ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ ; ಬಿಹಾರದ ವ್ಯಕ್ತಿಯ ವಿಡಿಯೋ ವೈರಲ್​​​​

ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ನನ್ನನ್ನು ಕೀಳಾಗಿ ಕಾಣುವುದರ ಜೊತೆಗೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಹಾರದ ವ್ಯಕ್ತಿಯೊರ್ವ ಆರೋಪಿಸಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ ; ಬಿಹಾರದ ವ್ಯಕ್ತಿಯ ವಿಡಿಯೋ ವೈರಲ್​​​​
ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ
Follow us
|

Updated on: Apr 13, 2023 | 4:29 PM

ಕನ್ನಡ ಮಾತಾನಾಡಲು ಬರದಿದ್ದರೇ ಅಪರಾಧವೇ? ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ನನ್ನನ್ನು ಕೀಳಾಗಿ ಕಾಣುವುದರ ಜೊತೆಗೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಹಾರದ ವ್ಯಕ್ತಿಯೊರ್ವ ಆರೋಪಿಸಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಬೆಂಗಳೂರಿನ ಫುಡ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ವ್ಯಕ್ತಿಯೊಬ್ಬರು ಸ್ಥಳೀಯರಿಂದ ಭಾಷಾ ಆಧರಿತ ಕಿರುಕುಳದ ಬಗ್ಗೆ ದೂರು ನೀಡಿದ್ದು, ಕನ್ನಡದಲ್ಲಿ ಸಂವಹನ ಮಾಡಲು ಸಾಧ್ಯವಾಗದ ಕಾರಣ ನಿಂದಿಸಲಾಗಿದೆ ಮತ್ತು ಕೀಳಾಗಿ ಕಾಣಲಾಗಿದೆ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ವ್ಯಕ್ತಿ ಆರೋಪಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದಲ್ಲಿ, ವ್ಯಕ್ತಿ ನಾನು ಬಿಹಾರದ ಮುಜಾಫರ್‌ಪುರದಿಂದ ಬಂದು ಬೆಂಗಳೂರಿನಲ್ಲಿ ಫುಡ್ ಸ್ಟಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಸ್ಟಾಲ್‌ಗೆ ಬರುವ ಜನರಲ್ಲಿ ಸಾಕಷ್ಟು ಜನರಿಗೆ ಹಿಂದಿ ಮಾತನಾಡುವವರೆಂದರೆ ಏನೋ ದೊಡ್ಡ ಸಮಸ್ಯೆ. ಅವರು ನಮ್ಮ ಮೇಲೆ ಕರುಣೆ ತೋರಿಸದೆ ನಮ್ಮನ್ನು ನಿಂದಿಸುತ್ತಾರೆ ಮತ್ತು ಕೀಳಾಗಿ ಕಾಣುತ್ತಾರೆ. ಕರ್ನಾಟಕದಲ್ಲಿರುವ ಹಿಂದಿ ಮಾತನಾಡುವ ಜನರಿಗೆ ನ್ಯಾಯ ಒದಗಿಸಬೇಕೆಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ ಎಂದು ವಿಡಿಯೋದ ಮೂಲಕ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: 6 ಪತ್ನಿಯರ ಮುದ್ದಿನ ಗಂಡನಿಗೆ ಮೊದಲ ಮಗು ಯಾರಿಂದ ಪಡೆಯುವುದು ಎಂಬ ಚಿಂತೆಯಂತೆ..!

ಇದಲ್ಲದೇ ಸ್ಥಳೀಯರಿಂದ ತನಗೆ ಕೊಲೆ ಬೆದರಿಕೆ ಕೂಡ ಬಂದಿತ್ತು ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಜನರಿಗೆ ಹಿಂದಿ ಮಾತನಾಡುವ ಜನರ ಮೇಲೆ ಯಾಕಿಷ್ಟು ಸಿಟ್ಟು? ಬಿಹಾರಿಯಾಗಿರುವುದು ಅಪರಾಧವೇ? ನಾವು ಈ ದೇಶಕ್ಕೆ ಸೇರಿದವರಲ್ಲವೇ? ನಾನು ಸವಾಲು ಹಾಕುತ್ತೇನೆ, ಈಗ ಬಂದು ನನ್ನನ್ನು ಕೊಲ್ಲಲಿ, ನಾನು ಸಿದ್ಧನಿದ್ದೇನೆ ಎಂದು ವ್ಯಕ್ತಿ ಕಿರುಚುತ್ತಿರುವುದನ್ನು ಕಾಣಬಹುದು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಸುಬ್ರಹ್ಮಣ್ಯನಗರ ಪೊಲೀಸರು ಇದನ್ನು ಭಾಷಾ ಸಮಸ್ಯೆ ಎಂದು ತಳ್ಳಿಹಾಕಲಿಲ್ಲ. ಬಿಹಾರದ ವ್ಯಕ್ತಿಯ ಅಂಗಡಿಗೆ ಬಂದ ಮೂವರು ಹುಡುಗಿಯರು ಕನ್ನಡದಲ್ಲಿ ಮಾತಾನಾಡಿರುವುದರಿಂದ ಅವರು ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಆದರೆ ಆ ವ್ಯಕ್ತಿ ಅದನ್ನು ಭಾಷಾ ಸಮಸ್ಯೆಯಾಗಿ ಪರಿವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ