AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು

ಹುಣಸೆ ಹಣ್ಣು ಎಂದ ತಕ್ಷಣ ಬಾಯಿಯಲ್ಲಿ ನೀರು ಬರುವುದು ಖಂಡಿತಾ. ಆದರೆ ಹುಣಸೆ ಹಣ್ಣು ಪುಟ್ಟ ಬಾಲಕ ಜೀವಕ್ಕೆ ಕಂಟಕವಾಗಿದೆ. ಬಾಲಕ ಹುಣಸೆಹಣ್ಣು ತಿನ್ನುತ್ತಿದ್ದ ವೇಳೆ ಅದರ ಬೀಜವನ್ನು ನುಂಗಿದ್ದಾನೆ. ಪರಿಣಾಮ ಹುಣಸೆ ಬೀಜ ಗಂಟಲಲ್ಲಿ ಸಿಲುಕಿದ್ದು, ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿದ್ದಾನೆ. ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

Viral News: ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು
ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು Image Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 07, 2024 | 4:19 PM

Share

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮುಜಾಫರ್‌ಪುರದ ಸಕ್ರಾದ ಮಚ್ಚಿ ಗ್ರಾಮದ ರಾಜೇಶ್ ಮಹತೋ ಅವರ 10 ವರ್ಷದ ಮಗ ಆದರ್ಶ್ ಹುಣಸೆಹಣ್ಣು(Tamarind) ತಿಂದು ಸಾವನ್ನಪ್ಪಿದ್ದಾನೆ. ಆದರ್ಶ್ ಮೂರನೇ ತರಗತಿ ವಿದ್ಯಾರ್ಥಿ. ವರದಿಗಳ ಪ್ರಕಾರ, ಆದರ್ಶ್ ಶನಿವಾರ ಹುಣಸೆಹಣ್ಣು ತಿನ್ನುತ್ತಿದ್ದ ವೇಳೆ ಅದರ ಬೀಜವನ್ನು ನುಂಗಿದ್ದಾನೆ. ಪರಿಣಾಮ ಹುಣಸೆ ಬೀಜ(Tamarind Seeds) ಗಂಟಲಲ್ಲಿ ಸಿಲುಕಿದ್ದು, ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಬಾಲಕ ಉಸಿರಾಡಲು ಕಷ್ಟಪಡುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಬಾಲಕನ ಸ್ಥಿತಿ ಗಂಭೀರವಾಗಿದೆ. ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮುಜಾಫರ್‌ಪುರಕ್ಕೆ ಕರೆದೊಯ್ಯಲಾಗಿದೆ. ಮುಜಾಫರ್‌ಪುರ ಆಸ್ಪತ್ರೆಯಲ್ಲಿ  ಅಲ್ಟ್ರಾಸೌಂಡ್ ನಡೆಸಿದಾಗ ಬಾಲಕನ ಶ್ವಾಸಕೋಶದಲ್ಲಿ ಹುಣಸೆ ಬೀಜಗಳು ಅಂಟಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಬಾಲಕನ ಪ್ರಾಣ ಉಳಿಸಲು ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದ ಕಾರಣ ವೈದ್ಯರ ಸಲಹೆಯಂತೆ ಕುಟುಂಬಸ್ಥರು ಪಾಟ್ನಾದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆತನ ಆಸ್ಪತ್ರೆ ತಲುಪುವ ಮಾರ್ಗಮಧ್ಯೆ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಅಯೋಧ್ಯೆ ಯಾತ್ರೆ ಪ್ರಾರಂಭಿಸಿದ ವಿಶ್ವದ ಐಷಾರಾಮಿ ರೈಲು; 42 ವರ್ಷಗಳ ಬಳಿಕ ರೈಲಿನ ಮಾರ್ಗ ಬದಲಾವಣೆ

ಹುಣಸೆ ಬೀಜದಿಂದಾಗಿ 10ವರ್ಷದ ಬಾಲಕ ಸಾವನ್ನಪ್ಪಿರುವುದು ಕುಟುಂಬದಲ್ಲಿ ದುಃಖದ ವಾತಾವರಣ ಆವರಿಸಿದೆ . ಬಾಲಕನ ಸಾವಿಗೆ ಪೋಷಕರು ಅಳಲು ತೋಡಿಕೊಂಡಿದ್ದು, ಗ್ರಾಮದಲ್ಲಿ ಹುಣಸೆ ಹಣ್ಣಿನ ಸೇವನೆಯೇ ಭಯ ಹುಟ್ಟಿಸುವಂತಹ ವಾತಾವರಣ ನಿರ್ಮಾಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!