AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿರುವ ರೈಲಿನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ಹುಡುಗರ ಗುಂಪೊಂದು ರೈಲ್ವೇ ಟ್ರ್ಯಾಕ್ ಬಳಿ ನಿಂತು ಚಲಿಸುತ್ತಿರುವ ರೈಲಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ರೈಲು ಹತ್ತಿರ ಬರುತ್ತಿದ್ದಂತೆ ಹುಡುಗರು ಫೋನ್​ ಹಿಡಿದು ರೆಡಿಯಾಗಿದ್ದಾರೆ. ಆದರೆ ವೇಗವಾಗಿ ಬಂದ ರೈಲು ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ.

ಅಕ್ಷತಾ ವರ್ಕಾಡಿ
|

Updated on:Oct 27, 2024 | 3:06 PM

Share

ಬಾಂಗ್ಲಾದೇಶ: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​ ಆಗಲು ಯಾವ ಮಟ್ಟಕ್ಕೂ ಬೇಕಾದರೂ ಇಳಿದು ರೀಲ್ಸ್ ಮಾಡುವವರು ಇದ್ದಾರೆ. ಇದೀಗ ಹುಡುಗರ ಗುಂಪೊಂದು ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್​​ ಮಾಡಿದ್ದು, ವೇಗವಾಗಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಘಟನೆ ಬಾಂಗ್ಲಾದೇಶದ ರಂಗ್‌ಪುರದಲ್ಲಿ ನಡೆದಿದೆ ಎಂದು ವದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಹುಡುಗರ ಗುಂಪೊಂದು ರೈಲ್ವೇ ಟ್ರ್ಯಾಕ್ ಬಳಿ ನಿಂತು ಚಲಿಸುತ್ತಿರುವ ರೈಲಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ರೈಲು ಹತ್ತಿರ ಬರುತ್ತಿದ್ದಂತೆ ಹುಡುಗರು ಫೋನ್​ ಹಿಡಿದು ರೆಡಿಯಾಗಿದ್ದಾರೆ.ವೇಗವಾಗಿ ಬಂದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ಅಂಗವೈಕಲ್ಯತೆಯನ್ನು ಮೆಟ್ಟಿ ನಿಂತು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ, ವಿಡಿಯೋ ವೈರಲ್

@iSoumikSaheb ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಅಕ್ಟೋಬರ್ ​26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. “ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಲು ಇಂತಹ ಹುಚ್ಚು ಸಾಹಸಗಳನ್ನು ಮಾಡಿ ಪ್ರಾಣ ಕಳೆದುಕೊಳ್ಳಬೇಡಿ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:05 pm, Sun, 27 October 24

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ