AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ

Madhyapradesh : ಸಮೋಸಾ ಅಂಗಡಿಯವ ಬಟ್ಟಲು ನೀಡಲಿಲ್ಲವೆಂದು ಗ್ರಾಹಕರೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ್ದಾರೆ. ನೆಟ್ಟಿಗರು ಉರುಳಾಡಿ ನಗುತ್ತಿದ್ದಾರೆ.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 07, 2022 | 11:46 AM

Share

Viral : ಮಧ್ಯಪ್ರದೇಶದ ಸಮೋಸಾ ಅಂಗಡಿಯೊಂದರಲ್ಲಿ, ಸಮೋಸಕ್ಕೆ ಬಟ್ಟಲು ನೀಡುತ್ತಿಲ್ಲ ಎಂಬ ತಕರಾರು ಎತ್ತಿ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ. ಆಗಸ್ಟ್ 30 ರಂದು ವಂಶ್ ಬಹದ್ದೂರ್ ಎಂಬ ವ್ಯಕ್ತಿಯು ‘ರಾಕೇಶ್ ಸಮೋಸಾ’ ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯವ ಬಟ್ಟಲು ನೀಡುವುದನ್ನು ನಿರಾಕರಿಸಿದ್ದರಿಂದ ಹತಾಶೆಗೊಂಡ ಬಹದ್ದೂರ್ ಅಂಗಡಿಯವರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇಂಡಿಯಾ ಟುಡೆ ವರದಿಯ ಪ್ರಕಾರ, ‘ಛತ್ತರ್​ಪುರ ಬಸ್​ ನಿಲ್ದಾಣದಲ್ಲಿ ರಾಕೇಶ್ ಸಮೋಸಾ ಎಂಬ ಅಂಗಡಿಯಿದೆ. ಇಲ್ಲಿ ಸಮೋಸಾ ಕೊಡುವಾಗ ಅಂಗಡಿಯವರು ಬಟ್ಟಲು ಕೊಟ್ಟಿಲ್ಲ. ದಯವಿಟ್ಟು ಈ ಸಮಸ್ಯೆಯನ್ನು ಬೇಗ ಪರಿಹರಿಸಿ’ ಎನ್ನುವುದು ದೂರಿನ ಸಾರಾಂಶ.

ಸಹಾಯವಾಣಿಯು ಈ ದೂರನ್ನು ಸ್ವೀಕರಿಸಿ, ಸೆಪ್ಟೆಂಬರ್ 5ರಂದು, ‘ನೀವು ಮುಖ್ಯಮಂತ್ರಿ ಸಹಾಯವಾಣಿ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಿದ ಈ ದೂರನ್ನು ವಿಲೇವಾರಿ ಮಾಡಲಾಗಿದೆ’ ಎಂದು ತಿಳಿಸಿದೆ.

ಈ ದೂರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ರಂಜನೀಯವಾಗಿ ಕಾಣುವುದರಲ್ಲಿ ಅಚ್ಚರಿಯೇ ಇಲ್ಲ. ಅನೇಕರು ಈ ಸುತ್ತ ಹಾಸ್ಯರೂಪದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾರ್ಯಾರಿಗೆ ಎಂತೆಂಥ ಸಮಸ್ಯೆಗಳು ಉದ್ಭವಿಸುತ್ತವೆಯೋ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 11:42 am, Wed, 7 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್