AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಗೋಧಿ  ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ
ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on:Apr 24, 2024 | 5:57 PM

Share

ಉತ್ತರ ಪ್ರದೇಶ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಮಾಹಿತಿಗಳ ಪ್ರಕಾರ 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಾಲಕ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಇದನ್ನೂ ಓದಿ: ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:50 pm, Wed, 24 April 24

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ