AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶ್ರೀ ರಾಮನ ಚಿತ್ರಗಳನ್ನು ಒಳಗೊಂಡಿರುವ ಕಾಗದದ ಪ್ಲೇಟ್​​ಗಳಲ್ಲಿ ಬಿರಿಯಾನಿ ಬಡಿಸಿ ಕೊಡುತ್ತಿರುವುದನ್ನು ಕಾಣಬಹುದು. ಇದೀಗ ಬಿರಿಯಾನಿ ಮಾರಾಟ ಮಾಡುವವರ ವಿರುದ್ಧ ಸ್ಥಳೀಯ ಬಜರಂಗದಳದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಹೋಟೆಲ್​ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ
ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ
ಅಕ್ಷತಾ ವರ್ಕಾಡಿ
|

Updated on: Apr 24, 2024 | 5:02 PM

Share

ದೆಹಲಿ: ಶ್ರೀರಾಮನ ಚಿತ್ರವಿರುವ ಕಾಗದದ ಪ್ಲೇಟ್‌ಗಳಲ್ಲಿ ಬಿರಿಯಾನಿ ಬಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಜಹಾಂಗೀರ್‌ಪುರಿಯಲ್ಲಿರುವ ಬಿರಿಯಾನಿ ಹೋಟೆಲ್​​​​​ ಒಂದರಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸ್ಥಳೀಯ ಪೊಲೀಸರು ಹೋಟೆಲ್​ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶ್ರೀ ರಾಮನ ಚಿತ್ರಗಳನ್ನು ಒಳಗೊಂಡಿರುವ ಕಾಗದದ ಪ್ಲೇಟ್​​ಗಳನ್ನು ಕಾಣಬಹುದು. ಸ್ಥಳೀಯ ಬಜರಂಗದಳದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಲ್ಲದೇ ಬಿರಿಯಾನಿ ಮಾರಾಟ ಮಾಡುವುದನ್ನು ವಿರೋಧಿಸಿ ಗಲಾಟೆ ನಡೆದಿದೆ. ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಲ್ಲಿನ ಅವ್ಯವಸ್ಥೆಯನ್ನು ನಿಭಾಯಿಸಿ ಅಂಗಡಿ ಮಾಲೀಕರನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Acid Attack: ಪ್ರೀತಿಸಿ ಮೋಸ ಮಾಡಿದ ಪ್ರಿಯಕರನ ಮೇಲೆ ಆ್ಯಸಿಡ್​ ಎರಚಿದ ಯುವತಿ!

ವರದಿಗಳ ಪ್ರಕಾರ, ಪೇಪರ್ ಪ್ಲೇಟ್‌ಗಳ ಬಂಡಲ್‌ನಲ್ಲಿದ್ದ ಒಂದು ಅಥವಾ ಎರಡು ಪ್ಲೇಟ್‌ಗಳು ಭಗವಾನ್ ರಾಮನ ಫೋಟೋಗಳನ್ನು ಹೊಂದಿದ್ದವು. ಪ್ರಸ್ತುತ, ಜಹಾಂಗೀರ್ಪುರಿ ಪೊಲೀಸ್ ಠಾಣೆ ಸಂಪೂರ್ಣ ಘಟನೆಯ ತನಿಖೆ ನಡೆಸುತ್ತಿದೆ.ಆರೋಪಿಗಳು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಇದನ್ನು ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಇದನ್ನು ಮಾಡಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.ಆಹಾರ ಮಾರಾಟಕ್ಕಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಘಟನೆ ಬೆಳಕಿಗೆ ಬಂದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ