AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ

Viral Video: ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ.

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ
ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ
TV9 Web
| Edited By: |

Updated on:Sep 09, 2021 | 1:36 PM

Share

ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆದ ಸುದ್ದಿಯೆಂದರೆ ಬಾಲಕನೋರ್ವ ಕುದಿಯುತ್ತಿರುವ ನೀರಿನಲ್ಲಿ ಕುಳಿತಿದ್ದಾನೆ. ಕೇಸರಿ ಶಾಲು ಹೊದ್ದ ಬಾಲಕ ಧ್ಯಾನಸ್ಥನಾಗಿ ನೀರಿನ ದೊಡ್ಡ ಪಾತ್ರೆಯಲ್ಲಿ ಕುಳಿತಿರುವುದನ್ನು ನೋಡಬಹುದು. ಪಾತ್ರೆಯ ಕೆಳಗೆ ಬೆಂಕಿ ಹಚ್ಚಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಫುಲ್ ವೈರಲ್ ಆಗುತ್ತಿದ್ದಂತೆಯೇ ಈ ದೃಶ್ಯದ ಕುರಿತಾಗಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದೆ.

ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ. ನೀರಿನ ಪಾತ್ರೆಯನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಕೆಳಗೆ ಬೆಂಕಿ ಹಚ್ಚಲಾಗಿದೆ. ಸುತ್ತಲೂ ಜನರು ಸೇರಿರುವುದು ವಿಡಿಯೋದಲ್ಲಿ ನೋಡಬಹುದು.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಸಂದೀಪ್ ಬಿಶ್ವತ್ ಎಂಬುವವರು ವಿಡಿಯೋ ಹರಿಬಿಟ್ಟಿದ್ದಾರೆ. ಇದೇ 2021ರ ಭಾರತ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 1.3 ಮಿಲಿಯನ್​ಗೂ ಹೆಚ್ಚು ವೀಕ್ಷಣೆಗಳನ್ನು ವಿಡಿಯೋ ಪಡೆದುಕೊಂಡಿದೆ.

ನೀರು ಕುದಿಯುತ್ತಿದೆ ಎಂದಾರೆ ಪಾತ್ರೆಯಲ್ಲಿರುವ ಹೂವುಗಳು ಏಕೆ ಹೊರಚೆಲ್ಲುತ್ತಿಲ್ಲ? ಇದು ಫೇಕ್ ವಿಡಿಯೋ ಎಂದು ಓರ್ವರು ಹೇಳಿದ್ದಾರೆ. ಇದೇ ರೀತಿಯ ಅನೇಕ ಪ್ರಶ್ನೆಗಳು ನೆಟ್ಟಿಗರಿಂದ ಕೇಳಿ ಬಂದಿದೆ. ಕೆಲವರು ಬಾಲಕನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ.

ಇದನ್ನೂ ಓದಿ:

Viral Video: ಪ್ರವಾಹದಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಕಾರನ್ನು ಮನೆ​ಗೆ ಕಟ್ಟಿ ಹಾಕಿದ ಮಾಲೀಕ; ವಿಡಿಯೋ ವೈರಲ್

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

(Boy Sitting in boiling water shocking video goes viral)

Published On - 1:35 pm, Thu, 9 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ