AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಮನೆ ಬಾಗಿಲಿಗೆ ತಲುಪಿಸುವ ಯುವಕ ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿ

ಬಿಹಾರದ ಅರಾರಿಯಾ ಜಿಲ್ಲೆಯ ಪಟೇಗಾನಾ ಗ್ರಾಮದ ಸಾದಿಕ್ ಎಂಬಾತ ಸ್ಥಳೀಯ ಏಜೆನ್ಸಿಯೊಂದರಲ್ಲಿ ಗ್ಯಾಸ್ ಡೆಲಿವರಿ ಬಾಯ್ ಆಗಿ ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಇದೀಗಾ ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ.

ಗ್ಯಾಸ್ ಸಿಲಿಂಡರ್ ಮನೆ ಬಾಗಿಲಿಗೆ ತಲುಪಿಸುವ ಯುವಕ  ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿ
Gas Delivary BoyImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 20, 2024 | 4:38 PM

Share

ಬಿಹಾರ: ಅರಾರಿಯಾ ಜಿಲ್ಲೆಯ ಪಟೇಗಾನಾ ಗ್ರಾಮದ ಸಾದಿಕ್ ಎಂಬಾತ ಸ್ಥಳೀಯ ಏಜೆನ್ಸಿಯೊಂದರಲ್ಲಿ ಗ್ಯಾಸ್ ಡೆಲಿವರಿ ಬಾಯ್ ಆಗಿ ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಇತನಿಗೆ ಕ್ರಿಕೆಟ್‌ನಲ್ಲಿ ತುಂಬಾ ಆಸಕ್ತಿ ಇದ್ದಿದ್ದರಿಂದ ಡ್ರೀಮ್-11 ಆ್ಯಪ್‌ನಲ್ಲಿ ಆಗಾಗ್ಗೆ ಗೇಮ್‌ಗಳನ್ನು ಆಡುವ ಅಭ್ಯಾಸ ಹೊಂದಿದ್ದ. ಜನವರಿ 14 ರಂದು ಭಾರತ-ಅಫ್ಘಾನಿಸ್ತಾನ ಟಿ20 ಪಂದ್ಯದ ವೇಳೆ ಈತ ಡ್ರೀಮ್-11 ರಲ್ಲಿ ಫ್ಯಾಂಟಸಿ ಕ್ರಿಕೆಟ್ ಆಟವನ್ನು ಆಡಿದ್ದರು. ಡ್ರೀಮ್ 11ನಲ್ಲಿ ಜನರಿಗೆ ಕ್ರಿಕೆಟ್ ಪಂದ್ಯದ ಮೊದಲು ತಂಡವನ್ನು ರಚಿಸುವ ಆಯ್ಕೆಯನ್ನು ನೀಡುತ್ತದೆ. ಇದರಲ್ಲಿ, ನಿಮ್ಮ ಆಯ್ಕೆಯು ಸರಿಯಾಗಿದ್ದರೆ ನೀವು ಗೆಲ್ಲುವ ಅವಕಾಶವನ್ನು ಹೊಂದಿರುತ್ತೀರಿ. ಇದರಂತೆ ಈತ ಕೇವಲ 49 ರೂಪಾಯಿ ಹೂಡಿಕೆ ಮಾಡಿ ತಂಡ ರಚಿಸಿದ್ದಾನೆ. ಜೊತೆಗೆ ಈತ ಆಯ್ಕೆ ಮಾಡಿದ ಆಟಗಾರರು ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.

ಕೇವಲ 49 ರೂಪಾಯಿ ಹೂಡಿಕೆ ಮಾಡಿ 1.5 ಕೋಟಿ ರೂಪಾಯಿ ಗೆದ್ದಿದ್ದಾನೆ. ಇದರಿಂದ ಸಾದಿಕ್ ಮನೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಗ್ಯಾಸ್ ಏಜೆನ್ಸಿಯ ನಿರ್ದೇಶಕ ಜಿತೇಂದ್ರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ

ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗಿರುವ ಈ ಆಟವನ್ನು ಕೆಲವು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದು ಚಟವಾಗಿ ಪರಿಣಮಿಸಬಹುದು ಎಂದು ನಂಬಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 20 January 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು