Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

ಮಾರಾಟಗಾರನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಕಿಂಗ್​ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​
ಕೊಳಕು ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿರುವ ದೃಶ್ಯ
Follow us
TV9 Web
| Updated By: shruti hegde

Updated on:Oct 29, 2021 | 10:09 AM

ತರಕಾರಿ ಮಾರಾಟಗಾರನೊಬ್ಬನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಭೋಪಾಲ್​ನ ಸಿಂಧಿ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಚರಂಡಿ ನೀರಿನಲ್ಲಿ ತರಕಾರಿ ತೊಳೆಯುವುದು ಹಾನಿಕಾರಕ ಎಂದು ವಿಡಿಯೊ ಮಾಡಿದ ವ್ಯಕ್ತಿ ಹೇಳುತ್ತಿರುವುದು ಕೇಳಿ ಬರುತ್ತದೆ. ಕೊಳಕು ನೀರಿನಲ್ಲಿ ತಿನ್ನುವ ತರಕಾರಿಗಳನ್ನು ತೊಳೆಯಬೇಡಿ ಎಂದು ವ್ಯಕ್ತಿ ಪದೇ ಪದೇ ಹೇಳುತ್ತಿದ್ದರೂ, ಮಾರಟಗಾರನು ಗಮನ ಕೊಡಲಿಲ್ಲ. ಈ ದೃಶ್ಯ ನೋಡಿದರೆ ನಿನ್ನ ಬಳಿ ಯಾರೂ ತರಕಾರಿ ಖರೀದಿಸುವುದಿಲ್ಲ ಎಂದು ವ್ಯಕ್ತಿ ಹೇಳುತ್ತಿದ್ದರೂ ಸಹ ಮಾರಾಟಗಾರ ನಿರ್ಲಕ್ಷ್ಯ ತೋರಿಸುತ್ತಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಗಮನವಿರಲಿ, ನಿಮ್ಮ ಆರೋಗ್ಯದ ಜೊತೆ ಆಟವಾಡಬೇಡಿ. ನೀವು ಇಂತಹ ತರಕಾರಿಗಳನ್ನು ಖರೀದಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭೋಪಾಲ್​ನ ಸಿಂಧಿ ಕಾಲೊನಿಯಲ್ಲಿ ತರಕಾರಿಗಳನ್ನು ಚರಂಡಿ ನೀರಿನಲ್ಲಿ ತೊಳೆಯಲಾಗುತ್ತಿದೆ ದಯವಿಟ್ಟು ಈ ವಿಷಯದ ಬಗ್ಗೆ ಗಮನವಿರಲಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ವೈರಲ್ ಆದ ನಂತರ, ಮಾರಾಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಭೋಪಾಲ್​ನ ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಮಾರಾಟಗಾರನ ಬಗ್ಗೆ ತಿಳಿದು ಕಠಿಣ ಕ್ರಮ ಕೈಗೊಳ್ಳಬೇಕು, ನಾಗರಿಕರ ಆರೋಗ್ಯದೊಂದಿಗೆ ಯಾರೂ ಆಟವಾಡುವಂತಿಲ್ಲ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

Published On - 9:54 am, Fri, 29 October 21

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು