Viral Video: ಮದುವೆಯಾಗಲು ಸತಾಯಿಸಿದ ಬಾಯ್‌ಫ್ರೆಂಡ್‌, ಕೋಪದಲ್ಲಿ ಆತನ ಮರ್ಮಾಂಗ ಕತ್ತರಿಸಿ ಹಾಕಿದ ವೈದ್ಯೆ

ಪ್ರೀತಿ ನಿರಾಕರಣೆ ಮಾಡಿದ್ದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಂತಹ, ಕೊಲೆಗಳು ನಡೆದಂತಹ ಘಟನೆಗಳು ನಡೆದಿವೆ. ಇದೀಗ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಹು ಸಮಯದಿಂದ ಪರಸ್ಪರ ಪ್ರೀತಿಸಿ ಇದೀಗ ಮದುವೆಯಾಗಲು ಸತಾಯಿಸುತ್ತಿದ್ದಾನೆಂದು ಲೇಡಿ ಡಾಕ್ಟರ್‌ ಒಬ್ಬರು ಕೋಪದಲ್ಲಿ ತನ್ನ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ. ಈ ಕುರಿತ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Viral Video: ಮದುವೆಯಾಗಲು ಸತಾಯಿಸಿದ ಬಾಯ್‌ಫ್ರೆಂಡ್‌, ಕೋಪದಲ್ಲಿ ಆತನ ಮರ್ಮಾಂಗ ಕತ್ತರಿಸಿ ಹಾಕಿದ ವೈದ್ಯೆ
ವೈರಲ್ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 6:14 PM

ಪ್ರೀತಿ ನಿರಾಕರಿಸಿದಳೆಂದು ಪಾಗಲ್‌ ಪ್ರೇಮಿಗಳು ತಮ್ಮ ಪ್ರಿಯತಮೆಯ ಮೇಲೆ ಹಲ್ಲೆ ನಡೆಸಿದಂತಹ, ಆಸಿಡ್‌ ಎರಚಿದಂತಹ ಅಮಾನವೀಯ ಘಟನೆಗಳ ಸುದ್ದಿಗಳು, ಮದುವೆಗೆ ನಿರಾಕರಿಸಿದ್ದಕ್ಕಾಗಿ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಂತಹ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಹು ಸಮಯದಿಂದ ಪರಸ್ಪರ ಪ್ರೀತಿಸಿ ಇದೀಗ ಮದುವೆಯಾಗಲು ಒಪ್ಪುತ್ತಿಲ್ಲ ಎಂದು ಲೇಡಿ ಡಾಕ್ಟರ್‌ ಒಬ್ಬರು ಕೋಪದಲ್ಲಿ ತನ್ನ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ. ಈ ಕುರಿತ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

ಬಿಹಾರಾದ ಸರನ್‌ ಜಿಲ್ಲೆಯ ಮಧುರಾದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇಲ್ಲಿನ ಸ್ಥಳೀಯ ಆಸ್ಪತ್ರೆಯ ವೈದ್ಯೆ ಅಭಿಲಾಷಾ(26) ಮತ್ತು ಮಧುರಾದ 12 ನೇ ವಾರ್ಡ್‌ನ ಕೌನ್ಸಿಲರ್‌ ವೇದ್‌ ಪ್ರಕಾಶ್‌(30) ಬಹುಕಾಲದಿಂದ ಪ್ರೀತಿಸುತ್ತಿದ್ದು, ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಆದರೆ ಇದೀಗ ಪ್ರಿಯಕರ ವೇದ್‌ ಮದುವೆಯಾಗಲು ಸತಾಯಿಸುತ್ತಿದ್ದು, ಇದರಿಂದ ಕೋಪಗೊಂಡ ಲೇಡಿ ಡಾಕ್ಟರ್‌ ಆತನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಮನೆಯಲ್ಲಿ ಕೌನ್ಸಿಲರ್‌ ನೋವಿನಿಂದ ನರಳುವ ಸದ್ದು ಕೇಳಿ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದ್ದು, ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಬೆಡ್‌ರೂಮ್‌ನಲ್ಲಿ ನರಳುತ್ತಾ ಮಲಗಿದ್ದ ವೇದ್‌ ಪ್ರಕಾಶ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ನಾನೇ ಪ್ರಿಯಕರನ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ್ದು ಎಂದು ಮಹಿಳಾ ವೈದ್ಯೆ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ದೀರ್ಘ ಕಾಲದಿಂದ ನಾವಿಬ್ಬರು ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ನನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧವನ್ನೂ ಬೆಳೆಸಿದ್ದ. ಆದರೀಗ ಆತ ಮದುವೆಗೆ ನಿರಾಕರಿಸಿದ್ದು, ಇದರಿಂದ ಕೋಪಗೊಂಡ ನಾನು ಆತನನ್ನು ಮನೆಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿದೆ ಎಂದು ವೈದ್ಯೆ ಅಭಿಲಾಷ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಎಫ್.ಐ.ಆರ್‌ ದಾಖಲಿಸಿಕೊಂಡು ಆಕೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌?

ಆಕಾಶ್‌ ಅಶೋಕ್‌ ಗುಪ್ತಾ (peepoye_) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೌನ್ಸಿಲರ್‌ ವೇದ್‌ ಪ್ರಕಾಶ್‌ ನೋವಿನಿಂದ ನರಳುತ್ತಾ ಬೆಡ್‌ ಮೇಲೆ ಮಲಗಿರುವ ದೃಶ್ಯವನ್ನು ಕಾಣಬಹುದು. ವೈದ್ಯೆ ಅಭಿಲಾಷ ಜೋರಾಗಿ ಅಳುತ್ತಾ ಮದುವೆಗೆ ನಿರಾಕರಿಸಿದ್ದಕ್ಕಾಗಿ ನಾನು ಹೀಗೆ ಮಾಡಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 19 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸುದ್ದಿ ನೆಟ್ಟಿಗರಿಗೆ ಶಾಕ್‌ ನೀಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?