AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಗೋಧಿ  ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ
ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on:Apr 24, 2024 | 5:57 PM

Share

ಉತ್ತರ ಪ್ರದೇಶ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಮಾಹಿತಿಗಳ ಪ್ರಕಾರ 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಾಲಕ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಇದನ್ನೂ ಓದಿ: ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:50 pm, Wed, 24 April 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ