AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ; ಮದುವೆ ಮಾಡಿಸಿದ ಮಾವ

ಪತ್ನಿಯನ್ನು ಕಳೆದುಕೊಂಡಿದ್ದ ಸಿಕಂದರ್ ಯಾದವ್​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದ. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆ ಗೀತಾದೇವಿಯ ಪತಿಗೆ ಅನುಮಾನ ಬಂದಿದೆ. ತನಿಖೆ ನಡೆಸಿದಾಗ ಇವರಿಬ್ಬರ ಅಕ್ರಮ ಸಂಬಂಧ ಬಯಲಾಗಿದೆ.

Video Viral: ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ; ಮದುವೆ ಮಾಡಿಸಿದ ಮಾವ
ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ
ಅಕ್ಷತಾ ವರ್ಕಾಡಿ
|

Updated on:Apr 30, 2024 | 12:50 PM

Share

ಬಿಹಾರ: ತನ್ನ ಹೆಂಡತಿಯ ತಾಯಿಯೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಳಿಯನನ್ನು ಮಾವ ಮತ್ತು ಗ್ರಾಮಸ್ಥರು ಸೇರಿ ಮದುವೆ ಮಾಡಿಸಿರುವ ಘಟನೆ ಬಿಹಾರದ ಬಂಕಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, 55 ವರ್ಷದ ದಿಲೇಶ್ವರ್ ದರ್ವೆ ಅವರ ಪತ್ನಿ ಗೀತಾ ದೇವಿ (45), ಅವರ ಅಳಿಯ ಸಿಕಂದರ್ ಯಾದವ್​​ನೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದರು. ಇತ್ತೀಚಿಗಷ್ಟೇ ಇವರಿಬ್ಬರ ಏಕಾಂತದ ಸಮಯದಲ್ಲಿ ರೆಡ್​​ ಹ್ಯಾಂಡ್​​ ಆಗಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ಪ್ರೇಮ ಕಹಾನಿ ಊರೆಲ್ಲಾ ಸುದ್ದಿಯಾಗುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಸೇರಿ ಅಳಿಯನೊಂದಿಗೆ ಅತ್ತೆಗೆ ಮದುವೆ ಮಾಡಿಸಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿದ್ದ ಸಿಕಂದರ್ ಯಾದವ್​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದನು. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆ ಗೀತಾದೇವಿಯ ಪತಿಗೆ ಅನುಮಾನ ಬಂದಿದೆ. ತನಿಖೆ ನಡೆಸಿದಾಗ ಇವರಿಬ್ಬರ ಅಕ್ರಮ ಸಂಬಂಧ ಬಯಲಿಗೆ ಬಂದಿದೆ. ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ದಿಲೇಶ್ವರ್ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಇದಲ್ಲದೇ ಸಿಕಂದರ್ ಯಾದವ್ ತನ್ನ ಅತ್ತೆಯ ಮೇಲಿನ ಪ್ರೀತಿಯನ್ನು ಪಂಚಾಯತ್ ಮತ್ತು ಗ್ರಾಮಸ್ಥರ ಮುಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾನೆ. ತರುವಾಯ, ದಿಲೇಶ್ವರ್ ಮತ್ತು ಗ್ರಾಮಸ್ಥರ ಒಪ್ಪಿಗೆಯೊಂದಿಗೆ, ಸಿಕಂದರ್ ಮತ್ತು ಗೀತಾದೇವಿ ವಿವಾಹ ಮಾಡಿಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 27 ಬಾರಿ ಗರ್ಭಿಣಿಯಾಗಿ 69 ಮಕ್ಕಳನ್ನು ಹೆತ್ತು ಗಿನ್ನಿಸ್ ವಿಶ್ವ ದಾಖಲೆಗೆ ಪಾತ್ರವಾಗಿದ್ದ ಮಹಿಳೆ

ಸದ್ಯ ಇವರಿಬ್ಬರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. @HalchalPriya ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜೊತೆಗೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿರುವುದನ್ನು ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:49 pm, Tue, 30 April 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ