AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಗೋಧಿ  ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ
ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on:Apr 24, 2024 | 5:57 PM

Share

ಉತ್ತರ ಪ್ರದೇಶ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಮಾಹಿತಿಗಳ ಪ್ರಕಾರ 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಾಲಕ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಇದನ್ನೂ ಓದಿ: ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:50 pm, Wed, 24 April 24

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು