AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ; ಮದುವೆ ಮಾಡಿಸಿದ ಮಾವ

ಪತ್ನಿಯನ್ನು ಕಳೆದುಕೊಂಡಿದ್ದ ಸಿಕಂದರ್ ಯಾದವ್​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದ. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆ ಗೀತಾದೇವಿಯ ಪತಿಗೆ ಅನುಮಾನ ಬಂದಿದೆ. ತನಿಖೆ ನಡೆಸಿದಾಗ ಇವರಿಬ್ಬರ ಅಕ್ರಮ ಸಂಬಂಧ ಬಯಲಾಗಿದೆ.

Video Viral: ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ; ಮದುವೆ ಮಾಡಿಸಿದ ಮಾವ
ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ
ಅಕ್ಷತಾ ವರ್ಕಾಡಿ
|

Updated on:Apr 30, 2024 | 12:50 PM

Share

ಬಿಹಾರ: ತನ್ನ ಹೆಂಡತಿಯ ತಾಯಿಯೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಳಿಯನನ್ನು ಮಾವ ಮತ್ತು ಗ್ರಾಮಸ್ಥರು ಸೇರಿ ಮದುವೆ ಮಾಡಿಸಿರುವ ಘಟನೆ ಬಿಹಾರದ ಬಂಕಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, 55 ವರ್ಷದ ದಿಲೇಶ್ವರ್ ದರ್ವೆ ಅವರ ಪತ್ನಿ ಗೀತಾ ದೇವಿ (45), ಅವರ ಅಳಿಯ ಸಿಕಂದರ್ ಯಾದವ್​​ನೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದರು. ಇತ್ತೀಚಿಗಷ್ಟೇ ಇವರಿಬ್ಬರ ಏಕಾಂತದ ಸಮಯದಲ್ಲಿ ರೆಡ್​​ ಹ್ಯಾಂಡ್​​ ಆಗಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ಪ್ರೇಮ ಕಹಾನಿ ಊರೆಲ್ಲಾ ಸುದ್ದಿಯಾಗುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಸೇರಿ ಅಳಿಯನೊಂದಿಗೆ ಅತ್ತೆಗೆ ಮದುವೆ ಮಾಡಿಸಿದ್ದಾರೆ.

ಪತ್ನಿಯನ್ನು ಕಳೆದುಕೊಂಡಿದ್ದ ಸಿಕಂದರ್ ಯಾದವ್​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದನು. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆ ಗೀತಾದೇವಿಯ ಪತಿಗೆ ಅನುಮಾನ ಬಂದಿದೆ. ತನಿಖೆ ನಡೆಸಿದಾಗ ಇವರಿಬ್ಬರ ಅಕ್ರಮ ಸಂಬಂಧ ಬಯಲಿಗೆ ಬಂದಿದೆ. ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ದಿಲೇಶ್ವರ್ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಇದಲ್ಲದೇ ಸಿಕಂದರ್ ಯಾದವ್ ತನ್ನ ಅತ್ತೆಯ ಮೇಲಿನ ಪ್ರೀತಿಯನ್ನು ಪಂಚಾಯತ್ ಮತ್ತು ಗ್ರಾಮಸ್ಥರ ಮುಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾನೆ. ತರುವಾಯ, ದಿಲೇಶ್ವರ್ ಮತ್ತು ಗ್ರಾಮಸ್ಥರ ಒಪ್ಪಿಗೆಯೊಂದಿಗೆ, ಸಿಕಂದರ್ ಮತ್ತು ಗೀತಾದೇವಿ ವಿವಾಹ ಮಾಡಿಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 27 ಬಾರಿ ಗರ್ಭಿಣಿಯಾಗಿ 69 ಮಕ್ಕಳನ್ನು ಹೆತ್ತು ಗಿನ್ನಿಸ್ ವಿಶ್ವ ದಾಖಲೆಗೆ ಪಾತ್ರವಾಗಿದ್ದ ಮಹಿಳೆ

ಸದ್ಯ ಇವರಿಬ್ಬರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. @HalchalPriya ಎಂಬ ಟ್ವಿಟರ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜೊತೆಗೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿರುವುದನ್ನು ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:49 pm, Tue, 30 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ