AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟಿಕೆಟ್ ಇಲ್ಲದೇ ಎಸಿ ಕೋಚ್‌ನಲ್ಲಿ ಪ್ರಯಾಣ; ಟಿಸಿಯ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಮಹಿಳೆ

ಬಿಹಾರ ಮಹಿಳೆಯೂ ಎಸಿ ಕೋಚ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿ ಸಿಕ್ಕಿ ಬಿದ್ದಿದ್ದು ಟಿಸಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡುವ ಬಗ್ಗೆ ಆರೋಪ ಮಾಡಿರುವ ಸುದ್ದಿ ತಿಳಿದೇ ಇದೆ. ಆದರೆ ಇದೀಗ ಈ ಮಹಿಳೆಯೂ ಮತ್ತೊಂದು ವಿಡಿಯೋದಲ್ಲಿ ಟಿಸಿಯ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಟಿಕೆಟ್ ಇಲ್ಲದೇ ಎಸಿ ಕೋಚ್‌ನಲ್ಲಿ ಪ್ರಯಾಣ; ಟಿಸಿಯ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಮಹಿಳೆ
ಟಿಸಿಗೆ ಬೆದರಿಕೆ ಹಾಕಿದ ಮಹಿಳೆImage Credit source: Twitter
ಸಾಯಿನಂದಾ
| Edited By: |

Updated on:Oct 14, 2025 | 5:27 PM

Share

ಕೆಲವರು ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸಿ, ಕೊನೆಗೆ ಟಿಸಿ (Ticket Collector) ಟಿಕೆಟ್ ಚೆಕಿಂಗ್‌ಗೆ ಬಂದಾಗ ಸಿಕ್ಕಿ ಬೀಳುತ್ತಾರೆ. ಕೆಲವರು ತಮ್ಮದು ತಪ್ಪಿದರೂ ಕೂಡ ಟಿಸಿ ಬಳಿ ಜಗಳಕ್ಕೆ ಇಳಿದು ರಂಪಾಟ ಮಾಡುವ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಹೌದು, ಬಿಹಾರದ ಮಹಿಳೆಯೂ ಟಿಕೆಟ್ ಇಲ್ಲದೇ ಎಸಿ ಕೋಚ್‌ನಲ್ಲಿ(AC Coach) ಪ್ರಯಾಣಿಸಿದ್ದು, ಟಿಸಿ ಟಿಕೆಟ್ ಕೇಳಿದಾಗ ಅಧಿಕಾರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಆದರೆ ಇದೀಗ ಮಹಿಳೆಯೂ ಟಿಸಿಯ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಮಹಿಳೆಯ  ವರ್ತನೆಯನ್ನು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ.

NCMIndia ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋಗೆ “ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕಾಗಿ ಟಿಟಿಇ ಕೈಯಲ್ಲಿ ಸಿಕ್ಕಿಬಿದ್ದ ನಂತರ ಮಹಿಳಾ ಶಿಕ್ಷಕಿ, ತನ್ನ ತಂದೆ ಮತ್ತು ಇತರರೊಂದಿಗೆ ಟಿಟಿಇಗೆ ಬೆದರಿಕೆ ಹಾಕಲು ಪ್ರಯತ್ನಿಸಿದರು” ಎಂದು ವೀಡಿಯೊದ ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿ
Image
ರೈಲಿನ ಶೌಚಾಲಯದಲ್ಲಿ 6 ಗಂಟೆಗಳ ಕಾಲ ಲಾಕ್ ಆದ ಪ್ರಯಾಣಿಕ
Image
ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೊಡಿ ಎಂದ ಅಜ್ಜಿ
Image
ಗಂಡನ ಮಡಿಲಿನಲ್ಲಿ ತಲೆಯಿಟ್ಟು ವಿಶ್ರಾಂತಿ ಪಡೆದ ವೃದ್ಧೆ
Image
ಈ ಪ್ರೇಮಿಗಳಿಗೆ ರೈಲೇ ಬೆಡ್​​​ ರೂಮ್​​ , ಅಪ್ಪಿಕೊಂಡು ಮುದ್ದಾಡಿದ ಜೋಡಿಗಳು

ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಮಹಿಳೆಯ ವಿಡಿಯೋ

ಈ ವಿಡಿಯೋದಲ್ಲಿ ಮಹಿಳೆ ಮತ್ತು ಆಕೆಯ ತಂದೆ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿರುವುದನ್ನು ಕಾಣಬಹುದು. ಒಂದು ಹಂತದಲ್ಲಿ, ಮಹಿಳೆ ಟಿಟಿಇಯ “ಶಿರಚ್ಛೇದ” ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ಕಾಣಬಹುದು.

ಟಿಕೆಟ್ ಇಲ್ಲದ ಪ್ರಯಾಣಿಸುತ್ತಿರುವ ಮಹಿಳೆಯ ವಿಡಿಯೋ

ಈ ವಿಡಿಯೋದಲ್ಲಿ ಮಹಿಳೆಯೂ ಎಸಿ ಕೋಚ್‌ನಲ್ಲಿ ಟೆಕೆಟ್ ಇಲ್ಲದೇ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಆಗಮಿಸಿದ ಟಿಕೆಟ್‌ ಕಲೆಕ್ಟರ್‌ ಆಕೆಯ ಬಳಿ ಟಿಕೆಟ್‌ ಕೇಳಿದ್ದು, ಟಿಸಿಯನ್ನೇ ಗುರುತಿನ ಚೀಟಿ ತೋರಿಸು ಎಂದು ವಾದಿಸಿದ್ದಾಳೆ. ಕೊನೆಗೆ ಟಿಸಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದು, ತನ್ನ ತಂದೆಗೆ ಕರೆ ಮಾಡಿ ನಿಲ್ದಾಣಕ್ಕೆ ಬರಲು ಹೇಳಿದ್ದು, ಟಿಸಿ ಮುಂದೆ ತನ್ನ ದರ್ಪ ತೋರಿಸಿರುವುದನ್ನು ನೀವಿಲ್ಲಿ ನೋಡಬಹುದು. ಇಲ್ಲಿ ನಿಂತರೆ ಪ್ರಯೋಜನವಿಲ್ಲವೆಂದು ಕೋಚ್ ನಿಂದ ಬ್ಯಾಗ್‌ ಎತ್ತಿಕೊಂಡು ಹೋಗುವುದನ್ನು ಕಾಣಬಹುದು.

ಇದನ್ನೂ ಓದಿ:Video: ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೊಡಿ ಎಂದ ಅಜ್ಜಿ, ಮುಗ್ಧತೆಗೆ ಸಾಕ್ಷಿಯಾಯ್ತು ಈ ದೃಶ್ಯ

ಅಕ್ಟೋಬರ್ 7 ರಂದು ಶೇರ್ ಮಾಡಲಾದ ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಒಬ್ಬ ಬಳಕೆದಾರ ಟಿಕೆಟ್ ಇಲ್ಲದೇ ಪ್ರಯಾಣಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಮತ್ತೊಬ್ಬರು ಶಿಕ್ಷಕಿಯಾಗಿದ್ದು ಈ ರೀತಿ ಮಾಡುವುದು ಸರಿಯೇ, ಇಂತಹ ಶಿಕ್ಷಕರು ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ಕರ್ತವ್ಯದಲ್ಲಿದ್ದ ರೈಲ್ವೆ ಅಧಿಕಾರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Thu, 9 October 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ