AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾದ ಬಿಜೆಪಿ ಕಾರ್ಪೊರೇಟರ್ ಪುತ್ರ

ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದೆ. ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹವನ್ನು ಏರ್ಪಡಿಸಿದ್ದರು.

ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾದ ಬಿಜೆಪಿ ಕಾರ್ಪೊರೇಟರ್ ಪುತ್ರ
ಮದುವೆ Image Credit source: www.court marriages.com
ನಯನಾ ರಾಜೀವ್
|

Updated on: Oct 20, 2024 | 10:00 AM

Share

ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದೆ. ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹವನ್ನು ಏರ್ಪಡಿಸಿದ್ದರು.

ಎರಡು ನೆರೆಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ಪಡೆಯಲು ಸಾಧ್ಯವಾಗಿಲ್ಲ. ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅವರು ಅನಾರೋಗ್ಯಕ್ಕೆ ಒಳಗಾಗಿ ಐಸಿಯುಗೆ ದಾಖಲಿಸಲಾಗಿತ್ತು, ಪರಿಸ್ಥಿತಿ ತೀರಾ ಹದಗೆಟ್ಟಿತ್ತು.

ಈ ಹಿನ್ನೆಲೆಯಲ್ಲಿ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದರು. ವಧುವಿನ ಕುಟುಂಬದವರು ಲಾಹೋರ್‌ನಿಂದ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಅವರು ವಧು, ವರನ ಒಪ್ಪಿಗೆ ಪಡೆದು ನಿಕಾ ಮಾಡಿಸಿದರು.

ಮತ್ತಷ್ಟು ಓದಿ:Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ಹೈದರ್ ತನ್ನ ಹೆಂಡತಿಗೆ ಯಾವುದೇ ತೊಂದರೆಯಿಲ್ಲದೆ ಭಾರತೀಯ ವೀಸಾ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಿಜೆಪಿ ಎಂಎಲ್‌ಸಿ ಬ್ರಿಜೇಶ್ ಸಿಂಗ್ ಪ್ರಿಶು ಮತ್ತು ಇತರ ಅತಿಥಿಗಳು ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಧು, ವರನ ಕುಟುಂಬವನ್ನು ಅಭಿನಂದಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು