AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆಯಾಗಲು ಸತಾಯಿಸಿದ ಬಾಯ್‌ಫ್ರೆಂಡ್‌, ಕೋಪದಲ್ಲಿ ಆತನ ಮರ್ಮಾಂಗ ಕತ್ತರಿಸಿ ಹಾಕಿದ ವೈದ್ಯೆ

ಪ್ರೀತಿ ನಿರಾಕರಣೆ ಮಾಡಿದ್ದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಂತಹ, ಕೊಲೆಗಳು ನಡೆದಂತಹ ಘಟನೆಗಳು ನಡೆದಿವೆ. ಇದೀಗ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಹು ಸಮಯದಿಂದ ಪರಸ್ಪರ ಪ್ರೀತಿಸಿ ಇದೀಗ ಮದುವೆಯಾಗಲು ಸತಾಯಿಸುತ್ತಿದ್ದಾನೆಂದು ಲೇಡಿ ಡಾಕ್ಟರ್‌ ಒಬ್ಬರು ಕೋಪದಲ್ಲಿ ತನ್ನ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ. ಈ ಕುರಿತ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Viral Video: ಮದುವೆಯಾಗಲು ಸತಾಯಿಸಿದ ಬಾಯ್‌ಫ್ರೆಂಡ್‌, ಕೋಪದಲ್ಲಿ ಆತನ ಮರ್ಮಾಂಗ ಕತ್ತರಿಸಿ ಹಾಕಿದ ವೈದ್ಯೆ
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 03, 2024 | 6:14 PM

Share

ಪ್ರೀತಿ ನಿರಾಕರಿಸಿದಳೆಂದು ಪಾಗಲ್‌ ಪ್ರೇಮಿಗಳು ತಮ್ಮ ಪ್ರಿಯತಮೆಯ ಮೇಲೆ ಹಲ್ಲೆ ನಡೆಸಿದಂತಹ, ಆಸಿಡ್‌ ಎರಚಿದಂತಹ ಅಮಾನವೀಯ ಘಟನೆಗಳ ಸುದ್ದಿಗಳು, ಮದುವೆಗೆ ನಿರಾಕರಿಸಿದ್ದಕ್ಕಾಗಿ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಂತಹ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಹು ಸಮಯದಿಂದ ಪರಸ್ಪರ ಪ್ರೀತಿಸಿ ಇದೀಗ ಮದುವೆಯಾಗಲು ಒಪ್ಪುತ್ತಿಲ್ಲ ಎಂದು ಲೇಡಿ ಡಾಕ್ಟರ್‌ ಒಬ್ಬರು ಕೋಪದಲ್ಲಿ ತನ್ನ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ. ಈ ಕುರಿತ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

ಬಿಹಾರಾದ ಸರನ್‌ ಜಿಲ್ಲೆಯ ಮಧುರಾದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇಲ್ಲಿನ ಸ್ಥಳೀಯ ಆಸ್ಪತ್ರೆಯ ವೈದ್ಯೆ ಅಭಿಲಾಷಾ(26) ಮತ್ತು ಮಧುರಾದ 12 ನೇ ವಾರ್ಡ್‌ನ ಕೌನ್ಸಿಲರ್‌ ವೇದ್‌ ಪ್ರಕಾಶ್‌(30) ಬಹುಕಾಲದಿಂದ ಪ್ರೀತಿಸುತ್ತಿದ್ದು, ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಆದರೆ ಇದೀಗ ಪ್ರಿಯಕರ ವೇದ್‌ ಮದುವೆಯಾಗಲು ಸತಾಯಿಸುತ್ತಿದ್ದು, ಇದರಿಂದ ಕೋಪಗೊಂಡ ಲೇಡಿ ಡಾಕ್ಟರ್‌ ಆತನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಮನೆಯಲ್ಲಿ ಕೌನ್ಸಿಲರ್‌ ನೋವಿನಿಂದ ನರಳುವ ಸದ್ದು ಕೇಳಿ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದ್ದು, ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಬೆಡ್‌ರೂಮ್‌ನಲ್ಲಿ ನರಳುತ್ತಾ ಮಲಗಿದ್ದ ವೇದ್‌ ಪ್ರಕಾಶ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ನಾನೇ ಪ್ರಿಯಕರನ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ್ದು ಎಂದು ಮಹಿಳಾ ವೈದ್ಯೆ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ದೀರ್ಘ ಕಾಲದಿಂದ ನಾವಿಬ್ಬರು ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ನನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧವನ್ನೂ ಬೆಳೆಸಿದ್ದ. ಆದರೀಗ ಆತ ಮದುವೆಗೆ ನಿರಾಕರಿಸಿದ್ದು, ಇದರಿಂದ ಕೋಪಗೊಂಡ ನಾನು ಆತನನ್ನು ಮನೆಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿದೆ ಎಂದು ವೈದ್ಯೆ ಅಭಿಲಾಷ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಎಫ್.ಐ.ಆರ್‌ ದಾಖಲಿಸಿಕೊಂಡು ಆಕೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌?

ಆಕಾಶ್‌ ಅಶೋಕ್‌ ಗುಪ್ತಾ (peepoye_) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೌನ್ಸಿಲರ್‌ ವೇದ್‌ ಪ್ರಕಾಶ್‌ ನೋವಿನಿಂದ ನರಳುತ್ತಾ ಬೆಡ್‌ ಮೇಲೆ ಮಲಗಿರುವ ದೃಶ್ಯವನ್ನು ಕಾಣಬಹುದು. ವೈದ್ಯೆ ಅಭಿಲಾಷ ಜೋರಾಗಿ ಅಳುತ್ತಾ ಮದುವೆಗೆ ನಿರಾಕರಿಸಿದ್ದಕ್ಕಾಗಿ ನಾನು ಹೀಗೆ ಮಾಡಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 19 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸುದ್ದಿ ನೆಟ್ಟಿಗರಿಗೆ ಶಾಕ್‌ ನೀಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?