AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕೊರೊನಾ ಸೋಂಕಿತರಿಗೆ ಈ ಪುಟ್ಟ ಬಾಲಕನ ವಿಶೇಷ ಸಂದೇಶ

ಬಾಲಕ ಸಂದೇಶ ಬರೆಯುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗುತ್ತಿದ್ದು, ಬಾಲಕನ ಪ್ರಾರ್ಥನೆಗೆ ಮತ್ತು ಸೋಂಕಿತರು ಬೇಗ ಚೇತರಿಸಿಕೊಳ್ಳಲಿ ಎಂಬ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Viral: ಕೊರೊನಾ ಸೋಂಕಿತರಿಗೆ ಈ ಪುಟ್ಟ ಬಾಲಕನ ವಿಶೇಷ ಸಂದೇಶ
ಕೊರೊನಾ ಸೋಂಕಿತರಿಗೆ ಬಾಲಕನ ಸಂದೇಶ
shruti hegde
|

Updated on:May 19, 2021 | 3:42 PM

Share

ಕೊರೊನಾ ಸೋಂಕಿತರಿಗಾಗಿ ತನ್ನ ತಾಯಿ ಸಿದ್ಧಪಡಿಸಿದ ಊಟದ ಡಬ್ಬಿಯ ಮೇಲೆ ಬಾಲಕ ಬರೆದ ವಿಶೇಷ ಸಂದೇಶ ಇದೀಗ ನೆಟ್ಟಿಗರ ಹೃದಯ ಗೆದ್ದಿದೆ. ಬಾಲಕ ಸಂದೇಶ ಬರೆಯುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗುತ್ತಿದ್ದು, ಬಾಲಕನ ಪ್ರಾರ್ಥನೆಗೆ ಮತ್ತು ಸೋಂಕಿತರು ಬೇಗ ಚೇತರಿಸಿಕೊಳ್ಳಲಿ ಎಂಬ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಪುಟ್ಟ ಬಾಲಕನಿಗೆ ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಯ ಕುರಿತು ಅರಿವಿದೆ. ಆತನೂ ಕೂಡಾ ಈ ಕುರಿತಂತೆ ಚಿಂತಿಸಿದ್ದಾನೆ. ಏನೂ ಅರಿಯದ ಆ ತಿಳಿ ವಯಸ್ಸಿನಲ್ಲಿ ಸೋಂಕಿನಿಂದ ಬಳಲುತ್ತಿರುವವರ ಕಷ್ಟದ ಅರಿವು ಆ ಬಾಲಕಿನಿಗೆ ಆಯಿತಲ್ಲಾ ಎಂಬುದು ಆಶ್ಚರ್ಯವೆನಿಸುತ್ತದೆ. ಆ ಬಾಲಕನ ಮನಸ್ಸಿನಿಂದ ಬಂದ ಸಂದೇಶ ಎಲ್ಲರ ಮನಮುಟ್ಟುವಂತಿದೆ.

ಹಚ್ಚಹಸಿರು ಶರ್ಟ್​ ಧರಿಸಿದ ಬಾಲಕ, ತನ್ನ ಅಮ್ಮ ಕೊರೊನಾ ಸೋಂಕಿತರಿಗಾಗಿ ತಯಾರಿಸಿದ ಊಟದ ಡಬ್ಬಿಯ ಮೇಲೆ ‘ ಖುಷ್​ ರಹೀಯೆ’ (ಖುಷಿಯಾಗಿರಿ) ಎಂಬ ಸಂದೇಶವನ್ನು ಬರೆಯುತ್ತಾನೆ. ಮೇಜಿನ ಮೇಲಿರುವ ಎಲ್ಲಾ ಡಬ್ಬಿಯ ಮೇಲೂ ಈ ಎರಡು ಪದಗಳನ್ನು ಬರೆದು ನಗುಮುಖದ ಇಮೋಜಿ ಚಿತ್ರವನ್ನು ಬಿಡಿಸುತ್ತಾನೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆದ ಈ ಬಾಲಕನ ವಿಡಿಯೋ 12,000ಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ. ನೂರಾರು ಕಾಮೆಂಟ್ಸ್​ಗಳು ಕೂಡಾ ಬಂದಿವೆ. ಬಾಲಕನ ವಿಶೇಷ ಸಂದೇಶ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ವಾಹ್​.. ಎಂತಹ ಮುದ್ದಾದ ಬಾಲಕ, ಸುಂದರವಾದ ಕೈ ಬರಹ’ ಎಂದು ಶ್ಲಾಘಿಸಿದ್ದಾರೆ. ಇನ್ನೋರ್ವರು ಅಭಿಪ್ರಾಯ ಹಂಚಿಕೊಂಡಿದ್ದು, ‘ಸೋ ಸ್ವೀಟ್​.. ಇವನ ಮುಂದಿನ ಭವಿಷ್ಯ ಉಜ್ವಲವಾಗಲಿ’ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ಈ ಪುಟ್ಟ ಬಾಲಕನ ಮಾನವೀಯತೆ ಎಲ್ಲಾ ಸುದ್ದಿ ವಾಹಿನಗಳಲ್ಲಿ ಮುಖ್ಯಾಂಶವಾಗಿದೆ.!

Published On - 3:37 pm, Wed, 19 May 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ