AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಯುವತಿಯ ಶವ ಪತ್ತೆ

ಸೋಶಿಯಲ್​​ ಮೀಡಿಯಾದ ಮೂಲಕ ಆರೋಪಿ ವಿನೋದ್​​ಗೆ ಪರಿಚಯವಾಗಿದ್ದ ಶೀತಲ್. ಮೇ. 05ರಂದು ಮನೆಯಲ್ಲಿದ್ದ 10 ಸಾವಿರ ದುಡ್ಡಿನೊಂದಿಗೆ ಶೀತಲ್​​ ಮನೆ ಬಿಟ್ಟು ವಿನೋದ್​ ಜೊತೆಗೆ ಓಡಿ ಹೋಗಿದ್ದಾಳೆ. ಬಳಿಕ ಈ ಜೋಡಿ ಮನಾಲಿಗೆ ತೆರಳಿ ಹೊಟೇಲ್​​​ ಒಂದರಲ್ಲಿ ತಂಗಿದ್ದಾರೆ. ಎರಡು ದಿನಗಳ ಬಳಿಕ ಹೊಟೇಲ್​ ಸಿಬ್ಬಂದಿಗೆ ಲಾಗೇಜ್​​ ಬ್ಯಾಗ್​​ನಲ್ಲಿ ಯುವತಿ ಶವ ಪತ್ತೆಯಾಗಿದೆ.

ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಯುವತಿಯ ಶವ ಪತ್ತೆ
ಪ್ರಿಯಕರನಿಗಾಗಿ ಮನೆಬಿಟ್ಟು ಬಂದ ಯುವತಿ ಲಾಗೇಜ್​​ ಬ್ಯಾಗ್​​ನಲ್ಲಿ ಶವವಾಗಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: May 19, 2024 | 11:27 AM

Share

ಭೋಪಾಲ್ (ಮಧ್ಯಪ್ರದೇಶ): ಭೋಪಾಲ್‌ನ ಶಹಪುರದ ಶೀತಲ್ ಕೌಶಲ್(24) ಎಂದು ಗುರುತಿಸಲಾದ ಯುವತಿಯ ಶವ ಹಿಮಾಚಲ ಪ್ರದೇಶದ ಮನಾಲಿಯ ಹೋಟೆಲ್‌ವೊಂದರಲ್ಲಿ ಪತ್ತೆಯಾಗಿದೆ. ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ಆಕೆಯ ಸ್ನೇಹಿತ ವಿನೋದ್ ಠಾಕೂರ್ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಆರೋಪಿ ವಿನೋದ್ ಆಕೆಯ ಮೃತ ದೇಹವನ್ನು ಲಾಗೇಜ್​​ ಬ್ಯಾಗ್​​ನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂಬುದು ವರದಿಯಾಗಿದೆ.

ಸೋಶಿಯಲ್​​ ಮೀಡಿಯಾದ ಮೂಲಕ ಆರೋಪಿ ವಿನೋದ್​​ಗೆ ಪರಿಚಯವಾಗಿದ್ದ ಶೀತಲ್. ಮೇ. 05ರಂದು ಮನೆಯಲ್ಲಿದ್ದ 10 ಸಾವಿರ ದುಡ್ಡಿನೊಂದಿಗೆ ಶೀತಲ್​​ ಮನೆ ಬಿಟ್ಟು ವಿನೋದ್​ ಜೊತೆಗೆ ಓಡಿ ಹೋಗಿದ್ದಾಳೆ. ಬಳಿಕ ಈ ಜೋಡಿ ಮನಾಲಿಗೆ ತೆರಳಿ ಹೊಟೇಲ್​​​ ಒಂದರಲ್ಲಿ ತಂಗಿದ್ದರು. ಆದರೆ ಬುಧವಾರ(ಮೇ.08) ಮನಾಲಿಯ ಹೊಟೇಲ್​ ಚೆಕ್ ಔಟ್ ಮಾಡುವ ವೇಳೆ ವಿನೋದ್​​ ಒಬ್ಬನನ್ನೇ ಕಂಡು ಹೋಟೆಲ್ ಸಿಬ್ಬಂದಿ ಅನುಮಾನಗೊಂಡಿದ್ದಾರೆ. ಇದಲ್ಲದೇ ಆತನ ಅಂಗಿಯ ಮೇಲಿನ ರಕ್ತದ ಕಲೆ ಕಂಡು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಆತ ಬ್ಯಾಗ್ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಬುಧವಾರ ತಡರಾತ್ರಿ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಇದನ್ನೂ ಓದಿ: ಪತ್ನಿಯನ್ನು ಕೊಂದು, ಮೃತದೇಹದೊಂದಿಗೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡ ಪತಿ

ಗಿರಿಧಾಮದ ಎಲ್ಲ ಗಡಿಗಳನ್ನು ಸೀಲ್ ಮಾಡಿದ ಪೊಲೀಸರು ಬುಧವಾರ ರಾತ್ರಿ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹರ್ಯಾಣ ಮೂಲದ ಆರೋಪಿ ವಿನೋದ್ ಠಾಕೂರ್ (23) ಮೂರು ವರ್ಷಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಶೀತಲ್ ಕೌಶಲ್ ಜೊತೆ ಸ್ನೇಹ ಬೆಳೆಸಿದ್ದ ಎಂದು ಮನಾಲಿ ಡಿಎಸ್ಪಿ ಕೆಡಿ ಶರ್ಮಾ ಫ್ರೀ ಪ್ರೆಸ್‌ಗೆ ತಿಳಿಸಿದ್ದಾರೆ.

ಯುವತಿಯನ್ನು ಕೊಂದ ಹಿಂದಿನ ನಿಖರ ಕಾರಣವನ್ನು ಆರೋಪಿ ಬಹಿರಂಗಪಡಿಸಿಲ್ಲ. ಶುಕ್ರವಾರ ಮನಾಲಿ ತಲುಪಿದ ಶೀತಲ್ ತಂದೆ ಮತ್ತು ಇಬ್ಬರು ಸಹೋದರರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ