AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

ಮಾರಾಟಗಾರನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಕಿಂಗ್​ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​
ಕೊಳಕು ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿರುವ ದೃಶ್ಯ
TV9 Web
| Edited By: |

Updated on:Oct 29, 2021 | 10:09 AM

Share

ತರಕಾರಿ ಮಾರಾಟಗಾರನೊಬ್ಬನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಭೋಪಾಲ್​ನ ಸಿಂಧಿ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಚರಂಡಿ ನೀರಿನಲ್ಲಿ ತರಕಾರಿ ತೊಳೆಯುವುದು ಹಾನಿಕಾರಕ ಎಂದು ವಿಡಿಯೊ ಮಾಡಿದ ವ್ಯಕ್ತಿ ಹೇಳುತ್ತಿರುವುದು ಕೇಳಿ ಬರುತ್ತದೆ. ಕೊಳಕು ನೀರಿನಲ್ಲಿ ತಿನ್ನುವ ತರಕಾರಿಗಳನ್ನು ತೊಳೆಯಬೇಡಿ ಎಂದು ವ್ಯಕ್ತಿ ಪದೇ ಪದೇ ಹೇಳುತ್ತಿದ್ದರೂ, ಮಾರಟಗಾರನು ಗಮನ ಕೊಡಲಿಲ್ಲ. ಈ ದೃಶ್ಯ ನೋಡಿದರೆ ನಿನ್ನ ಬಳಿ ಯಾರೂ ತರಕಾರಿ ಖರೀದಿಸುವುದಿಲ್ಲ ಎಂದು ವ್ಯಕ್ತಿ ಹೇಳುತ್ತಿದ್ದರೂ ಸಹ ಮಾರಾಟಗಾರ ನಿರ್ಲಕ್ಷ್ಯ ತೋರಿಸುತ್ತಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಗಮನವಿರಲಿ, ನಿಮ್ಮ ಆರೋಗ್ಯದ ಜೊತೆ ಆಟವಾಡಬೇಡಿ. ನೀವು ಇಂತಹ ತರಕಾರಿಗಳನ್ನು ಖರೀದಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭೋಪಾಲ್​ನ ಸಿಂಧಿ ಕಾಲೊನಿಯಲ್ಲಿ ತರಕಾರಿಗಳನ್ನು ಚರಂಡಿ ನೀರಿನಲ್ಲಿ ತೊಳೆಯಲಾಗುತ್ತಿದೆ ದಯವಿಟ್ಟು ಈ ವಿಷಯದ ಬಗ್ಗೆ ಗಮನವಿರಲಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ವೈರಲ್ ಆದ ನಂತರ, ಮಾರಾಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಭೋಪಾಲ್​ನ ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಮಾರಾಟಗಾರನ ಬಗ್ಗೆ ತಿಳಿದು ಕಠಿಣ ಕ್ರಮ ಕೈಗೊಳ್ಳಬೇಕು, ನಾಗರಿಕರ ಆರೋಗ್ಯದೊಂದಿಗೆ ಯಾರೂ ಆಟವಾಡುವಂತಿಲ್ಲ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

Published On - 9:54 am, Fri, 29 October 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್