AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪ್ರಧಾನಿ ಯಾರೆಂದು ಹೇಳಲು ವಿಫಲನಾದ ವರ: ಮದುವೆ ಕ್ಯಾನ್ಸಲ್​ ಮಾಡಿಕೊಂಡ ವಧು, ಅಲ್ಲೇ ಆತನ ತಮ್ಮನನ್ನು ಮದುವೆಯಾದಳು

ವರನಿಗೆ ದೇಶದ ಪ್ರಧಾನ ಮಂತ್ರಿ ಯಾರೆಂಬುದು ಗೊತ್ತಾಗಿಲ್ಲ, ಉತ್ತರಿಸಲು ತಿಣುಕಾಡಿದ್ದಾನೆ. ಉತ್ತರ ಹೇಳಲಾಗದ ಕಾರಣ ವಧು ತನ್ನ ಮದುವೆಯನ್ನು ರದ್ದುಪಡಿಸಿದ ಘಟನೆ ಕಳೆದ ಶನಿವಾರ ನಡೆದಿದೆ.

ದೇಶದ ಪ್ರಧಾನಿ ಯಾರೆಂದು ಹೇಳಲು ವಿಫಲನಾದ ವರ: ಮದುವೆ ಕ್ಯಾನ್ಸಲ್​ ಮಾಡಿಕೊಂಡ ವಧು, ಅಲ್ಲೇ ಆತನ ತಮ್ಮನನ್ನು ಮದುವೆಯಾದಳು
ದೇಶದ ಪ್ರಧಾನಿ ಯಾರೆಂದು ಹೇಳಲು ವಿಫಲನಾದ ವರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 21, 2023 | 9:18 AM

Share

ಗಾಜಿಪುರ: ಇಂದು ವಿಶ್ವ ಯೋಗ ದಿನಾಚರಣೆ. ಆದರೆ ಇದು ಯಾರ ಯೋಗವೋ!? ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆಯಲ್ಲಿ, ದೇಶದ ಪ್ರಧಾನಿ ಯಾರು ಎಂದು ಉತ್ತರಿಸುವಂತೆ ವರನಿಗೆ (Bridegroom) ವಧು ಕೇಳಿದಳು. ಆದರೆ ವರನಿಗೆ ದೇಶದ ಪ್ರಧಾನ ಮಂತ್ರಿ (Prime Minister) ಯಾರೆಂಬುದು ಗೊತ್ತಾಗಿಲ್ಲ, ಉತ್ತರಿಸಲು ತಿಣುಕಾಡಿದ್ದಾನೆ. ಅದರೆ ಉತ್ತರ ಹೇಳಲಾಗದ ಕಾರಣ ವಧು ತನ್ನ ಮದುವೆಯನ್ನು ರದ್ದುಪಡಿಸಿದ ಘಟನೆ ಕಳೆದ ಶನಿವಾರ ನಡೆದಿದೆ. ಇನ್ನು ವಿವರಗಳಿಗೆ ಹೋದರೆ… ಆಕೆ ತಕ್ಷಣವೇ ಅಲ್ಲೇ ಇದ್ದ ವರನ ಕಿರಿಯ ಸಹೋದರನನ್ನು ಮದುವೆಯಾದಳು (Wedding). ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ.

ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಸೀರಪುರ ಗ್ರಾಮದ ರಾಮ ಅವತಾರ ಎಂಬುವವರ ಪುತ್ರ ಶಿವಶಂಕರ್ (27) ಹಾಗೂ ಕರಂದ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತ್ ಪಟ್ಟಿ ಗ್ರಾಮದ ಲಖೇಡು ರಾಮ್ ಅವರ ಪುತ್ರಿ ರಂಜನಾ ಅವರೊಂದಿಗೆ ಜೂನ್ 11ರಂದು ವಿವಾಹ ನೆರವೇರಿತು. ಹಿರಿಯರು ಇವರಿಬ್ಬರಿಗೂ 6 ತಿಂಗಳ ಹಿಂದೆ ಮದುವೆ ಮಾಡಿಸಿದ್ದರು.

ಅಂದಿನಿಂದ ಮೊಬೈಲ್ ಮೂಲಕವೇ ಇವರ ಮಾತುಕತೆ ಸಂಪರ್ಕ ಏರ್ಪಟ್ಟಿತ್ತು. ಆ ಮದುವೆಯ ನಂತರ ವಧುವಿನ ಮನೆಯಲ್ಲಿ ಜೂನ್ 12 ರಂದು ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಆ ಸಮಾರಂಭದಲ್ಲಿ ಶಿವಶಂಕರ್ ಅವರಿಗೆ ಪತ್ನಿ ರಂಜನಾ ಮತ್ತು ಆಕೆಯ ಸೋದರ ಮಾವ ಸ್ಪೆಷಲ್​​ ಕ್ಲಾಸ್​ ತೆಗೆದುಕೊಂಡು, ಕೆಲವು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿದ್ದಾರೆ.

ಅದರ ಭಾಗವಾಗಿ ಪತ್ನಿ ರಂಜನಾ ದೇಶದ ಪ್ರಧಾನಿಯ ಹೆಸರು ಹೇಳುವಂತೆ ಶಿವಶಂಕರ್ ಗೆ ಕೇಳಿದ್ದಾರೆ . ಆದರೆ ಶಿವಶಂಕರ್ ಅವರು ದೇಶದ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಹೇಳಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ, ವಧುವಿನ ಸಂಬಂಧಿಕರು ಅವನನ್ನು ಅಪಹಾಸ್ಯ ಮಾಡಿದ್ದಾರೆ. ಮತ್ತು ಅವನನ್ನು ದಡ್ಡ ಎಂದು ಪರಿಗಣಿಸಿದ್ದಾರೆ.

ಇದು ಅವಮಾನಕರ ಸಂಗತಿ ಎಂದು ಬಗೆದ ವಧು ರಂಜನಾ… ಶಿವಶಂಕರ್ ಜೊತೆಗಿನ ಮದುವೆಯನ್ನು ರದ್ದುಗೊಳಿಸಿ, ಆತನ ಕಿರಿಯ ಸಹೋದರ ಅನಂತ್ ಅವರನ್ನು ಆ ಸ್ಥಳದಲ್ಲೇ ವಿವಾಹವಾಗಿದ್ದಾಳೆ. ಇನ್ನು ಶಿವಶಂಕರ್ ಜೊತೆ ಬಂದಿದ್ದ ಚಿಕ್ಕಪ್ಪ ರಾಮ್ ಅವತಾರ್ ಅವರು ತಮ್ಮಸೊಸೆ ಕಿರಿಯನಾದ ಅನಂತನನ್ನು ಮದುವೆಯಾಗುವುದನ್ನು ವಿರೋಧಿಸಿದರು. ವಧು ಮತ್ತು ಕಿರಿಯ ಮಗ ಸಂಸಾರ ಹೂಡಲು ಮದುವೆಯಾಗುವುದಕ್ಕೆ ನಿರಾಕರಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ