AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

ಮಾರಾಟಗಾರನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಕಿಂಗ್​ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​
ಕೊಳಕು ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿರುವ ದೃಶ್ಯ
TV9 Web
| Edited By: |

Updated on:Oct 29, 2021 | 10:09 AM

Share

ತರಕಾರಿ ಮಾರಾಟಗಾರನೊಬ್ಬನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಭೋಪಾಲ್​ನ ಸಿಂಧಿ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಚರಂಡಿ ನೀರಿನಲ್ಲಿ ತರಕಾರಿ ತೊಳೆಯುವುದು ಹಾನಿಕಾರಕ ಎಂದು ವಿಡಿಯೊ ಮಾಡಿದ ವ್ಯಕ್ತಿ ಹೇಳುತ್ತಿರುವುದು ಕೇಳಿ ಬರುತ್ತದೆ. ಕೊಳಕು ನೀರಿನಲ್ಲಿ ತಿನ್ನುವ ತರಕಾರಿಗಳನ್ನು ತೊಳೆಯಬೇಡಿ ಎಂದು ವ್ಯಕ್ತಿ ಪದೇ ಪದೇ ಹೇಳುತ್ತಿದ್ದರೂ, ಮಾರಟಗಾರನು ಗಮನ ಕೊಡಲಿಲ್ಲ. ಈ ದೃಶ್ಯ ನೋಡಿದರೆ ನಿನ್ನ ಬಳಿ ಯಾರೂ ತರಕಾರಿ ಖರೀದಿಸುವುದಿಲ್ಲ ಎಂದು ವ್ಯಕ್ತಿ ಹೇಳುತ್ತಿದ್ದರೂ ಸಹ ಮಾರಾಟಗಾರ ನಿರ್ಲಕ್ಷ್ಯ ತೋರಿಸುತ್ತಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಗಮನವಿರಲಿ, ನಿಮ್ಮ ಆರೋಗ್ಯದ ಜೊತೆ ಆಟವಾಡಬೇಡಿ. ನೀವು ಇಂತಹ ತರಕಾರಿಗಳನ್ನು ಖರೀದಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭೋಪಾಲ್​ನ ಸಿಂಧಿ ಕಾಲೊನಿಯಲ್ಲಿ ತರಕಾರಿಗಳನ್ನು ಚರಂಡಿ ನೀರಿನಲ್ಲಿ ತೊಳೆಯಲಾಗುತ್ತಿದೆ ದಯವಿಟ್ಟು ಈ ವಿಷಯದ ಬಗ್ಗೆ ಗಮನವಿರಲಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ವೈರಲ್ ಆದ ನಂತರ, ಮಾರಾಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಭೋಪಾಲ್​ನ ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಮಾರಾಟಗಾರನ ಬಗ್ಗೆ ತಿಳಿದು ಕಠಿಣ ಕ್ರಮ ಕೈಗೊಳ್ಳಬೇಕು, ನಾಗರಿಕರ ಆರೋಗ್ಯದೊಂದಿಗೆ ಯಾರೂ ಆಟವಾಡುವಂತಿಲ್ಲ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

Published On - 9:54 am, Fri, 29 October 21

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ