AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್‌ ಸ್ಕೂಲಂಥ ಸ್ಕೂಲಿಲ್ಲ ನಮ್‌ ಮಿಸ್ಸಂಥ ಮಿಸ್ಸಿಲ್ಲ’ ಯಾಕೆ ಅಂತ ನೋಡಿ ಈ ವಿಡಿಯೋ

Bihar : ನೀವು ಹೇಗೆ ಪಾಠ ಮಾಡುತ್ತಿದ್ದೀರಿ ಎನ್ನುವುದು ಮಕ್ಕಳ ಮುಖದ ಮೇಲೆ ಪ್ರತಿಫಲಿಸುವಂತಿರಬೇಕು, ಈ ಮಕ್ಕಳ ಮುಖದಲ್ಲಿ ಅರಳಿರುವ ಮಂದಹಾಸದಂತೆ. ಎಷ್ಟು ಲವಲವಿಕೆಯಿಂದ ಕಲಿಸುತ್ತಿದ್ದಾರೆ ನೋಡಿ ಬಿಹಾರದ ಖುಷ್ಬೂ ಟೀಚರ್​.

‘ನಮ್‌ ಸ್ಕೂಲಂಥ ಸ್ಕೂಲಿಲ್ಲ ನಮ್‌ ಮಿಸ್ಸಂಥ ಮಿಸ್ಸಿಲ್ಲ’ ಯಾಕೆ ಅಂತ ನೋಡಿ ಈ ವಿಡಿಯೋ
ಬಿಹಾರದ ಶಿಕ್ಷಕಿ ಖುಷ್ಬೂ ಕುಮಾರಿ ಮಕ್ಕಳೊಂದಿಗೆ
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 4:54 PM

Share

Viral Video : ಶಿಕ್ಷಕ ವೃತ್ತಿ ಎಲ್ಲಕ್ಕಿಂತಲೂ ಮಿಗಿಲಾದುದು. ಮಕ್ಕಳ ಎಳೆಯ ಮನಸ್ಸುಗಳಿಗೆ ಸ್ಪಂದಿಸುತ್ತ ಅವುಗಳಿಗೆ ಆಕಾರ ಕೊಡುವ ಕೆಲಸವಿದೆಯಲ್ಲ ಅದು ಬಹಳ ಪ್ರೀತಿ, ಶ್ರದ್ಧೆ ಮತ್ತು ಕಾಳಜಿಯಿಂದ ಕೂಡಿರುವಂಥದ್ದು. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಬಿಹಾರದ ಶಿಕ್ಷಕಿಯೊಬ್ಬರು ಮಕ್ಕಳಿಗೆ ಹಾಡು ನೃತ್ಯದ ಮೂಲಕ ಪಾಠವನ್ನು ಹೇಳಿಕೊಡುತ್ತಿದ್ದಾರೆ. ಐಎಎಸ್​ ಅಧಿಕಾರಿ ದೀಪಕ್ ಕುಮಾರ್ ಸಿಂಗ್​ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಇನ್ನಿಲ್ಲದಂತೆ ಈ ದೃಶ್ಯವನ್ನು ಆನಂದಿಸುತ್ತಿದ್ದಾರೆ.

ಈ ಶಿಕ್ಷಕಿ ಬಿಹಾರದ ಬಂಕಾ ಮೂಲದವರು. ಖುಷ್ಬೂ ಕುಮಾರಿ ಈಕೆಯ ಹೆಸರು. ಪಾಠ ಎನ್ನುವುದು ನಾಲ್ಕು ಗೋಡೆಗಳ ಮಧ್ಯೆ ಅಲ್ಲ, ಅದರಾಚೆ ಎನ್ನುವುದನ್ನು ಈಕೆ ಅಕ್ಷರಶಃ ಪಾಲಿಸುತ್ತಿದ್ಧಾರೆ. ಆಟದ ಮೈದಾನ, ಗಿಡಗಂಟಿಗಳ ಮಧ್ಯೆಯೆಲ್ಲ ಓಡಾಡಿ ಮಕ್ಕಳೊಂದಿಗೆ ಮಗುವಾಗಿ ಈ ಶಿಕ್ಷಕಿ ಪಾಠ ಹೇಳಿ ಕೊಡುತ್ತಿದ್ದಾರೆ. ಇಂಥ ಆಹ್ಲಾದಕರ ಘಳಿಗೆಗಳು ಮಕ್ಕಳನ್ನು ಮತ್ತಷ್ಟು ಉತ್ತೇಜಿಸುತ್ತವೆ. ಶಾಶ್ವತವಾಗಿ ಪಾಠವೂ ಆಟವೂ ನೆನಪಿನಲ್ಲಿ ಉಳಿಯುವಂತೆ ಮಾಡುತ್ತವೆ.

22,000ಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. ನೆಟ್ಟಿಗರಂತೂ ಈ ಕ್ರಮವನ್ನು ಬಹಳ ಶ್ಲಾಘಿಸುತ್ತಿದ್ಧಾರೆ. ಎಲ್ಲ ಮಕ್ಕಳಿಗೂ ಇಂಥ ಶಿಕ್ಷಕರೇ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಹೊಸದಾಗಿ ಕೆಲಸಕ್ಕೆ ಸೇರಿದ ಇಂಥ ಕೆಲವೇ ಕೆಲ ಶಿಕ್ಷಕ-ಶಿಕ್ಷಕಿಯರು ಹೀಗೆ ಉತ್ಸಾಹವನ್ನು ಹೊಂದಿದ್ದಾರೆ. ಉಳಿದವರೂ ಇಂಥ ಉತ್ಸಾಹವನ್ನು ಪಡೆದುಕೊಳ್ಳಲಿ ಎಂದು ಒಬ್ಬರು ಹೇಳಿದ್ದಾರೆ. ಅನೇಕರು ಈ ವಿಡಿಯೋ ಕೊಂಡಾಡಿದ್ದಾರೆ.

ಮಕ್ಕಳ ಶಿಕ್ಷಣ, ಆರೋಗ್ಯ, ಸಂತೋಷದ ಹಿಂದೆ ದೇಶದ ಉನ್ನತಿ ಇದೆ. ಹಾಗಾಗಿ ಶಿಕ್ಷಕರು ಮನಸ್ಸಿಟ್ಟು ಮಕ್ಕಳನ್ನು ಪೋಷಿಸಬೇಕು. ಅಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:52 pm, Thu, 24 November 22

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ