AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಗೋಧಿ  ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ
ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on:Apr 24, 2024 | 5:57 PM

Share

ಉತ್ತರ ಪ್ರದೇಶ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಮಾಹಿತಿಗಳ ಪ್ರಕಾರ 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಾಲಕ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಇದನ್ನೂ ಓದಿ: ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:50 pm, Wed, 24 April 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ