AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

ಮಾರಾಟಗಾರನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಕಿಂಗ್​ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​
ಕೊಳಕು ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿರುವ ದೃಶ್ಯ
TV9 Web
| Edited By: |

Updated on:Oct 29, 2021 | 10:09 AM

Share

ತರಕಾರಿ ಮಾರಾಟಗಾರನೊಬ್ಬನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಭೋಪಾಲ್​ನ ಸಿಂಧಿ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಚರಂಡಿ ನೀರಿನಲ್ಲಿ ತರಕಾರಿ ತೊಳೆಯುವುದು ಹಾನಿಕಾರಕ ಎಂದು ವಿಡಿಯೊ ಮಾಡಿದ ವ್ಯಕ್ತಿ ಹೇಳುತ್ತಿರುವುದು ಕೇಳಿ ಬರುತ್ತದೆ. ಕೊಳಕು ನೀರಿನಲ್ಲಿ ತಿನ್ನುವ ತರಕಾರಿಗಳನ್ನು ತೊಳೆಯಬೇಡಿ ಎಂದು ವ್ಯಕ್ತಿ ಪದೇ ಪದೇ ಹೇಳುತ್ತಿದ್ದರೂ, ಮಾರಟಗಾರನು ಗಮನ ಕೊಡಲಿಲ್ಲ. ಈ ದೃಶ್ಯ ನೋಡಿದರೆ ನಿನ್ನ ಬಳಿ ಯಾರೂ ತರಕಾರಿ ಖರೀದಿಸುವುದಿಲ್ಲ ಎಂದು ವ್ಯಕ್ತಿ ಹೇಳುತ್ತಿದ್ದರೂ ಸಹ ಮಾರಾಟಗಾರ ನಿರ್ಲಕ್ಷ್ಯ ತೋರಿಸುತ್ತಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಗಮನವಿರಲಿ, ನಿಮ್ಮ ಆರೋಗ್ಯದ ಜೊತೆ ಆಟವಾಡಬೇಡಿ. ನೀವು ಇಂತಹ ತರಕಾರಿಗಳನ್ನು ಖರೀದಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭೋಪಾಲ್​ನ ಸಿಂಧಿ ಕಾಲೊನಿಯಲ್ಲಿ ತರಕಾರಿಗಳನ್ನು ಚರಂಡಿ ನೀರಿನಲ್ಲಿ ತೊಳೆಯಲಾಗುತ್ತಿದೆ ದಯವಿಟ್ಟು ಈ ವಿಷಯದ ಬಗ್ಗೆ ಗಮನವಿರಲಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ವೈರಲ್ ಆದ ನಂತರ, ಮಾರಾಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಭೋಪಾಲ್​ನ ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಮಾರಾಟಗಾರನ ಬಗ್ಗೆ ತಿಳಿದು ಕಠಿಣ ಕ್ರಮ ಕೈಗೊಳ್ಳಬೇಕು, ನಾಗರಿಕರ ಆರೋಗ್ಯದೊಂದಿಗೆ ಯಾರೂ ಆಟವಾಡುವಂತಿಲ್ಲ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

Published On - 9:54 am, Fri, 29 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್