Viral Video : ಭೂಪಾಲದ ತಿಂಡಿವ್ಯಾಪಾರಿಯ ಕೌಶಲಕ್ಕೆ ನೆಟ್ಟಿಗರ ಬೆರಗು

Namkeen Seller : ತಿಂಡಿಗಳ ಹೆಸರು, ಅವುಗಳ ಬೆಲೆಯೇ ಇವರ ಈ ಹಾಡಿನಲ್ಲಿರುವ ಸಾಹಿತ್ಯ. ತಿಂಡಿಮಾರುವ ಇವರ ಈ ಲಯಕ್ಕೆ ಮನಸೋತ ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ.

Viral Video : ಭೂಪಾಲದ ತಿಂಡಿವ್ಯಾಪಾರಿಯ ಕೌಶಲಕ್ಕೆ ನೆಟ್ಟಿಗರ ಬೆರಗು
ತಿಂಡಿವ್ಯಾಪಾರಿ ನಸೀಮ್ ಅಹಮ್ಮದ್
Follow us
| Updated By: ಶ್ರೀದೇವಿ ಕಳಸದ

Updated on:Sep 07, 2022 | 11:05 AM

Viral Video : ಬೀದಿಬದಿಯಲ್ಲೋ ಅಥವಾ ಸಂತೆಯಲ್ಲೋ ಮಾರಾಟಗಾರರು ಒಂದೊಂದು ರೀತಿಯಲ್ಲಿ ಗ್ರಾಹಕರನ್ನು ಆಕರ್ಷಿಸುವುದನ್ನು ನೀವು ನೋಡಿರುತ್ತೀರಿ, ಕೇಳಿರುತ್ತೀರಿ. ನಿಜದಲ್ಲಿ ಅದು ಒಂದು ರೂಢಿಸಿಕೊಂಡ ಕೌಶಲವೇ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿರುವ ಈ ವಿಡಿಯೋ ಗಮನಿಸಿ. ಭೂಪಾಲದಲ್ಲಿ ತಿಂಡಿವ್ಯಾಪಾರಿಯಾಗಿರುವ ಇವರು ವ್ಯಾಪಾರವನ್ನು ಕುದುರಿಸಿಕೊಳ್ಳಲು ನಿತ್ಯವೂ ಹೀಗೆ ರಾಗಬದ್ಧವಾಗಿ, ಜಿಂಗಲ್ಸ್​ ಮಾದರಿಯಲ್ಲಿ ಹಾಡಿ ಗ್ರಾಹಕರನ್ನು ತಲುಪಲು ಪ್ರಯತ್ನಿಸುತ್ತಾರೆ. ಈ ವಿಡಿಯೋ ನೋಡುತ್ತಿದ್ದಂತೆ ಕೆಲ ಕ್ಷಣಗಳವರೆಗೆ ನಿಮ್ಮ ಮನಸ್ಸು ಬಾಲ್ಯದ ಬೀದಿ, ಕೇರಿ, ಸಂತೆಗಳಲ್ಲಿ ಓಡಾಡಿ ಬರುವುದು ಖಚಿತ! ಆನ್​ಲೈನ್​ನಲ್ಲಿಯೂ ಇದು ಈ ಕಾರಣಕ್ಕೆ ಗಮನ ಸೆಳೆದಿರಲು ಸಾಕು. ಈ ವಿಡಿಯೋ ಅನ್ನು 1,00,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತನ್ನ ಸ್ಕೂಟರ್ ಮೇಲೆ ಕುಳಿತು, ಚೀಲದಲ್ಲಿ ತಿಂಡಿಗಳನ್ನು ತುಂಬಿಸಿಕೊಂಡು ತನ್ನ ಪಾಡಿಗೆ ತಾನು ಹೀಗೆ ಒಂದು ಲಯದಲ್ಲಿ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುವ ಈ ಮಾರಾಟಗಾರರ ಹೆಸರು ನಸೀಮ್ ಅಹಮದ್. ತಿಂಡಿಗಳ ಹೆಸರು, ವಿವರ ಮತ್ತು ಅವುಗಳ ಬೆಲೆಯೇ ಇವರ ಈ ಹಾಡಿನಲ್ಲಿರುವ ಸಾಹಿತ್ಯ. ಈ ರೀತಿಗೆ ಮನಸೋತ ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡುತ್ತಿದ್ದಂತೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಈ ವಿಡಿಯೋವನ್ನು ಮನೀಶ್‌ಬಿಪಿಎಲ್ ಎಂಬ ಖಾತೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಭೂಪಾಲಿ ನಮಕೀನ್​ವಾಲಾ; ಭೂಪಾಲದಲ್ಲಿ ಪ್ರತಿಭೆಗಳಿಗೇನು ಕೊರತೆ ಇಲ್ಲ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್​ ಮಾಡಲಾಗಿದೆ. 500 ಕ್ಕೂ ಹೆಚ್ಚು ರೀಟ್ವೀಟ್ ಆಗಿದೆ.

ಹೊಟ್ಟೆಪಾಡು ಎನ್ನುವುದು ಎಲ್ಲರ ನಿತ್ಯದ ಹಾಡು. ಅದನ್ನು ಬಹುಶಃ ಯಾರೂ ಕಲಿಸಿಕೊಡಬೇಕಿಲ್ಲ. ಅನಿವಾರ್ಯತೆಯೇ ಹೊಸ ಸೃಷ್ಟಿಯ ತಾಯಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 10:17 am, Wed, 7 September 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ