ ಮಕ್ಕಳಿಗೆ ಎಲ್ಲಾ ವಿಷಯದಲ್ಲೂ ಕುತೂಹಲ ತುಸು ಹೆಚ್ಚು. ಹೀಗೆ ಇವರುಗಳು  ಬೇರೆ ಬೇರೆ ಕುತೂಹಲಕಾರಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ರೀತಿ ಚಟುವಟಿಕೆಗಳು ಕೆಲವೊಮ್ಮೆ ಮಕ್ಕಳ ಪ್ರಾಣಕ್ಕೆಯೇ ಅಪಾಯ ತಂದೊಡ್ಡುತ್ತವೆ. ಇಂತಹ ಸಾಕಷ್ಟು ಉದಾಹರಣೆಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಬಾಲಕನೊಬ್ಬ ಮಾಲ್ ಒಂದರಲ್ಲಿ ಎಸ್ಕಲೇಟರ್ ನಲ್ಲಿ ಕೆಳಗಿಂದ ಮೇಲೆ ಹೋಗುತ್ತಿರುವ ವೇಳೆ, ಕುತೂಹಲದಿಂದ ಏನನ್ನೋ ಇಣುಕಲು ಹೋಗಿ ಪಜೀತಿಗೆ ಸಿಳುಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

ಈ ವೈರಲ್ ವಿಡಿಯೋವನ್ನು @FAFO_TV ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವಿಡಿಯೋದಲ್ಲಿ ಬಾಲಕರಿಬ್ಬರು ಮಾಲ್ ಒಂದರಲ್ಲಿ ಎಕ್ಸಿಲೇಟರ್ ನಲ್ಲಿ ಕೆಳಗಿಂದ ಮೇಲೆ ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಅದರಲ್ಲಿ ತುಂಟ ಹುಡುಗನೊಬ್ಬ   ಮೇಲಿಂದ ಕೆಳಗೆ ಇಣುಕಿ ಏನೋ ತರ್ಲೆ ಕೆಲಸ ಮಾಡಲು ಹೋಗುತ್ತಾನೆ. ಹೀಗೆ ಎಸ್ಕಲೇಟರ್ ಮೇಲೆ ಚಲಿಸುತ್ತಾ ಹೋದಂತೆ ಆ ಬಾಲಕನ ತಲೆ ಗೋಡೆ ಮತ್ತು ಎಸ್ಕಲೇಟರ್ ಮಧ್ಯೆ ಸಿಕ್ಕಿ ಹಾಕಿಕೊಳ್ಳುತ್ತದೆ. ಆ ತಕ್ಷಣ  ಧವಿಸಿದ ರಕ್ಷಣಾ ಸಿಬ್ಬಂದಿಗಳು  ಬಾಲಕನನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಇದನ್ನೂ ಓದಿ: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 15.5 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಭಯಾನಕ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದು, ಬಾಲಕನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ