AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ

Madhyapradesh : ಸಮೋಸಾ ಅಂಗಡಿಯವ ಬಟ್ಟಲು ನೀಡಲಿಲ್ಲವೆಂದು ಗ್ರಾಹಕರೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ್ದಾರೆ. ನೆಟ್ಟಿಗರು ಉರುಳಾಡಿ ನಗುತ್ತಿದ್ದಾರೆ.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 07, 2022 | 11:46 AM

Viral : ಮಧ್ಯಪ್ರದೇಶದ ಸಮೋಸಾ ಅಂಗಡಿಯೊಂದರಲ್ಲಿ, ಸಮೋಸಕ್ಕೆ ಬಟ್ಟಲು ನೀಡುತ್ತಿಲ್ಲ ಎಂಬ ತಕರಾರು ಎತ್ತಿ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ. ಆಗಸ್ಟ್ 30 ರಂದು ವಂಶ್ ಬಹದ್ದೂರ್ ಎಂಬ ವ್ಯಕ್ತಿಯು ‘ರಾಕೇಶ್ ಸಮೋಸಾ’ ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯವ ಬಟ್ಟಲು ನೀಡುವುದನ್ನು ನಿರಾಕರಿಸಿದ್ದರಿಂದ ಹತಾಶೆಗೊಂಡ ಬಹದ್ದೂರ್ ಅಂಗಡಿಯವರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇಂಡಿಯಾ ಟುಡೆ ವರದಿಯ ಪ್ರಕಾರ, ‘ಛತ್ತರ್​ಪುರ ಬಸ್​ ನಿಲ್ದಾಣದಲ್ಲಿ ರಾಕೇಶ್ ಸಮೋಸಾ ಎಂಬ ಅಂಗಡಿಯಿದೆ. ಇಲ್ಲಿ ಸಮೋಸಾ ಕೊಡುವಾಗ ಅಂಗಡಿಯವರು ಬಟ್ಟಲು ಕೊಟ್ಟಿಲ್ಲ. ದಯವಿಟ್ಟು ಈ ಸಮಸ್ಯೆಯನ್ನು ಬೇಗ ಪರಿಹರಿಸಿ’ ಎನ್ನುವುದು ದೂರಿನ ಸಾರಾಂಶ.

ಸಹಾಯವಾಣಿಯು ಈ ದೂರನ್ನು ಸ್ವೀಕರಿಸಿ, ಸೆಪ್ಟೆಂಬರ್ 5ರಂದು, ‘ನೀವು ಮುಖ್ಯಮಂತ್ರಿ ಸಹಾಯವಾಣಿ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಿದ ಈ ದೂರನ್ನು ವಿಲೇವಾರಿ ಮಾಡಲಾಗಿದೆ’ ಎಂದು ತಿಳಿಸಿದೆ.

ಈ ದೂರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ರಂಜನೀಯವಾಗಿ ಕಾಣುವುದರಲ್ಲಿ ಅಚ್ಚರಿಯೇ ಇಲ್ಲ. ಅನೇಕರು ಈ ಸುತ್ತ ಹಾಸ್ಯರೂಪದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾರ್ಯಾರಿಗೆ ಎಂತೆಂಥ ಸಮಸ್ಯೆಗಳು ಉದ್ಭವಿಸುತ್ತವೆಯೋ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 11:42 am, Wed, 7 September 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ