AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯ ಕಾಲು ಮುಟ್ಟಿ ನೃತ್ಯಾಭ್ಯಾಸ ಮಾಡಿಸಿದ್ದ ಬಿರ್ಜೂ ಮಹಾರಾಜ್​: ಸರಳ ವ್ಯಕ್ತಿತ್ವದ ಕಥಕ್​ ನೃತ್ಯ ಪಟುವಿನ ವಿಡಿಯೋ ವೈರಲ್​

ಪುಟ್ಟ ಬಾಲಕಿಗೆ ಕಥಕ್​ ಕಲಿಸುವ ವೇಳೆ ಆಕೆಯ ಕಾಲುಗಳನ್ನು ಮುಟ್ಟಿ ಪ್ರೀತಿಯಿಂದ ಕಲಾಭ್ಯಾಸ ಮಾಡಿಸುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಇದು ಪಂಡಿತ್​ ಬಿರ್ಜೂ ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವ ಎಂದು ನೆಟ್ಟಿಗರು ಬಿರ್ಜೂ ಅವರನ್ನು ಕಳೆದುಕೊಂಡಿದುದರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಲಕಿಯ ಕಾಲು ಮುಟ್ಟಿ ನೃತ್ಯಾಭ್ಯಾಸ ಮಾಡಿಸಿದ್ದ ಬಿರ್ಜೂ ಮಹಾರಾಜ್​: ಸರಳ ವ್ಯಕ್ತಿತ್ವದ ಕಥಕ್​ ನೃತ್ಯ ಪಟುವಿನ ವಿಡಿಯೋ ವೈರಲ್​
ಬಿರ್ಜೂ ಮಹಾರಾಜ್​
TV9 Web
| Edited By: |

Updated on:Jan 18, 2022 | 12:02 PM

Share

ಖ್ಯಾತ ಕಥಕ್​ ನೃತ್ಯಪಟು, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಬಿರ್ಜೂ ಮಹರಾಜ್​ (Birju Maharaj )ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಕಲಾ ಸೇವೆ, ಅವರ ಆದರ್ಶಗಳು ಸದಾ ಜೀವಂತವಾಗಿರುತ್ತವೆ. ಪಂಡಿತ್​ ಬಿರ್ಜೂ ಮಹಾರಾಜ್ (Pandith Birju Maharaj)​​ ಅವರ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿದಿದೆ.  ಈ ನಡುವೆ ಬಿರ್ಜೂ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪುಟ್ಟ ಬಾಲಕಿಗೆ ಕಥಕ್ (Kathak)​ ಕಲಿಸುವ ವೇಳೆ ಆಕೆಯ ಕಾಲುಗಳನ್ನು ಮುಟ್ಟಿ ಪ್ರೀತಿಯಿಂದ ಕಲಾಭ್ಯಾಸ ಮಾಡಿಸುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಇದು ಪಂಡಿತ್​ ಬಿರ್ಜೂ ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವ ಎಂದು ನೆಟ್ಟಿಗರು ಬಿರ್ಜೂ ಅವರನ್ನು ಕಳೆದುಕೊಂಡಿದುದರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್​ನಲ್ಲಿ Sarvan_K86 ಎನ್ನುವವರು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮೊದಲು ಬಿರ್ಜೋ ಪುಟ್ಟ ಬಾಲಕಿಗೆ ಒಂದು ಜೋಡಿ ಗೆಜ್ಜೆಯನ್ನು ನೀಡುತ್ತಾರೆ ನಂತರ ಆಕೆಯ ಹಣೆಗೆ ತಿಲಕವನ್ನು ಇಡುತ್ತಾರೆ. ಆ ಬಳಿಕ ನೃತ್ಯದ ಆರಂಭದಲ್ಲಿ ಹೆಗೆ ನಮಸ್ಕರಿಸಬೇಕು ಎನ್ನುವುದನ್ನು ಬಾಲಕಿಯ ಕಾಲನ್ನು ಮುಟ್ಟಿ ನಮಸ್ಕರಿಸಿಯೇ ತೋರಿಸುತ್ತಾರೆ. ಕಥಕ್​ ವಿದ್ವಾಂಸ ಬಿರ್ಜೂ ಮಹಾರಾಜ್​ ಅವರ ಈ ಸರಳ ವ್ಯಕ್ತಿತ್ವಕ್ಕೆ ನೋಡುಗರು ಮಾರುಹೋಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕಥಕ್​ ಮಾಂತ್ರಿಕ ಬಿರ್ಜೂ ಮಹಾರಾಜ್​ ಅವರ ಮೂಲ ಹೆಸರು ಬ್ರಿಜ್​​ ಮೋಹನ್​ ನಾಥ್ ಮಿಶ್ರಾ. ಅವರು 1937ರ ಫೆಬ್ರವರಿ 4ರಂದು ಉತ್ತರ ಪ್ರದೇಶದ ಹಂಡಿಯಾದಲ್ಲಿ ಜನಿಸಿದ್ದರು.  ಬಾಲ್ಯದಲ್ಲೇ ನೃತ್ಯದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಅವರು ಕಥಕ್​ ಮಾಂತ್ರಿಕ ಎಂದೇ ಹೆಸರು ಪಡೆದರು. ಬಿರ್ಜೂ ಅವರ ಕಲಾ ಸೇವೆಗೆ 1986 ರಲ್ಲಿ ಭಾರತದ ಅತ್ಯನ್ನತ ಗೌರವಗಳಲ್ಲಿ ಒಂದಾದ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 83 ವರ್ಷದ ಬಿರ್ಜೂ ಮಹಾರಾಜ್​  ಭಾನುವಾರ (ಜ. 16)ರಂದು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಗೂಗಲ್​ ಮೀಟ್​ನಲ್ಲಿ ಸಂಬಂಧಿಗಳಿಗೆ ಆಹ್ವಾನ; ಜೊಮಾಟೋ ಮೂಲಕ ಊಟ: ಇದು ಕೊರೋನಾ ಕಾಲದ ವಿಭಿನ್ನ ಮದುವೆ

Published On - 12:02 pm, Tue, 18 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್