AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್​ ಕೇಳಿದ ಗಂಡ!

ಬಿಳಿಯ ಬಣ್ಣದ ಪೋಷಕರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ತನಗೆ ಕಪ್ಪು ಮಗು ಹುಟ್ಟಿದ್ದರಿಂದ ಹೆಂಡತಿಯ ಚಾರಿತ್ರ್ಯದ ಮೇಲೆ ಅನುಮಾನಗೊಂಡ ಗಂಡ ಆಕೆಯಿಂದ ಡೈವೋರ್ಸ್​ ಕೇಳಿದ್ದಾನೆ. ಅಲ್ಲದೆ, ಡಿಎನ್ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ.

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್​ ಕೇಳಿದ ಗಂಡ!
ಮಗು
ಸುಷ್ಮಾ ಚಕ್ರೆ
|

Updated on: Nov 13, 2024 | 3:48 PM

Share

ಬೀಜಿಂಗ್: ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್​ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ ಚಾರಿತ್ರ್ಯ ಸರಿಯಿಲ್ಲವೆಂದು ಆತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ಚೀನಾ ಟೈಮ್ಸ್ ವರದಿಯ ಪ್ರಕಾರ, ಸುಮಾರು 1 ತಿಂಗಳ ಹಿಂದೆ 30 ವರ್ಷದ ಮಹಿಳೆ ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಅವರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ಆಕೆ ಮತ್ತು ಆಕೆಯ ಗಂಡ ಬಿಳಿ ಬಣ್ಣದವರಾಗಿದ್ದು, ಕಪ್ಪು ಮಗು ಹೇಗೆ ಹುಟ್ಟಿತು ಎಂದು ಆಕೆಯ ಪತಿ ಆಘಾತಕ್ಕೊಳಗಾದ. ಇದೇ ಕಾರಣವನ್ನಿಟ್ಟುಕೊಂಡು ಆತ ವಿಚ್ಛೇದನ ಕೋರಿದ್ದಾನೆ.

ಇದನ್ನೂ ಓದಿ: Viral: ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿ ಪ್ರಯಾಣಿಕನ ಹುಚ್ಚಾಟ; ವಿಡಿಯೋ ವೈರಲ್‌

ಈ ಘಟನೆಯನ್ನು ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಸಲಹೆ ಕೇಳಿದ್ದಾರೆ. ತನ್ನ ಪತಿ ಮೊದಲು ಮಗುವನ್ನು ನೋಡಲು ಬಂದಾಗ ಅವನು ಆಶ್ಚರ್ಯಚಕಿತನಾದನು. ಕಪ್ಪು ಬಣ್ಣದ್ದೆಂಬ ಕಾರಣಕ್ಕೆ ಮಗುವನ್ನು ಹಿಡಿಯಲು ನಿರಾಕರಿಸಿದನು ಎಂದು ಆಕೆ ವಿವರಿಸಿದ್ದಾಳೆ. ನಂತರ ಡಿಎನ್ಎ ಪರೀಕ್ಷೆ ನಡೆಸಿ ಮಗು ಆತನಿಗೇ ಹುಟ್ಟಿದ್ದು ಎಂದು ದೃಢಪಡಿಸುವಂತೆ ಒತ್ತಾಯಿಸಿದನು. ಅದು ನಮ್ಮಿಬ್ಬರದೇ ಮಗು ಎಂದು ಎಷ್ಟೇ ಹೇಳಿದರೂ ಆತ ಕೇಳಲಿಲ್ಲ ಎಂದು ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿ ನಿಂದಿಸಿದ ಮಂಗಳಮುಖಿ; ವಿಡಿಯೋ ವೈರಲ್

ಮಗುವಿನ ಕಪ್ಪು ಮೈಬಣ್ಣದಿಂದ ತನಗೂ ಆಶ್ಚರ್ಯವಾಯಿತು ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಆದರೆ, ಮಗುವಿನ ಬಣ್ಣದ ಕಾರಣಕ್ಕೆ ನಾನು ಹೆತ್ತ ಮಗುವನ್ನು ಕೈಬಿಡುವುದಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ. ಆಕೆಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಈ ವಿಷಯವನ್ನು ಚರ್ಚಿಸಿದರೆ, ಇತರರು ಬಿಳಿ ಚರ್ಮದ ದಂಪತಿಗಳು ಕಪ್ಪು ಚರ್ಮದ ಮಗುವನ್ನು ಹೊಂದುವುದು ಅಸಾಮಾನ್ಯವೇನಲ್ಲ ಎಂದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ