AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಬ್ಬಬ್ಬಾ… ಹೂವು ಹಿಡಿದಷ್ಟು ಸಲೀಸಾಗಿ ನಾಗರಹಾವು ಹಿಡಿದ ವ್ಯಕ್ತಿ

ಆಹಾರವನ್ನರಸುತ್ತಾ ಜನವಸತಿ ಪ್ರದೇಶಗಳ ಕಡೆಗೆ ಹಾವುಗಳು ಬರುವಂತಹದ್ದು ಸಾಮಾನ್ಯ. ಹೀಗೆ ಮನೆ ಬಳಿ ಹಾವುಗಳು ಬಂದ್ರೆ ಜನ ಭಯ ಬಿದ್ದು ಓಡಿ ಹೋಗ್ತಾರೆ. ಇಲ್ಲೊಂದು ಕಡೆ ಅದೇ ರೀತಿ ದೈತ್ಯ ನಾಗರ ಹಾವು ಬಂದಿದ್ದು, ಮನೆಯ ಹೆಂಚಿನ ಮೇಲೆ ಕುಳಿತಿದ್ದ 5 ಅಡಿ ಉದ್ದದ ಈ ಹಾವನ್ನು ಉರಗ ರಕ್ಷಕರೊಬ್ಬರು ರಕ್ಷಣೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Video: ಅಬ್ಬಬ್ಬಾ… ಹೂವು ಹಿಡಿದಷ್ಟು ಸಲೀಸಾಗಿ ನಾಗರಹಾವು ಹಿಡಿದ ವ್ಯಕ್ತಿ
ನಾಗರಹಾವು ಹಿಡಿದ ವ್ಯಕ್ತಿImage Credit source: Social Media
ಮಾಲಾಶ್ರೀ ಅಂಚನ್​
|

Updated on:Jul 18, 2025 | 1:00 PM

Share

ಹಾವುಗಳೆಂದರೆ (Snakes)  ಬಹುತೇಕ ಎಲ್ಲರಿಗೂ ಸಿಕ್ಕಾಪಟ್ಟೆ ಭಯ. ಇವುಗಳು ವಿಷಕಾರಿ ಜೀವಿಗಳಾಗಿರುವುದರಿಂದ ಅವುಗಳು ಕಚ್ಚಿದರೆ ಪ್ರಾಣಕ್ಕೆ ಅಪಾಯ ಖಂಡಿತ ಎಂದು ಹೆಚ್ಚಿನವರು ಹಾವನ್ನು ದೂರದಿಂದ ಕಂಡರೂ ಓಡಿ ಹೋಗ್ತಾರೆ. ಹೀಗೆ ಹಾವನ್ನು ಕಂಡ್ರೆ ಭಯ ಪಡುವವರು ಒಂದು ಕಡೆಯಾದ್ರೆ, ಯಾವುದೇ ಭಯವಿಲ್ಲದೆ ನಿರ್ಭೀತಿಯಿಂದ ದೈತ್ಯ ವಿಷಕಾರಿ ಹಾವುಗಳನ್ನು ಸಹ ಬರಿ ಗೈಲಿ ಹಿಡಿಯುವವರಿದ್ದಾರೆ. ಅದೇ ರೀತಿ ಇಲ್ಲೊಬ್ರು ವ್ಯಕ್ತಿ ಮನೆಯ ಹೆಂಚಿನ ಮೇಲೆ ಹೆಡೆ ಎತ್ತಿ ಕುಳಿತಿದ್ದ 5 ಅಡಿ ಉದ್ದದ ನಾಗರಹಾವನ್ನು ಸಲೀಸಾಗಿ ಹಿಡಿದು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ವ್ಯಕ್ತಿಯ ಧೈರ್ಯಯವನ್ನು ಕಂಡು ನೋಡುಗರು ಬೆರಗಾಗಿದ್ದಾರೆ.

ಸಲೀಸಾಗಿ ನಾಗರಹಾವು ಹಿಡಿದ ಧೀರ:

ಹಾವುಗಳನ್ನು ಕಂಡರೆ ಭಯ ಬಿದ್ದು ಓಡಿ ಹೋಗುವವರೇ ಹೆಚ್ಚು. ಆದರೆ ಈ ವ್ಯಕ್ತಿ  ಹೂವು ಹಿಡಿದಂತೆ ಸಲೀಸಾಗಿ ನಾಗರಹಾವನ್ನು ಹಿಡಿದಿದ್ದಾರೆ. ಮನೆಯೊಂದರ ಹೆಂಚಿನ ಮೇಲೆ ಹೆಡೆ ಎತ್ತಿ ಕುಳಿತಿದ್ದಂತಹ 5 ಅಡಿ ಉದ್ದದ ಈ ನಾಗರಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

ಪರ್ತಕರ್ತ ಆಂಟೋನಿ (Antony journalist) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಚಿಕ್ಕಬೂದಿಹಾಳದಲ್ಲಿ ಮನೆಯ ಮೇಲೆ ಕುಳಿತಿದ್ದಂತಹ ನಾಗರಹಾವನ್ನು ಸುರಕ್ಷಿತವಾಗಿ ಹಿಡಿಯಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಈಜುತ್ತಾ ದಡ ಸೇರಿ ಕಾಡಿನ ಕಡೆಗೆ ಓಡಿ ಹೋದ ಚಿರತೆ
Image
ಕಾಲೇಜು ಯುವತಿಯ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್
Image
ಮರಳಿ ಅಮ್ಮನ ಮಡಿಲು ಸೇರಿದ ಮರಿಯಾನೆಯ ಖುಷಿ ನೋಡಿ
Image
ಸಾವಿನಿಂದ ತಪ್ಪಿಸಿಕೊಳ್ಳಲು ಹಾವಿನ ತಲೆಯ ಮೇಲೆ ಕುಳಿತ ಇಲಿ

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮನೆಯೊಂದರ ಹೆಂಚಿನ ಮೇಲೆ 5 ಅಡಿ ಉದ್ದದ ನಾಗರ ಹಾವೊಂದು ಕುಳಿತಿರುವಂತಹ ದೃಶ್ಯವನ್ನು ಕಾಣಬಹುದು. ನಂತರ ಉರಗ ರಕ್ಷಕರೊಬ್ಬರು ಹೆಂಚಿನ ಮೇಲೆ ಹತ್ತಿ ಜೋಪಾನವಾಗಿ ಆ ಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ. ಆದರೆ ಅನೇಕರು ಈ ಹೀಗೆ ಅವೈಜ್ಞಾನಿಕ ರೀತಿಯಲ್ಲಿ ಹಾವನ್ನು ಹಿಡಿದು ಅದಕ್ಕೆ ನೋವು ಕೊಟ್ಟದ್ದು ತಪ್ಪು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಲ್ಲಿ ಕ್ರಿಕೆಟ್‌ನಲ್ಲಿ ವಿಕೆಟ್‌ ಕೀಪರ್‌ ಆಗಿ ಮಿಂಚಿದ ಶ್ವಾನ; ವೈರಲ್‌ ಆಯ್ತು ವಿಡಿಯೋ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೀಗೆ ಹಾವು ಹಿಡಿಯುವುದು ಅಪಾಯಕಾರಿ, ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿʼ ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಅವೈಜ್ಞಾನಿಕ ರೀತಿಯಲ್ಲಿ ಹಾವನ್ನು ಹಿಡಿಯುವುದು ಸರಿಯಲ್ಲʼ ಎಂಬ ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಹಾವು ಹಿಡಿದ ರೀತಿ ಸರಿ ಇಲ್ಲ. ಅಷ್ಟು ನೋವು ಕೊಟ್ಟು ಹಾವನ್ನು ರಕ್ಷಣೆ ಮಾಡೋ ಬದಲು, ಅದು ತನ್ನ ಪಾಡಿಗೆ ಅಲ್ಲಿಂದ ಹೋಗುವವರೆಗೆ ಸುಮ್ಮನಿರಬೇಕಿತ್ತುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Fri, 18 July 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!