AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಗೆ ಹುಷಾರಿಲ್ಲ ಎಂದರೂ ಇಂಟರ್ನ್ ಉದ್ಯೋಗಿಗೆ ರಜೆ ನೀಡಲು ನಿರಾಕರಿಸಿದ ಬಾಸ್‌

ಕೆಲಸ ಮುಖ್ಯನಾ? ಕುಟುಂಬ ಮುಖ್ಯನಾ? ಯಾವುದನ್ನು ಮೊದಲು ಆಯ್ಕೆ ಮಾಡಿಕೊಳ್ಳುತ್ತೇವೆ ಎಂಬ ಪ್ರಶ್ನೆ ಬಂದಾಗ ಅನೇಕರು ಕುಟುಂಬವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಕುಟುಂಬಕ್ಕಾಗಿ ದುಡಿಯುವ ಕಾರಣ ಕುಟುಂಬವೇ ಮುಖ್ಯ ಎಂದು ಹೇಳುವುದು ಸಹಜ. ಅದಕ್ಕಾಗಿ ಕುಟುಂಬವನ್ನು ಬಿಟ್ಟು ಕೆಲಸ ಮುಖ್ಯ ಆಗುವುದಿಲ್ಲ. ಇದೀಗ ಈ ಕಾರಣಕ್ಕೆ ಇಲ್ಲೊಂದು ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಮನೆಯಲ್ಲಿ ಪೋಷಕರ ಆರೋಗ್ಯದಲ್ಲಿ ಸಮಸ್ಯೆ ಆಗಿದೆ ಎಂದು ರಜೆ ತೆಗೆದುಕೊಂಡ ಇಂಟರ್ನ್​ ಯುವತಿಗೆ ಆಕೆಯ ಬಾಸ್​​​ ಹೇಳಿದ ಮಾತು ವೈರಲ್​​ ಆಗಿದೆ.

ಪೋಷಕರಿಗೆ ಹುಷಾರಿಲ್ಲ ಎಂದರೂ ಇಂಟರ್ನ್ ಉದ್ಯೋಗಿಗೆ ರಜೆ ನೀಡಲು ನಿರಾಕರಿಸಿದ ಬಾಸ್‌
ವೈರಲ್​​ ಪೋಸ್ಟ್
ಸಾಯಿನಂದಾ
| Updated By: ಮಾಲಾಶ್ರೀ ಅಂಚನ್​|

Updated on: Aug 02, 2025 | 2:24 PM

Share

ಕುಟುಂಬ ಮತ್ತು ಕೆಲಸ (Indian boss) ಎರಡರಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಿ ಎಂದಾಗ ಮೊದಲು ಆಯ್ಕೆ ಮಾಡಿಕೊಳ್ಳುವುದು ಕುಟುಂಬವನ್ನು. ಕೆಲಸ ಮಾಡುವುದೇ ಕುಟುಂಬಗೋಸ್ಕರ, ಕುಟುಂಬವೇ ಇಲ್ಲ ಎಂದ ಮೇಲೆ ಯಾರಿಗಾಗಿ ದುಡಿಯಬೇಕು ಎನ್ನುವುದು ಕೆಲವರ ವಾದ, ಇನ್ನು ಕೆಲವರು ಕೆಲಸವೇ ಸರ್ವ ಎಂದುಕೊಂಡು ಕುಟುಂಬವನ್ನು ದೂರು ಮಾಡಿಕೊಳ್ಳುತ್ತಾರೆ. ಹೀಗೆ ಪರ – ವಿರೋಧ ವಾದಗಳು ಇರುತ್ತದೆ. ಅದರಲ್ಲೂ ‌ ಕೆಲವೊಂದು ಕಂಪನಿಗಳು ಮನುಷ್ಯತ್ವವನ್ನು ಮರೆತು, ನಡೆದುಕೊಳ್ಳುತ್ತದೆ. ಕೆಲಸ ಮಾಡುವ ಉದ್ಯೋಗಿಗಳನ್ನು (unpaid intern) ಯಂತ್ರದಂತೆ ನಡೆಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗೆ ಕೆಲವೊಂದು ಪೋಸ್ಟ್​​ಗಳು ವೈರಲ್​​ ಆಗುತ್ತ ಇರುತ್ತದೆ. ಇದೀಗ ಇಲ್ಲೊಂದು ರೆಡ್ಡಿಟ್​​ನಲ್ಲಿ ಪೋಸ್ಟ್​​​ವೊಂದು ವೈರಲ್​​ ಆಗಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಭಾರತೀಯ ಬಾಸ್​​​ಗಳು ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ವಿವರವಾಗಿ ಹಂಚಿಕೊಳ್ಳಲಾಗಿದೆ.

ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಗೆ ಆಗಿರುವ ಅವಮಾನ ಹಾಗೂ ಹಿಂಸೆಯ ಬಗ್ಗೆ ಹೇಳಿಕೊಂಡಿದ್ದಾರೆ, ವೇತನವಿಲ್ಲದೆ ಇಂಟರ್ನ್‌ ಆಗಿ ದುಡಿಯುತ್ತಿದ್ದ ಆಕೆಗೆ ರಜೆ ನಿರಾಕರಣೆ ಮಾಡಿರುವ ಬಗ್ಗೆ ಅವರು ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅನಾರೋಗ್ಯ ಪೀಡಿತ ಪೋಷಕರನ್ನು ನೋಡಿಕೊಳ್ಳಲು ಒಂದು ದಿನ ರಜೆ ತೆಗೆದುಕೊಂಡಿದ್ದಕ್ಕಾಗಿ ಇಂಟರ್ನ್‌ನನ್ನು ಅವಮಾನಿಸಿರುವ ಸಂದೇಶದ ಸ್ಕ್ರೀನ್‌ಶಾಟ್​​ನ್ನು ರೆಡ್ಡಿಟ್​​ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಸ್ನೇಹಿತೆ ವೇತನವಿಲ್ಲದ ಇಂಟರ್ನ್‌ಶಿಪ್ ಮಾಡುತ್ತಿದ್ದಾಳೆ. ಅವಳ ಬಾಸ್ ಅವಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದು, ಅವಳ ಮೇಲೆ ದಬ್ಬಾಳಿಕೆಯನ್ನು ನಡೆಸಿದ್ದಾರೆ. ಈ ಬಗ್ಗೆ ಅವಳ ಮತ್ತು ಬಾಸ್ ನಡುವಿನ ವಾಟ್ಸಾಪ್ ಸಂಭಾಷಣೆಯ ಸ್ಕ್ರೀನ್‌ಶಾಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಈ ಸ್ಕ್ರೀನ್‌ಶಾಟ್​​​ನಲ್ಲಿ ಹೀಗಿದೆ, ‘ಸರ್ ನಿಮಗೆ ಈ ಬಗ್ಗೆ ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಇಂದು ಆಫೀಸ್​​​ಗೆ ಬರಲು ಸಾಧ್ಯವಿಲ್ಲ. ಯಾಕೆಂದರೆ ನನ್ನ ಪೋಷಕರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ನಾನು ಮನೆಯಲ್ಲಿ ಇರಬೇಕಾದ ಅಗತ್ಯವಿದೆ. ಹೀಗಾಗಿ ನಾನು ಅನಿವಾರ್ಯವಾಗಿ ರಜೆ ತೆಗೆದುಕೊಳ್ಳಬೇಕಾಗಿದೆ. ಜತೆಗೆ ನಾನು ನೀವು ನೀಡಿದ ಕೆಲಸವನ್ನು ಮುಗಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಗುವನ್ನು ಏರ್‌ಪೋರ್ಟ್‌ನಲ್ಲಿಯೇ ಬಿಟ್ಟು ಟ್ರಿಪ್‌ಗೆ ಹೋದ ತಂದೆ-ತಾಯಿ

ಇದನ್ನೂ ಓದಿ
Image
ಇಲ್ಲಿನ ಜನರು ವಾರಕ್ಕೊಮ್ಮೆ ಈ ರೀತಿ ಮಾಡಿ ಒತ್ತಡಕ್ಕೆ ಬ್ರೇಕ್ ಹಾಕಿಕೊಳ್ತಾರೆ
Image
ಭಾರತೀಯ ಕಾರು ಚಾಲಕರೆಲ್ಲರೂ ಹೀಗೆನಾ, ವಿದೇಶಿಗ ಹೀಗೆಂದಿದ್ದೇಕೆ?
Image
ರಸ್ತೆ ಬದಿಯಲ್ಲಿ ಡ್ಯಾನ್ಸ್ ಮಾಡ್ತಿದ್ದ ವಿದೇಶಿಗ ಅರೆಸ್ಟ್
Image
ಉತ್ತರ ಕರ್ನಾಟಕದ ರೊಟ್ಟಿ ಸವಿಯಲು ಅಮೆರಿಕದಿಂದ ಬೆಂಗಳೂರಿಗೆ ಬರುವ ಉದ್ಯಮಿ

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

Boss won’t allow my friend to take emergency leaves as an unpaid intern byu/ashueep inIndianWorkplace

ಆ ಸಂದೇಶಕ್ಕೆ ಬಾಸ್​​ ನೀಡಿದ ಉತ್ತರ ಹೀಗಿತ್ತು, ‘ನೀವು ಎಲ್ಲೋ ಇಂಟರ್ನ್‌ಶಿಪ್ ಮಾಡುತ್ತಿರುವಾಗ ಒಂದು ಜವಾಬ್ದಾರಿಯೂ ಇರುತ್ತದೆ. ಇಲ್ಲಿ ಏನಾದರೂ ದೊಡ್ಡ ಮಟ್ಟದ ಕೆಲಸವನ್ನು ನೀಡಿದ್ರೆ ನೀವು ಮೂರು ದಿನದ ಮೊದಲೇ ಕಾಣೆಯಾಗುತ್ತೀರಾ…ಏನೇ ಇರಲಿ ನಿಮ್ಮ ಆಯ್ಕೆ… ಇದು ನಿಮ್ಮ ಕೆಲಸದ ಬಗ್ಗೆ ಗಂಭೀರತೆಯನ್ನು ತೋರಿಸುತ್ತದೆ’ ಎಂದು ಹೇಳಿದ್ದಾರೆ. ಇನ್ನು ಈ ಪೋಸ್ಟ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಒಬ್ಬ ಬಳಕೆದಾರ ಇಂಟರ್ನ್ ಒಂದು ದಿನ ರಜೆ ತೆಗೆದುಕೊಂಡ ಕಾರಣ, ಅಲ್ಲಿನ ಕೆಲಸಕ್ಕೆ ತೊಂದರೆ ಆಗುತ್ತದೆ ಎಂದರೆ, ಇಂಟರ್ನ್​​ಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಇಂಟರ್ನ್‌ಗಳಿಗೆ ಸಂಬಳ ನೀಡಬೇಕು ಮತ್ತು ಅವರಿಗೆ ಮಾಡಲು ಸಾಧ್ಯವಾಗದ ಕೆಲಸಗಳನ್ನು ನೀಡಬಾರದು ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಭಾರತೀಯ ಬಾಸ್‌ಗಳು ವೇಷ ಧರಿಸಿ ಕೆಲಸ ಮಾಡುವ ದೆವ್ವಗಳು, ಆದರೆ ಅವರು ತುರ್ತು ರಜೆ ನೀಡುವುದಿಲ್ಲ ಎಂಬ ಮಾತು ಒಪ್ಪಲು ಸಾಧ್ಯವಿಲ್ಲ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!