AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಕ್ಕಳ ಮದುವೆ ಮಾತುಕತೆಯಲ್ಲಿ ಅರಳಿದ ಪ್ರೀತಿ, ವಧುವಿನ ತಾಯಿಯೊಂದಿಗೆ ವರನ ತಂದೆ ಪರಾರಿ

ಮದುವೆ ಮಂಟಪದಲ್ಲಿ ಅಥವಾ ಮದುವೆ ಮನೆಗಳಲ್ಲಿ ನಡೆಯುವ ಸಿನಿಮೀಯ ರೀತಿಯ ಘಟನೆಗಳ ಬಗ್ಗೆ ಆಗಾಗ್ಗೆ ಕೇಳುತ್ತಿರುತ್ತೇವೆ. ಇದೀಗ ಅಂತಹದೇ ವಿಚಿತ್ರ ಘಟನೆಯೊಂದು ನಡೆದಿದ್ದು, ಮಕ್ಕಳ ಮದುವೆಗೆ ಇನ್ನೇನು ದಿನ ಹತ್ತಿರವಾಗುತ್ತಿದ್ದಂತೆ ವಧುವಿನ ತಾಯಿಯೊಂದಿಗೆ ವರನ ತಂದೆ ಪರಾರಿಯಾಗಿದ್ದಾನೆ. ಈ ಶಾಕಿಂಗ್‌ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral: ಮಕ್ಕಳ ಮದುವೆ ಮಾತುಕತೆಯಲ್ಲಿ ಅರಳಿದ ಪ್ರೀತಿ, ವಧುವಿನ ತಾಯಿಯೊಂದಿಗೆ ವರನ ತಂದೆ ಪರಾರಿ
ಸಾಮದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Jul 19, 2024 | 4:15 PM

Share

ಮದುವೆ ಇಷ್ಟವಿಲ್ಲವೆಂದು ಮದುವೆ ಮಂಟಪದಿಂದ ಮದುಮಗಳು ಅಥವಾ ಮದುಮಗ ಪರಾರಿಯಾಗುವ ಅಥವಾ ಮನೆಯವರ ಒತ್ತಾಯಕ್ಕೆ ಕಟ್ಟು ಬಿದ್ದು ಮದುವೆಯಾಗಲು ಒಪ್ಪಿ ಇನ್ನೇನೂ ಮದುವೆ ದಿನ ಹತ್ತಿರ ಬರುತ್ತಿದೆ ಎನ್ನುವಾಗ ಯುವಕ ಅಥವಾ ಯುವತಿ ಮನೆ ಬಿಟ್ಟು ಓಡಿ ಹೋದ ಘಟನೆಗಳ ಬಗ್ಗೆ ಕೇಳಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಇನ್ನೇನು ಮದುವೆ ದಿನ ಹತ್ತಿರವಾಗುತ್ತಿದ್ದಂತೆ ವಧುವಿನ ತಾಯಿಯೊಂದಿಗೆ ವರನ ತಂದೆ ಪರಾರಿಯಾಗಿದ್ದಾನೆ. ಈ ಶಾಕಿಂಗ್‌ ಸುದ್ದಿ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದ್ದು, ಮಕ್ಕಳ ಮದುವೆ ಸಮೀಪಿಸುತ್ತಿದ್ದಂತೆ ವಧುವಿನ ತಾಯಿಯೊಂದಿಗೆ ವರನ ತಂದೆ ಪರಾರಿಯಾಗಿದ್ದಾನೆ. ಈ ಘಟನೆ ಜೂನ್‌ ಮೊದಲ ವಾರದಲ್ಲಿ ನಡೆದಿದ್ದು, ಮಕ್ಕಳ ಮದುವೆ ಮಾತುಕತೆ ಸಂದರ್ಭದಲ್ಲಿ ವರನ ತಂದೆ ಶಕೀಲ್‌ ಮತ್ತು ವಧುವಿನ ತಾಯಿ ಅಸ್ಮಾ ಖಾತುನ್‌ ನಡುವೆ ಪ್ರೀತಿ ಚಿಗುರೊಡದಿದೆ. ಮತ್ತು ಮದುವೆ ಮಾತುಕತೆಯ ನೆಪದಲ್ಲಿ ಶಕೀಲ್‌, ಅಸ್ಮಾಳ ಮನೆಗೆ ಹೋಗುತ್ತಿದ್ದ. ಇದೀಗ ಮಕ್ಕಳ ಮದುವೆ ಸಮೀಪಿಸುತ್ತಿದ್ದಂತೆ ಈ ಇಬ್ಬರು ಓಡಿ ಹೋಗಿದ್ದಾರೆ.

ಇದನ್ನೂ ಓದಿ: ವಿದ್ಯುತ್‌ ಸ್ಪರ್ಶಿಸಿ ತಾಯಿ ಹಸು ಸಾವು, ಅಮ್ಮನ ಸಮಾಧಿ ಮುಂದೆ ಕರುವಿನ ಮೂಕ ರೋದನೆ

ವರದಿಗಳ ಪ್ರಕಾರ ಶಕೀಲ್‌ಗೆ 10 ಮತ್ತು ವಧುವಿನ ತಾಯಿಗೆ 6 ಮಕ್ಕಳಿದ್ದಾರೆ. ಆದ್ರೆ ಪ್ರೀತಿಯ ಬಲೆಗೆ ಬಿದ್ದ ಈ ಇಬ್ಬರು ಮಕ್ಕಳ ಜವಬ್ದಾರಿಯನ್ನೂ ಮರೆತು ಇದೀಗ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಈ ಬಗ್ಗೆ ಅಸ್ಮಾಳ ಗಂಡ ಶಕೀಲ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ವರನ ತಂದೆಯೇ ನನ್ನ ಪತ್ನಿಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾನೆ. ದೂರಿನ ಅನ್ವಯ ಇದೀಗ ಪೊಲೀಸರು ಈ ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Fri, 19 July 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್